Advertisement
MIRROR FOCUS

ಗ್ರಾಹಕರ ಗಗನಕುಸುಮವಾಗುತ್ತಿರುವ ಚಿನ್ನ| ಐತಿಹಾಸಿಕ ದಾಖಲೆ ಬರೆದ ಚಿನ್ನದ ಬೆಲೆ | 67 ಸಾವಿರಕ್ಕೆ ಏರಿದ ಬಂಗಾರದ ರೇಟ್

Share

ಮದುವೆ ಸೀಜನ್‌(Marriage Season) ಆರಂಭವಾಗುತ್ತಿದೆ. ಚಿನ್ನ(Gold) ಕೊಳ್ಳುವ ಸಂಭ್ರಮ ಒಂದೆಡೆಯಾದರೆ, ಗಗನಕ್ಕೇರುತ್ತಿರುವ ಚಿನ್ನದ ಬೆಲೆ(Gold price) ಎಲ್ಲರನ್ನು ಚಿಂತೆಗೀಡು ಮಾಡಿದೆ. ಮದುವೆಗೆ ಚಿನ್ನ ಕೊಳ್ಳಲೇಬೇಕಾದ ಅನಿವಾರ್ಯ. ಆದರೆ ಬೆಲೆ ಕೇಳಿದ್ರೆ ಶಾಕ್‌ ಆಗುವಂತಿದೆ. ಸದ್ಯ ಚಿನ್ನದ ಬೆಲೆ ಎಲ್ಲಾ ರೆರ್ಕಾಡ್‍ಗಳನ್ನ ಬ್ರೇಕ್ (Record break)ಮಾಡಿದೆ. ಬಡವರು ಹಾಗೂ ಮಧ್ಯಮ ಪಾಲಿನ ಜನರಿಗೆ ಗಗನ ಕುಸುಮವಾಗಿದೆ. ಭಾನುವಾರ ಬಂಗಾರದ ರೇಟ್ (Gold & Silver Rate) ಚಿನಿವಾರಪೇಟೆಯ ಇತಿಹಾಸದಲ್ಲೇ ದಾಖಲೆಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಚಿನ್ನದ ಬೆಲೆ 67 ಸಾವಿರದ ಗಡಿ ದಾಟಿದ್ದು, ಬೆಳ್ಳಿ 75 ಸಾವಿರವನ್ನು ಕ್ರಾಸ್ ಮಾಡಿದೆ.

ಇದೊಂದು ಆಲ್ ಟೈಮ್ ಹೈಯೆಸ್ಟ್ ರೆರ್ಕಾಡ್ ಆಗಿದೆ. ಬಂಗಾರ ಯಾವತ್ತೂ ಈ ರೇಟ್‍ಗೆ ತಲುಪಿರಲಿಲ್ಲ. ಮುಂದಿನ ತಿಂಗಳಿನಿಂದ ಮದುವೆ ಸೀಜನ್ ಇದ್ದು, ಅಕ್ಷಯ ತೃತೀಯಕ್ಕೂ ಚಿನ್ನಕ್ಕೆ ಡಿಮ್ಯಾಂಡ್ ಇರೋದ್ರಿಂದ ಈ ರೇಟ್ ಇದೇ ತರಹ ಮುಂದುವರಿಯಬಹುದು ಎಂದು ಜ್ಯುವೆಲ್ಲರಿ ಅಸೋಸಿಯೇಷನ್ ಖಜಾಂಚಿ ರವಿಕುಮಾರ್ ಹೇಳುತ್ತಾರೆ.

ದರ ಏರಿಕೆಗೆ ಕಾರಣಗಳೇನು?: ಡಾಲರ್ ದುರ್ಬಲವಾಗಿರೋದು. ಹೂಡಿಕೆದಾರರು ಭಾರಿ ಪ್ರಮಾಣದಲ್ಲಿ ಬಂಗಾರದ ಮೇಲೆ ಇನ್ವೆಸ್ಟ್ ಮಾಡ್ತಾ ಇರೋದು ಚಿನ್ನದ ಪೂರೈಕೆಗಿಂತ ಡಿಮ್ಯಾಂಡ್ ಹೆಚ್ಚಾಗಿದೆ. ಶುಭ ಸಮಾರಂಭಗಳ ಹೊತ್ತಲ್ಲಿ ಬಂಗಾರದ ಬೆಲೆ ಏರಿಕೆಯಾಗಿರೋದು ಗ್ರಾಹಕರಲ್ಲಿ ಆತಂಕ ತಂದಿದೆ. ಮದುವೆಗೆ ಆಭರಣಗಳನ್ನು ಮಾಡಿಸೋದು ಹೇಗೆ ಅಂತಾ ಚಿಂತಿತರಾಗಿದ್ದಾರೆ. ಒಟ್ಟಿನಲ್ಲಿ ಚಿನ್ನದ ರೇಟ್ ಮತ್ತಷ್ಟು ಗಗನಕ್ಕೆ ಏರುವ ಸಾಧ್ಯತೆ ಇದೆ. ಆರ್ಥಿಕ ಸಂಕಷ್ಟದ ಮಧ್ಯೆ ಗ್ರಾಹಕರಿಗೆ ಮತ್ತೊಂದು ಬರೆ ಬಿದ್ದಿದೆ.

– ಅಂತರ್ಜಾಲ ಮಾಹಿತಿ

Gold price has broken all records. The sky is bleak for the poor and the middle class. On Sunday, Gold & Silver Rate rose to record levels in the history of Chinivarpet. Gold price has crossed 67 thousand and silver has crossed 75 thousand.
 
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

6 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

8 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

10 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

11 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

23 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

1 day ago