Advertisement
MIRROR FOCUS

ಮುಂದುವರಿದ ಮಳೆಯ ಅಬ್ಬರ | ಮಲೆನಾಡು ತಪ್ಪಲು ಪ್ರದೇಶದಲ್ಲಿ ದಾಖಲೆ ಮಳೆ |

Share

ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆ ಮುಂದುವರಿದಿದೆ. ಕಳೆದ 24 ಗಂಟೆಯಲ್ಲಿ ಮಲೆನಾಡು ತಪ್ಪಲು ಪ್ರದೇಶದಲ್ಲಿ 100 ಮಿಮೀಗಿಂತಲೂ ಅಧಿಕ ಮಳೆಯಾಗಿದೆ. ಸತತ ಮೂರನೇ ದಿನವೂ ಭಾರೀ ಮಳೆ ಮುಂದುವರಿದಿದೆ. 

ಮಲೆನಾಡು -ಕೊಡಗು ಭಾಗದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಕಳೆದ 24 ಗಂಟೆಯಲ್ಲಿ ಮಲೆನಾಡು ತಪ್ಪಲು ಭಾಗವಾದ ಕೊಲ್ಲಮೊಗ್ರದಲ್ಲಿ 139 ಮಿಮೀ,ಬಾಳುಗೋಡು 162 ಮಿಮೀ, ಮಡಪ್ಪಾಡಿ 167ಮಿಮೀ, ಸುಬ್ರಹ್ಮಣ್ಯ 114 ಮಿಮೀ,ಬಳ್ಪ 128 ಮಿಮೀ, ಉಬರಡ್ಕ 178ಮಿಮೀ, ಚೆಂಬು 136 ಮಿಮೀ, ಬೆಳ್ಳಾರೆ 130 ಮಿಮೀ, ಕೋಡಿಂಬಾಳ 124 ಮಿಮೀ, , ಐವರ್ನಾಡು 162 ಮಿಮೀ, ಬೆಳ್ತಂಗಡಿ 155 ಮಿಮೀ, ಬಾಳಿಲ 133 ಮಿಮೀ,   ಪುತ್ತೂರು 115ಮಿಮೀ,  ಕಲ್ಲಗುಂಡಿ ಸಂಪಾಜೆ 132ಮಿಮೀ, ಬಜಗೋಳಿ 227ಮಿಮೀ, , ಸುಳ್ಯ 142 ಮಿಮೀ ಮಳೆಯಾಗಿದೆ. ಮಲೆನಾಡು ಭಾಗದಲ್ಲಿ ಕಳೆದ 3 ದಿನಗಳಲ್ಲಿ 300 ಮಿಮೀಗಿಂತಲೂ ಅಧಿಕ ಮಳೆಯಾಗಿದೆ. ಇದು ಕೃಷಿಕರೇ ಮಳೆದಾಖಲು ಮಾಡುವ ಗುಂಪಿನ ಮಾಹಿತಿ.

ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಶುಕ್ರವಾರ ಜೋರಾದ ಗಾಳಿಯೊಂದಿಗೆ ಅತ್ಯಧಿಕ ಮಳೆ, ಹಾಗೂ ಕರಾವಳಿ ಜಿಲ್ಲೆಗಳಿಗೆ ನಾಳೆ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಜೋರಾದ ಗಾಳಿಯೊಂದಿಗೆ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಆರೆಂಜ್ಅಲರ್ಟ್ ನೀಡಲಾಗಿದೆ, ಜುಲೈ 21 ರಿಂದ 23 ರವರೆಗೆ ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡು ಜಿಲ್ಲೆಗಳಿಗೆ, ಜುಲೈ 19 ರಿಂದ 23 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡು ಮತ್ತು ಕರಾವಳಿ ಭಾಗದಲ್ಲಂತೂ ವರುಣ ಅಬ್ಬರ ಜೋರಾಗಿದ್ದು, ಗುಡ್ಡ ಕುಸಿತ, ಮತ್ತೊಂದೆಡೆ ಹಳ್ಳ- ಕೊಳ್ಳ, ನದಿಗಳು ಉಕ್ಕಿ ಹರಿಯುತ್ತಿವೆ. ನಿರಂತರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ತಗ್ಗು ಪ್ರದೇಶದಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಮಳೆ ಇನ್ನೂ ಜು‌. 24 ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Persistent rainfall persists in coastal and Malenadu regions. Over 100 mm of precipitation has been recorded in the Malenadu areas. The meteorological department predicts that heavy rainfall will continue for the next four days.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

4 minutes ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

9 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

10 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

14 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

14 hours ago

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

1 day ago