Advertisement
MIRROR FOCUS

ಮುಂದುವರಿದ ಅಡಿಕೆ ಕಳ್ಳಸಾಗಾಣಿಕೆ | 2.5 ಕೋಟಿ ಮೌಲ್ಯದ ಅಡಿಕೆ ವಶಪಡಿಸಿಕೊಂಡಿಸಿಕೊಂಡ ಗಡಿಭದ್ರತಾ ಪಡೆ | 4 ಮಹಿಳೆಯರ ಸಹಿತ 6 ಜನರ ವಶಕ್ಕೆ ಪಡೆದ ಅಧಿಕಾರಿಗಳು |

Share

ಅಸ್ಸಾಂ ರೈಫಲ್ಸ್ ಮತ್ತೊಂದು ಕಳ್ಳಸಾಗಣೆ ಯತ್ನವನ್ನು ವಿಫಲಗೊಳಿಸಿದೆ ಮತ್ತು ಮೂರು ದಿನಗಳ ಅವಧಿಯಲ್ಲಿ ಮಣಿಪುರದ ತೆಂಗ್ನೌಪಾಲ್ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಅಡಿಕೆಯನ್ನು ವಶಪಡಿಸಿಕೊಂಡಿದೆ. ಕಳೆದೊಂದು ವಾರದಿಂದ ಈಶಾನ್ಯ ರಾಜ್ಯದ ಮೂಲಕ ಅಡಿಕೆ ಕಳ್ಳಸಾಗಾಣಿಕೆಗೆ ಸತತ ಪ್ರಯತ್ನವಾಗುತ್ತಿದೆ. ಇದುವರೆಗೆ 4 ಪ್ರಕರಣ ಪತ್ತೆಹಚ್ಚಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ 4 ಮಹಿಳೆಯರ ಸಹಿತ 6 ಜನರನ್ನು ವಶಕ್ಕೆ ಪಡೆಯಲಾಗಿದೆ.

ಮಣಿಪುರದ ಮಾಚಿ ಮತ್ತು ಖಂಪಾಂಗ್ ಖುಲ್ಲೆನ್ ಪ್ರದೇಶದಲ್ಲಿ ಎರಡು ಪ್ರತ್ಯೇಕ ಕಾರ್ಯಾಚರಣೆ ನಡೆಸಿದ ಅರೆಸೇನಾ ಪಡೆಯ ಸಿಬಂದಿಗಳು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 2.5 ಕೋಟಿ ಮೌಲ್ಯ ಬೆಲೆಯ 28.2 ಟನ್ ಅಡಿಕೆಯನ್ನು ವಶಪಡಿಸಿಕೊಂಡಿವೆ ಎಂದು ಹೇಳಿದೆ. ಕಾರ್ಯಾಚರಣೆಯ ವೇಳೆ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಆರು ಮಂದಿ ಕಳ್ಳಸಾಗಣೆದಾರರನ್ನು ಬಂಧಿಸಿದ್ದಾರೆ. ವಶಪಡಿಸಿಕೊಂಡ ಅಡಿಕೆಯನ್ನು ಕಸ್ಟಮ್ಸ್ ಇಲಾಖೆಗೆ ಹಸ್ತಾಂತರಿಸಿದೆ.

ಆ.27 ರಂದು ಅಸ್ಸಾಂ ರೈಫಲ್ಸ್‌ನ ಪಡೆಗಳು ಮಣಿಪುರದ ರಾಜ್ಯದ ಚಂದೇಲ್ ಜಿಲ್ಲೆಯಿಂದ ಬೂದು ಮಾರುಕಟ್ಟೆಯಲ್ಲಿ 5.29 ಕೋಟಿ ಮೌಲ್ಯದ 61.2 ಟನ್ ಅಡಿಕೆಯನ್ನು ವಶಪಡಿಸಿಕೊಂಡಿತ್ತು.

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಡಿಕೆ ಕಳ್ಳಸಾಗಣೆಯು ಸತತವಾಗಿ ನಡೆಯುತ್ತಿದೆ. ಮಣಿಪುರ ಮತ್ತು ಮಿಜೋರಾಂನ  ಗಡಿಗಳ ಮೂಲಕ ವ್ಯಾಪಕವಾಗಿ ಅಡಿಕೆ ಕಳ್ಳಸಾಗಾಣಿಕೆ ನಡೆಯುತ್ತಿದೆ. ಇದನ್ನು ಭದ್ರತಾ ಪಡೆಯ ಸಿಬಂದಿಗಳು ಸತತವಾಗಿ ತಡೆಯುತ್ತಿದ್ದಾರೆ. ಈ ಕಳ್ಳಸಾಗಾಣಿಕೆಯ ಅಡಿಕೆಯು ಭಾರತಕ್ಕೆ ಪ್ರವೇಶಿಸಿದ ನಂತರ ದೇಶದ ಇತರ ಭಾಗಗಳಿಗೆ ಸಾಗಿಸಲಾಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ

ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್‌ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…

3 hours ago

ಪೆಟ್ರೋಲಿಯಂಗೆ ಪರ್ಯಾಯದತ್ತ : ಕೃಷಿ ಸಂಪನ್ಮೂಲಗಳಿಂದ ಬಯೋ ಉತ್ಪನ್ನಗಳತ್ತ ಆದ್ಯತೆ

Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…

3 hours ago

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತ ಇಲ್ಲ | ಉತ್ತಮ ದರಕ್ಕಾಗಿ ಓಪನ್‌ ಮಾರ್ಕೆಟ್‌ಗೆ ರೈತರ ಒಲವು

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…

3 hours ago

ರಾಜ್ಯದಲ್ಲಿ ಅಡುಗೆ ಅನಿಲ ಕೊರತೆ ಇಲ್ಲ | ಪ್ರತಿ 25 ದಿನಕ್ಕೊಂದು ಸಿಲಿಂಡರ್‌ ಪೂರೈಕೆ – ಸಚಿವ ಮುನಿಯಪ್ಪ ಭರವಸೆ

ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…

3 hours ago

ಅಡಿಕೆ ಬೆಳೆಗಾರರಿಗೆ ಎಚ್ಚರಿಕೆ | ರೋಗ ನಿರ್ವಹಣೆ ತಪ್ಪಿದರೆ ಇಳುವರಿ ಕುಸಿತ..! – ಅಡಿಕೆ ಸಮೀಕ್ಷೆ ವರದಿ

ಅಡಿಕೆ ಇಳುವರಿ ಕುಸಿತಕ್ಕೆ ಎಲೆಚುಕ್ಕೆ, ಕೊಳೆ ರೋಗ ಹಾಗೂ ಹವಾಮಾನ ವೈಪರೀತ್ಯ ಪ್ರಮುಖ…

3 hours ago

ಬಿಸಿ ಆಹಾರ ಪಾರ್ಸೆಲ್‌ಗೆ ಪ್ಲಾಸ್ಟಿಕ್‌, ಪತ್ರಿಕೆ ನಿಷೇಧ…! : ಸಾರ್ವಜನಿಕ ಧೂಮಪಾನಕ್ಕೆ ₹1000 ದಂಡ ಎಚ್ಚರಿಕೆ

ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್‌ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…

13 hours ago