ಅಸ್ಸಾಂ ರೈಫಲ್ಸ್ ಮತ್ತೊಂದು ಕಳ್ಳಸಾಗಣೆ ಯತ್ನವನ್ನು ವಿಫಲಗೊಳಿಸಿದೆ ಮತ್ತು ಮೂರು ದಿನಗಳ ಅವಧಿಯಲ್ಲಿ ಮಣಿಪುರದ ತೆಂಗ್ನೌಪಾಲ್ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಅಡಿಕೆಯನ್ನು ವಶಪಡಿಸಿಕೊಂಡಿದೆ. ಕಳೆದೊಂದು ವಾರದಿಂದ ಈಶಾನ್ಯ ರಾಜ್ಯದ ಮೂಲಕ ಅಡಿಕೆ ಕಳ್ಳಸಾಗಾಣಿಕೆಗೆ ಸತತ ಪ್ರಯತ್ನವಾಗುತ್ತಿದೆ. ಇದುವರೆಗೆ 4 ಪ್ರಕರಣ ಪತ್ತೆಹಚ್ಚಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ 4 ಮಹಿಳೆಯರ ಸಹಿತ 6 ಜನರನ್ನು ವಶಕ್ಕೆ ಪಡೆಯಲಾಗಿದೆ.
ಮಣಿಪುರದ ಮಾಚಿ ಮತ್ತು ಖಂಪಾಂಗ್ ಖುಲ್ಲೆನ್ ಪ್ರದೇಶದಲ್ಲಿ ಎರಡು ಪ್ರತ್ಯೇಕ ಕಾರ್ಯಾಚರಣೆ ನಡೆಸಿದ ಅರೆಸೇನಾ ಪಡೆಯ ಸಿಬಂದಿಗಳು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 2.5 ಕೋಟಿ ಮೌಲ್ಯ ಬೆಲೆಯ 28.2 ಟನ್ ಅಡಿಕೆಯನ್ನು ವಶಪಡಿಸಿಕೊಂಡಿವೆ ಎಂದು ಹೇಳಿದೆ. ಕಾರ್ಯಾಚರಣೆಯ ವೇಳೆ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಆರು ಮಂದಿ ಕಳ್ಳಸಾಗಣೆದಾರರನ್ನು ಬಂಧಿಸಿದ್ದಾರೆ. ವಶಪಡಿಸಿಕೊಂಡ ಅಡಿಕೆಯನ್ನು ಕಸ್ಟಮ್ಸ್ ಇಲಾಖೆಗೆ ಹಸ್ತಾಂತರಿಸಿದೆ.
ಆ.27 ರಂದು ಅಸ್ಸಾಂ ರೈಫಲ್ಸ್ನ ಪಡೆಗಳು ಮಣಿಪುರದ ರಾಜ್ಯದ ಚಂದೇಲ್ ಜಿಲ್ಲೆಯಿಂದ ಬೂದು ಮಾರುಕಟ್ಟೆಯಲ್ಲಿ 5.29 ಕೋಟಿ ಮೌಲ್ಯದ 61.2 ಟನ್ ಅಡಿಕೆಯನ್ನು ವಶಪಡಿಸಿಕೊಂಡಿತ್ತು.
ಮ್ಯಾನ್ಮಾರ್ನಿಂದ ಭಾರತಕ್ಕೆ ಅಡಿಕೆ ಕಳ್ಳಸಾಗಣೆಯು ಸತತವಾಗಿ ನಡೆಯುತ್ತಿದೆ. ಮಣಿಪುರ ಮತ್ತು ಮಿಜೋರಾಂನ ಗಡಿಗಳ ಮೂಲಕ ವ್ಯಾಪಕವಾಗಿ ಅಡಿಕೆ ಕಳ್ಳಸಾಗಾಣಿಕೆ ನಡೆಯುತ್ತಿದೆ. ಇದನ್ನು ಭದ್ರತಾ ಪಡೆಯ ಸಿಬಂದಿಗಳು ಸತತವಾಗಿ ತಡೆಯುತ್ತಿದ್ದಾರೆ. ಈ ಕಳ್ಳಸಾಗಾಣಿಕೆಯ ಅಡಿಕೆಯು ಭಾರತಕ್ಕೆ ಪ್ರವೇಶಿಸಿದ ನಂತರ ದೇಶದ ಇತರ ಭಾಗಗಳಿಗೆ ಸಾಗಿಸಲಾಗುತ್ತದೆ.
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…