ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕಳೆದ ಎರಡು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ಸತತ ಮಳೆಯಿಂದಾಗಿ ಜಿಲ್ಲೆಯ ಜೀವನದಿಗಳಾದ ನೇತ್ರಾವತಿ, ಕುಮಾರಾಧಾರ, ಫಲ್ಗುಣಿ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ಭಾರೀ ಗಾಳಿ ಮಳೆಯ ಪರಿಣಾಮವಾಗಿ ಮಂಗಳೂರು ನಗರದ ಹಲವೆಡೆ ಮರಗಳು ಧರೆಗುರುಳಿವೆ. ಬಜಪೆ ಸಮೀಪದ ಅದ್ಯಪಾಡಿ ಎಂಬಲ್ಲಿ ಗುಡ್ಡ ಕುಸಿತ ಉಂಟಾಗಿ ಸ್ಥಳೀಯ ನಿವಾಸಿಯೊಬ್ಬರ ಮನೆಯಂಗಳದಲ್ಲಿ ಮಣ್ಣು ತುಂಬಿ ಆತಂಕಕ್ಕೆ ಕಾರಣವಾಗಿತ್ತು. ಮಳೆ ಇನ್ನಷ್ಟು ಜೋರಾದರೆ ನಗರದ ಕೊಟ್ಟಾರ, ಮಾಲೆಮಾರ್, ಜಪ್ಪಿನಮೊಗರು ವ್ಯಾಪ್ತಿಯಲ್ಲಿ ಕೃತಕ ನೆರೆ ಉಂಟಾಗಿ ಮನೆಗಳಿಗೆ ನೀರು ನುಗ್ಗುವ ಭೀತಿ ಎದುರಾಗಿದೆ.
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…
ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…
ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…
ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…