ಸುದ್ದಿಗಳು

#Agriculture | 11 ಗಂಟೆಯಲ್ಲಿ ನಿರಂತರ 18 ಎಕರೆ ಭೂಮಿ ಉಳುಮೆ | ತನ್ನ ಜೋಡೆತ್ತುಗಳೊಂದಿಗೆ ರೈತನ ವಿಶೇಷ ದಾಖಲೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಈ ಬಾರಿ ಮುಂಗಾರು ಉತ್ತರ ಕರ್ನಾಟಕದ ಕಡೆ ಇನ್ನೂ ಮಳೆ ಸರಿಯಾಗಿ ಆಗಿಲ್ಲ. ಅದರಲ್ಲೂ ಬಯಲು ಸೀಮೆ ಜಿಲ್ಲೆಗಳಾದ ರಾಯಚೂರು, ಕಲಬುರಗಿ, ಬಿಜಾಪುರ, ಯಾದಗಿರಿ ಕಡೆ ರೈತರು ಮಳೆರಾಯನಿಗಾಗಿ ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದಾರೆ. ಮಳೆ ಬಾರದಿದ್ದರೆ ಬೆಳೆ ಇಲ್ಲ. ಬೆಳೆ ಇಲ್ಲದಿದ್ದರೆ ಜೀವನವೇ ದುಸ್ತರವಾಗಲಿದೆ.

Advertisement
Advertisement

ಮಳೆಯಾಗದೆ ಇರುವ ಹಿನ್ನೆಲೆಯಲ್ಲಿ ರೈತ ಯಂಕಪ್ಪ ಎಂಬುವವರು ವಿಶೇಷ ಪ್ರಯತ್ನ ಕೈಗೊಂಡಿದ್ದಾರೆ. ರೈತ ಯಂಕಪ್ಪ  ಅವರ  ಜೋಡೆತ್ತುಗಳ ಸಹಕಾರದಿಂದ ಈ ಸಾಧನೆಯನ್ನು ಮಾಡಿದ್ದಾರೆ. ಮನುಷ್ಯರು ಗಿನ್ನಿಸ್ ರೆಕಾರ್ಡ್ ಗಾಗಿ ಏನೇನೋ ಮಾಡೋದನ್ನು ಕೇಳಿದ್ದೀವಿ. ಆದರೆ ಇಲ್ಲಿ ಜೋಡೆತ್ತುಗಳನ್ನು ಬಳಸಿಕೊಂಡು ಈ ರೈತ ದಾಖಲೆಯನ್ನು ಮಾಡಿದ್ದಾರೆ. ಈ  ಸಾಧನೆಗೆ ಗ್ರಾಮಸ್ಥರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. 11 ಗಂಟೆಯಲ್ಲಿ 18 ಎಕರೆಯ ಕೃಷಿ ಭೂಮಿಯನ್ನು ನಿರಂತರವಾಗಿ ಉಳುಮೆ ಮಾಡಿ ಜೋಡೆತ್ತುಗಳೊಂದಿಗೆ ದಾಖಲೆಯೊಂದನ್ನು ಸೃಷ್ಟಿಸಿದ್ದಾರೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಮೂಷ್ಟುರು ಗ್ರಾಮದ ಜೋಡೆತ್ತುಗಳು ಹೊಸ ದಾಖಲೆ ಬರೆದಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ

ರಾಮನಗರ ಜಿಲ್ಲೆಯಲ್ಲಿ  ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…

3 hours ago

ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ

ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…

4 hours ago

ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ

ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…

4 hours ago

ಹಾವೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಸುವಂತೆ  ಬೇಡಿಕೆ

ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ  ಪೂರೈಕೆಯಾಗಿದ್ದು,…

5 hours ago

ರಾಜ್ಯಕ್ಕೆ ಅಗತ್ಯ ರಸಗೊಬ್ಬರ ಪೂರೈಸುವಂತೆ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ

ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…

5 hours ago

ಅಮರನಾಥ ಯಾತ್ರೆ ಮುಂದುವರಿಕೆ | 9, 482 ಯಾತ್ರಿಕರಿಂದ ಪೂಜೆ ಸಲ್ಲಿಕೆ | 3.52 ಲಕ್ಷ ತಲುಪಿದ ಭಕ್ತರ ಸಂಖ್ಯೆ

ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ  ಸುಮಾರು…

5 hours ago