Advertisement
MIRROR FOCUS

ಗ್ರಾಹಕರ ಗಗನಕುಸುಮವಾಗುತ್ತಿರುವ ಚಿನ್ನ| ಐತಿಹಾಸಿಕ ದಾಖಲೆ ಬರೆದ ಚಿನ್ನದ ಬೆಲೆ | 67 ಸಾವಿರಕ್ಕೆ ಏರಿದ ಬಂಗಾರದ ರೇಟ್

Share

ಮದುವೆ ಸೀಜನ್‌(Marriage Season) ಆರಂಭವಾಗುತ್ತಿದೆ. ಚಿನ್ನ(Gold) ಕೊಳ್ಳುವ ಸಂಭ್ರಮ ಒಂದೆಡೆಯಾದರೆ, ಗಗನಕ್ಕೇರುತ್ತಿರುವ ಚಿನ್ನದ ಬೆಲೆ(Gold price) ಎಲ್ಲರನ್ನು ಚಿಂತೆಗೀಡು ಮಾಡಿದೆ. ಮದುವೆಗೆ ಚಿನ್ನ ಕೊಳ್ಳಲೇಬೇಕಾದ ಅನಿವಾರ್ಯ. ಆದರೆ ಬೆಲೆ ಕೇಳಿದ್ರೆ ಶಾಕ್‌ ಆಗುವಂತಿದೆ. ಸದ್ಯ ಚಿನ್ನದ ಬೆಲೆ ಎಲ್ಲಾ ರೆರ್ಕಾಡ್‍ಗಳನ್ನ ಬ್ರೇಕ್ (Record break)ಮಾಡಿದೆ. ಬಡವರು ಹಾಗೂ ಮಧ್ಯಮ ಪಾಲಿನ ಜನರಿಗೆ ಗಗನ ಕುಸುಮವಾಗಿದೆ. ಭಾನುವಾರ ಬಂಗಾರದ ರೇಟ್ (Gold & Silver Rate) ಚಿನಿವಾರಪೇಟೆಯ ಇತಿಹಾಸದಲ್ಲೇ ದಾಖಲೆಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಚಿನ್ನದ ಬೆಲೆ 67 ಸಾವಿರದ ಗಡಿ ದಾಟಿದ್ದು, ಬೆಳ್ಳಿ 75 ಸಾವಿರವನ್ನು ಕ್ರಾಸ್ ಮಾಡಿದೆ.

ಇದೊಂದು ಆಲ್ ಟೈಮ್ ಹೈಯೆಸ್ಟ್ ರೆರ್ಕಾಡ್ ಆಗಿದೆ. ಬಂಗಾರ ಯಾವತ್ತೂ ಈ ರೇಟ್‍ಗೆ ತಲುಪಿರಲಿಲ್ಲ. ಮುಂದಿನ ತಿಂಗಳಿನಿಂದ ಮದುವೆ ಸೀಜನ್ ಇದ್ದು, ಅಕ್ಷಯ ತೃತೀಯಕ್ಕೂ ಚಿನ್ನಕ್ಕೆ ಡಿಮ್ಯಾಂಡ್ ಇರೋದ್ರಿಂದ ಈ ರೇಟ್ ಇದೇ ತರಹ ಮುಂದುವರಿಯಬಹುದು ಎಂದು ಜ್ಯುವೆಲ್ಲರಿ ಅಸೋಸಿಯೇಷನ್ ಖಜಾಂಚಿ ರವಿಕುಮಾರ್ ಹೇಳುತ್ತಾರೆ.

ದರ ಏರಿಕೆಗೆ ಕಾರಣಗಳೇನು?: ಡಾಲರ್ ದುರ್ಬಲವಾಗಿರೋದು. ಹೂಡಿಕೆದಾರರು ಭಾರಿ ಪ್ರಮಾಣದಲ್ಲಿ ಬಂಗಾರದ ಮೇಲೆ ಇನ್ವೆಸ್ಟ್ ಮಾಡ್ತಾ ಇರೋದು ಚಿನ್ನದ ಪೂರೈಕೆಗಿಂತ ಡಿಮ್ಯಾಂಡ್ ಹೆಚ್ಚಾಗಿದೆ. ಶುಭ ಸಮಾರಂಭಗಳ ಹೊತ್ತಲ್ಲಿ ಬಂಗಾರದ ಬೆಲೆ ಏರಿಕೆಯಾಗಿರೋದು ಗ್ರಾಹಕರಲ್ಲಿ ಆತಂಕ ತಂದಿದೆ. ಮದುವೆಗೆ ಆಭರಣಗಳನ್ನು ಮಾಡಿಸೋದು ಹೇಗೆ ಅಂತಾ ಚಿಂತಿತರಾಗಿದ್ದಾರೆ. ಒಟ್ಟಿನಲ್ಲಿ ಚಿನ್ನದ ರೇಟ್ ಮತ್ತಷ್ಟು ಗಗನಕ್ಕೆ ಏರುವ ಸಾಧ್ಯತೆ ಇದೆ. ಆರ್ಥಿಕ ಸಂಕಷ್ಟದ ಮಧ್ಯೆ ಗ್ರಾಹಕರಿಗೆ ಮತ್ತೊಂದು ಬರೆ ಬಿದ್ದಿದೆ.

– ಅಂತರ್ಜಾಲ ಮಾಹಿತಿ

Gold price has broken all records. The sky is bleak for the poor and the middle class. On Sunday, Gold & Silver Rate rose to record levels in the history of Chinivarpet. Gold price has crossed 67 thousand and silver has crossed 75 thousand.
 
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

19 hours ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

20 hours ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

1 day ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

1 day ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

1 day ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

2 days ago