ಜ.18 ರಿಂದ ಕಾಮಗಾರಿಗಳನ್ನು ಸ್ಥಗಿತಗೊಳಿಸಿ ಪ್ರತಿಭಟನೆ | ರಾಜ್ಯ ಗುತ್ತಿಗೆದಾರರ ಸಂಘದಿಂದ ನಿರ್ಧಾರ |

January 16, 2023
9:38 PM
ಗುತ್ತಿಗೆದಾರರ ಸಮಸ್ಯೆ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಜನವರಿ 18 ರಿಂದ ಕಾಮಗಾರಿಗಳನ್ನು ಸ್ಥಗಿತಗೊಳಿಸಿ ಪ್ರತಿಭಟನೆ ಹಮ್ಮಿಕೊಂಡಿದೆ.
ಈ ಬಗ್ಗೆ ಮಾಹಿತಿ ನೀಡಿದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ, ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕದ ಸರ್ಕಾರದ ವಿರುದ್ಧ ಹಾಗೂ  ಸರ್ಕಾರ ಬಾಕಿ ಇರಿಸಿಕೊಂಡಿರುವ 25 ಸಾವಿರ ಕೋಟಿ ರೂ.  ಕಾಮಗಾರಿ ಮೊತ್ತವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ಲಂಚ ಕೊಡದ ಕಾರಣಕ್ಕೆ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಿಂದ ಕಾಮಗಾರಿ ಮುಗಿದಿದ್ದರೂ 25 ಸಾವಿರ ಕೋಟಿ ರೂ. ಬಿಡುಗಡೆ ಮಾಡಿಲ್ಲ. ಲೋಕೋಪಯೋಗಿ ಇಲಾಖೆಯಿಂದ 4 ಸಾವಿರ ಕೋಟಿ, ನೀರಾವರಿ ಇಲಾಖೆಯಿಂದ 8 ಸಾವಿರ ಕೋಟಿ ಹಾಗೂ ಬಿಬಿಎಂಪಿಯಿಂದ 3 ಸಾವಿರ ಕೋಟಿ ರೂ. ಬಾಕಿ ಇರಿಸಿಕೊಳ್ಳಲಾಗಿದೆ ಎಂದು ಅವರು ವಿವರಿಸಿದರು.
ಭ್ರಷ್ಟಾಚಾರದ ವಿರುದ್ಧ ನಿರಂತರ ಹೋರಾ ಮಾಡಲಾಗುವುದು. ಗುತ್ತಿಗೆದಾರರಿಂದ ಸಚಿವರು, ಹಿರಿಯ ಅಧಿಕಾರಿಗಳು, ಶಾಸಕರು ಲಂಚ ಕೇಳಿರುವ ಆಡಿಯೋ, ವೀಡಿಯೊ ಹಾಗೂ ಸಂಬಂಧಪಟ್ಟ ದಾಖಲೆಗಳನ್ನು ಜನವರಿ 19ರಂದು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು. ಜನವರಿ 18ರಿಂದ ಕಾಮಗಾರಿ ಸ್ಥಗಿತಗೊಳಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕೆಂಪಣ್ಣ ವಿವರಿಸಿದರು. 20 ಸಾವಿರಕ್ಕೂ ಅಧಿಕ ಗುತ್ತಿಗೆದಾರರು ಪ್ರತಿಭಟನೆಯಲ್ಲಿ ಭಾಗವಹಿಸುವರು ಎಂದು ಅವರು ವಿವರಿಸಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ವಿಶ್ಲೇಷಣೆ

ಸಮಾಜದ ಚರ್ಚೆಯ ಪ್ರತಿಬಿಂಬ

ಇದನ್ನೂ ಓದಿ

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ
ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror