Advertisement
ಸುದ್ದಿಗಳು

ಜ.18 ರಿಂದ ಕಾಮಗಾರಿಗಳನ್ನು ಸ್ಥಗಿತಗೊಳಿಸಿ ಪ್ರತಿಭಟನೆ | ರಾಜ್ಯ ಗುತ್ತಿಗೆದಾರರ ಸಂಘದಿಂದ ನಿರ್ಧಾರ |

Share
ಗುತ್ತಿಗೆದಾರರ ಸಮಸ್ಯೆ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಜನವರಿ 18 ರಿಂದ ಕಾಮಗಾರಿಗಳನ್ನು ಸ್ಥಗಿತಗೊಳಿಸಿ ಪ್ರತಿಭಟನೆ ಹಮ್ಮಿಕೊಂಡಿದೆ.
ಈ ಬಗ್ಗೆ ಮಾಹಿತಿ ನೀಡಿದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ, ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕದ ಸರ್ಕಾರದ ವಿರುದ್ಧ ಹಾಗೂ  ಸರ್ಕಾರ ಬಾಕಿ ಇರಿಸಿಕೊಂಡಿರುವ 25 ಸಾವಿರ ಕೋಟಿ ರೂ.  ಕಾಮಗಾರಿ ಮೊತ್ತವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ಲಂಚ ಕೊಡದ ಕಾರಣಕ್ಕೆ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಿಂದ ಕಾಮಗಾರಿ ಮುಗಿದಿದ್ದರೂ 25 ಸಾವಿರ ಕೋಟಿ ರೂ. ಬಿಡುಗಡೆ ಮಾಡಿಲ್ಲ. ಲೋಕೋಪಯೋಗಿ ಇಲಾಖೆಯಿಂದ 4 ಸಾವಿರ ಕೋಟಿ, ನೀರಾವರಿ ಇಲಾಖೆಯಿಂದ 8 ಸಾವಿರ ಕೋಟಿ ಹಾಗೂ ಬಿಬಿಎಂಪಿಯಿಂದ 3 ಸಾವಿರ ಕೋಟಿ ರೂ. ಬಾಕಿ ಇರಿಸಿಕೊಳ್ಳಲಾಗಿದೆ ಎಂದು ಅವರು ವಿವರಿಸಿದರು.
ಭ್ರಷ್ಟಾಚಾರದ ವಿರುದ್ಧ ನಿರಂತರ ಹೋರಾ ಮಾಡಲಾಗುವುದು. ಗುತ್ತಿಗೆದಾರರಿಂದ ಸಚಿವರು, ಹಿರಿಯ ಅಧಿಕಾರಿಗಳು, ಶಾಸಕರು ಲಂಚ ಕೇಳಿರುವ ಆಡಿಯೋ, ವೀಡಿಯೊ ಹಾಗೂ ಸಂಬಂಧಪಟ್ಟ ದಾಖಲೆಗಳನ್ನು ಜನವರಿ 19ರಂದು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು. ಜನವರಿ 18ರಿಂದ ಕಾಮಗಾರಿ ಸ್ಥಗಿತಗೊಳಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕೆಂಪಣ್ಣ ವಿವರಿಸಿದರು. 20 ಸಾವಿರಕ್ಕೂ ಅಧಿಕ ಗುತ್ತಿಗೆದಾರರು ಪ್ರತಿಭಟನೆಯಲ್ಲಿ ಭಾಗವಹಿಸುವರು ಎಂದು ಅವರು ವಿವರಿಸಿದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ವಿಶ್ಲೇಷಣೆ

ಸಮಾಜದ ಚರ್ಚೆಯ ಪ್ರತಿಬಿಂಬ

Published by
ಮಿರರ್‌ ವಿಶ್ಲೇಷಣೆ

Recent Posts

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

4 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

4 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

21 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

23 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

1 day ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

1 day ago