#Agriculture | 11 ಗಂಟೆಯಲ್ಲಿ ನಿರಂತರ 18 ಎಕರೆ ಭೂಮಿ ಉಳುಮೆ | ತನ್ನ ಜೋಡೆತ್ತುಗಳೊಂದಿಗೆ ರೈತನ ವಿಶೇಷ ದಾಖಲೆ |

July 20, 2023
11:48 AM
ಮಳೆಯಾಗದೆ ಅನೇಕ ರೈತರು ಉಳುಮೆ ಮಾಡಿಲ್ಲ. ಇದೀಗ ಮಳೆಯಾಗುತ್ತಿದೆ ಎನ್ನುವ ಹಂತದಲ್ಲಿ ರೈತರದು ಸವಾಲಿನ ಕೆಲಸ . ಕೃಷಿ ಕಾಯಕ ಎಂದರೆ ಹೀಗೇ. ಇದಕ್ಕೊಂದು ನಿದರ್ಶನ ರೈತ ಯಂಕಪ್ಪ. ಇವರು ನಿರಂತರವಾಗಿ ಉಳುಮೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

ಈ ಬಾರಿ ಮುಂಗಾರು ಉತ್ತರ ಕರ್ನಾಟಕದ ಕಡೆ ಇನ್ನೂ ಮಳೆ ಸರಿಯಾಗಿ ಆಗಿಲ್ಲ. ಅದರಲ್ಲೂ ಬಯಲು ಸೀಮೆ ಜಿಲ್ಲೆಗಳಾದ ರಾಯಚೂರು, ಕಲಬುರಗಿ, ಬಿಜಾಪುರ, ಯಾದಗಿರಿ ಕಡೆ ರೈತರು ಮಳೆರಾಯನಿಗಾಗಿ ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದಾರೆ. ಮಳೆ ಬಾರದಿದ್ದರೆ ಬೆಳೆ ಇಲ್ಲ. ಬೆಳೆ ಇಲ್ಲದಿದ್ದರೆ ಜೀವನವೇ ದುಸ್ತರವಾಗಲಿದೆ.

ಮಳೆಯಾಗದೆ ಇರುವ ಹಿನ್ನೆಲೆಯಲ್ಲಿ ರೈತ ಯಂಕಪ್ಪ ಎಂಬುವವರು ವಿಶೇಷ ಪ್ರಯತ್ನ ಕೈಗೊಂಡಿದ್ದಾರೆ. ರೈತ ಯಂಕಪ್ಪ  ಅವರ  ಜೋಡೆತ್ತುಗಳ ಸಹಕಾರದಿಂದ ಈ ಸಾಧನೆಯನ್ನು ಮಾಡಿದ್ದಾರೆ. ಮನುಷ್ಯರು ಗಿನ್ನಿಸ್ ರೆಕಾರ್ಡ್ ಗಾಗಿ ಏನೇನೋ ಮಾಡೋದನ್ನು ಕೇಳಿದ್ದೀವಿ. ಆದರೆ ಇಲ್ಲಿ ಜೋಡೆತ್ತುಗಳನ್ನು ಬಳಸಿಕೊಂಡು ಈ ರೈತ ದಾಖಲೆಯನ್ನು ಮಾಡಿದ್ದಾರೆ. ಈ  ಸಾಧನೆಗೆ ಗ್ರಾಮಸ್ಥರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. 11 ಗಂಟೆಯಲ್ಲಿ 18 ಎಕರೆಯ ಕೃಷಿ ಭೂಮಿಯನ್ನು ನಿರಂತರವಾಗಿ ಉಳುಮೆ ಮಾಡಿ ಜೋಡೆತ್ತುಗಳೊಂದಿಗೆ ದಾಖಲೆಯೊಂದನ್ನು ಸೃಷ್ಟಿಸಿದ್ದಾರೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಮೂಷ್ಟುರು ಗ್ರಾಮದ ಜೋಡೆತ್ತುಗಳು ಹೊಸ ದಾಖಲೆ ಬರೆದಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ |13-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಜೋರು ಮಳೆ ಇಲ್ಲ
July 13, 2026
2:42 PM
by: ಸಾಯಿಶೇಖರ್ ಕರಿಕಳ
ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?
July 13, 2026
7:17 AM
by: ದ ರೂರಲ್ ಮಿರರ್.ಕಾಂ
16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ
July 12, 2026
9:03 PM
by: ದ ರೂರಲ್ ಮಿರರ್.ಕಾಂ
ಎಲ್‌ ನಿನೊ ಎಫೆಕ್ಟ್‌ – ಮುಂದಿನ ವರ್ಷ ಮತ್ಸ್ಯೋದ್ಯಮಕ್ಕೆ ಸಂಕಷ್ಟ?
July 12, 2026
8:39 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror