Advertisement
MIRROR FOCUS

ಮುಂದುವರಿದ ಅಡಿಕೆ ಕಳ್ಳಸಾಗಾಣಿಕೆ | 2.5 ಕೋಟಿ ಮೌಲ್ಯದ ಅಡಿಕೆ ವಶಪಡಿಸಿಕೊಂಡಿಸಿಕೊಂಡ ಗಡಿಭದ್ರತಾ ಪಡೆ | 4 ಮಹಿಳೆಯರ ಸಹಿತ 6 ಜನರ ವಶಕ್ಕೆ ಪಡೆದ ಅಧಿಕಾರಿಗಳು |

Share

ಅಸ್ಸಾಂ ರೈಫಲ್ಸ್ ಮತ್ತೊಂದು ಕಳ್ಳಸಾಗಣೆ ಯತ್ನವನ್ನು ವಿಫಲಗೊಳಿಸಿದೆ ಮತ್ತು ಮೂರು ದಿನಗಳ ಅವಧಿಯಲ್ಲಿ ಮಣಿಪುರದ ತೆಂಗ್ನೌಪಾಲ್ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಅಡಿಕೆಯನ್ನು ವಶಪಡಿಸಿಕೊಂಡಿದೆ. ಕಳೆದೊಂದು ವಾರದಿಂದ ಈಶಾನ್ಯ ರಾಜ್ಯದ ಮೂಲಕ ಅಡಿಕೆ ಕಳ್ಳಸಾಗಾಣಿಕೆಗೆ ಸತತ ಪ್ರಯತ್ನವಾಗುತ್ತಿದೆ. ಇದುವರೆಗೆ 4 ಪ್ರಕರಣ ಪತ್ತೆಹಚ್ಚಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ 4 ಮಹಿಳೆಯರ ಸಹಿತ 6 ಜನರನ್ನು ವಶಕ್ಕೆ ಪಡೆಯಲಾಗಿದೆ.

ಮಣಿಪುರದ ಮಾಚಿ ಮತ್ತು ಖಂಪಾಂಗ್ ಖುಲ್ಲೆನ್ ಪ್ರದೇಶದಲ್ಲಿ ಎರಡು ಪ್ರತ್ಯೇಕ ಕಾರ್ಯಾಚರಣೆ ನಡೆಸಿದ ಅರೆಸೇನಾ ಪಡೆಯ ಸಿಬಂದಿಗಳು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 2.5 ಕೋಟಿ ಮೌಲ್ಯ ಬೆಲೆಯ 28.2 ಟನ್ ಅಡಿಕೆಯನ್ನು ವಶಪಡಿಸಿಕೊಂಡಿವೆ ಎಂದು ಹೇಳಿದೆ. ಕಾರ್ಯಾಚರಣೆಯ ವೇಳೆ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಆರು ಮಂದಿ ಕಳ್ಳಸಾಗಣೆದಾರರನ್ನು ಬಂಧಿಸಿದ್ದಾರೆ. ವಶಪಡಿಸಿಕೊಂಡ ಅಡಿಕೆಯನ್ನು ಕಸ್ಟಮ್ಸ್ ಇಲಾಖೆಗೆ ಹಸ್ತಾಂತರಿಸಿದೆ.

ಆ.27 ರಂದು ಅಸ್ಸಾಂ ರೈಫಲ್ಸ್‌ನ ಪಡೆಗಳು ಮಣಿಪುರದ ರಾಜ್ಯದ ಚಂದೇಲ್ ಜಿಲ್ಲೆಯಿಂದ ಬೂದು ಮಾರುಕಟ್ಟೆಯಲ್ಲಿ 5.29 ಕೋಟಿ ಮೌಲ್ಯದ 61.2 ಟನ್ ಅಡಿಕೆಯನ್ನು ವಶಪಡಿಸಿಕೊಂಡಿತ್ತು.

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಡಿಕೆ ಕಳ್ಳಸಾಗಣೆಯು ಸತತವಾಗಿ ನಡೆಯುತ್ತಿದೆ. ಮಣಿಪುರ ಮತ್ತು ಮಿಜೋರಾಂನ  ಗಡಿಗಳ ಮೂಲಕ ವ್ಯಾಪಕವಾಗಿ ಅಡಿಕೆ ಕಳ್ಳಸಾಗಾಣಿಕೆ ನಡೆಯುತ್ತಿದೆ. ಇದನ್ನು ಭದ್ರತಾ ಪಡೆಯ ಸಿಬಂದಿಗಳು ಸತತವಾಗಿ ತಡೆಯುತ್ತಿದ್ದಾರೆ. ಈ ಕಳ್ಳಸಾಗಾಣಿಕೆಯ ಅಡಿಕೆಯು ಭಾರತಕ್ಕೆ ಪ್ರವೇಶಿಸಿದ ನಂತರ ದೇಶದ ಇತರ ಭಾಗಗಳಿಗೆ ಸಾಗಿಸಲಾಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 19-07-2026 | ಜುಲೈ 20 ರಿಂದ ಮಳೆ ಇಳಿಮುಖ…! ಕರಾವಳಿ–ಮಲೆನಾಡಿನಲ್ಲಿ ಮಾತ್ರ ಅಲ್ಲಲ್ಲಿ ಮಳೆ ಮುಂದುವರಿಕೆ

ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…

5 hours ago

ಹಲಸಿನ ಬೀಜದ ಸಿಪ್ಪೆಯಿಂದ ಕೈಗಾರಿಕಾ ಬಳಕೆಯ ಸೆಲ್ಯುಲೋಸ್..! ರೈತರಿಗೆ ಮೌಲ್ಯವರ್ಧನೆಯ ಹೊಸ ಅವಕಾಶ

ಹಲಸಿನ ಬೀಜದ ಸಿಪ್ಪೆಯಿಂದ ಮೈಕ್ರೋಕ್ರಿಸ್ಟಲೈನ್ ಸೆಲ್ಯುಲೋಸ್ ಉತ್ಪಾದಿಸುವಲ್ಲಿ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ. ಕೃಷಿ ತ್ಯಾಜ್ಯವನ್ನು…

10 hours ago

ಅಪ್ಪ ಯಾಕೆ ವಿಚಿತ್ರವಾಗಿ ಕಾಣುತ್ತಾನೆ?

ಬಾಲ್ಯದಲ್ಲಿ ಕಠೋರನಂತೆ ಕಾಣುವ ಅಪ್ಪನ ನಿಜವಾದ ಪ್ರೀತಿ ಮತ್ತು ತ್ಯಾಗ ನಮ್ಮ ಬದುಕಿನ…

10 hours ago

ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ | ಜುಲೈ 21ರಂದು ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗೆ ನೇರ ಸಂದರ್ಶನ

ಕ್ಯಾಲಿಬರ್ ಕಂಪೆನಿ ವತಿಯಿಂದ ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗಳಿಗೆ ಜುಲೈ…

21 hours ago

ಜುಲೈ 31 ರೊಳಗೆ ಬೆಳೆವಿಮೆ ನೋಂದಣಿ ಮಾಡಿಸಿಕೊಳ್ಳಿ – ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ಅವಕಾಶ

ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರಿಗೆ ಹವಾಮಾನ ಆಧಾರಿತ ಬೆಳೆವಿಮೆ…

22 hours ago

ಕರಾವಳಿ–ಹವಾಮಾನ ವರದಿ | 18-07-2026 | ಮಲೆನಾಡಿನಲ್ಲಿ ಇನ್ನೂ 10 ದಿನ ಮಳೆ ಮುಂದುವರಿಕೆ…! ಉತ್ತರ ಒಳನಾಡಿನಲ್ಲಿ ಜುಲೈ 19 ರಿಂದ ಮಳೆ ಇಳಿಮುಖ

ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ…

1 day ago