ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕಳೆದ ಎರಡು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ಸತತ ಮಳೆಯಿಂದಾಗಿ ಜಿಲ್ಲೆಯ ಜೀವನದಿಗಳಾದ ನೇತ್ರಾವತಿ, ಕುಮಾರಾಧಾರ, ಫಲ್ಗುಣಿ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ಭಾರೀ ಗಾಳಿ ಮಳೆಯ ಪರಿಣಾಮವಾಗಿ ಮಂಗಳೂರು ನಗರದ ಹಲವೆಡೆ ಮರಗಳು ಧರೆಗುರುಳಿವೆ. ಬಜಪೆ ಸಮೀಪದ ಅದ್ಯಪಾಡಿ ಎಂಬಲ್ಲಿ ಗುಡ್ಡ ಕುಸಿತ ಉಂಟಾಗಿ ಸ್ಥಳೀಯ ನಿವಾಸಿಯೊಬ್ಬರ ಮನೆಯಂಗಳದಲ್ಲಿ ಮಣ್ಣು ತುಂಬಿ ಆತಂಕಕ್ಕೆ ಕಾರಣವಾಗಿತ್ತು. ಮಳೆ ಇನ್ನಷ್ಟು ಜೋರಾದರೆ ನಗರದ ಕೊಟ್ಟಾರ, ಮಾಲೆಮಾರ್, ಜಪ್ಪಿನಮೊಗರು ವ್ಯಾಪ್ತಿಯಲ್ಲಿ ಕೃತಕ ನೆರೆ ಉಂಟಾಗಿ ಮನೆಗಳಿಗೆ ನೀರು ನುಗ್ಗುವ ಭೀತಿ ಎದುರಾಗಿದೆ.
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…