ದೇಶದ ಆರ್ಥಿಕತೆಗೆ ಕೃಷಿ ಕ್ಷೇತ್ರದ ಕೊಡುಗೆ ಅಪಾರ | ಸರ್ವೇ ಪ್ರಕಾರ ಜಿಡಿಪಿ ದರಕ್ಕೆ ಕೃಷಿ ಕ್ಷೇತ್ರದ ಕೊಡುಗೆ ಶೇ.16 |

February 26, 2025
6:49 AM
ಕೃಷಿ ಕ್ಷೇತ್ರದಲ್ಲಿ ಉದ್ಯೋಗ ಅವಕಾಶ ಸೃಷ್ಠಿಸಲು ಹಾಗೂ ಗ್ರಾಮೀಣ ಪ್ರದೇಶಗಳನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಲು ನಬಾರ್ಡ್ ಸಮರ್ಪಕವಾಗಿ ಶ್ರಮಿಸುತ್ತಿದೆ.

ದೇಶದ ಆರ್ಥಿಕತೆಗೆ ಕೃಷಿ ಕ್ಷೇತ್ರದ ಕೊಡುಗೆ ಅಪಾರವಾಗಿದೆ, 2024-25ರ ಆರ್ಥಿಕ ಸರ್ವೇ ಪ್ರಕಾರ ಜಿಡಿಪಿ ದರಕ್ಕೆ ಶೇ.16 ರಷ್ಟು ಕೊಡುಗೆಯನ್ನು  ಕೃಷಿ ಕ್ಷೇತ್ರ ನೀಡಿದ್ದು, ಗ್ರಾಮೀಣ ಭಾಗದ ಜನರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಠಿಸಿದೆ ಎಂದು ಆರ್.ಬಿ.ಐ ಪ್ರಾದೇಶಿಕ ನಿರ್ದೇಶಕರಾದ ಸೋನಾಲಿ ಸೆನ್ ಗುಪ್ತಾ ಹೇಳಿದರು.………ಮುಂದೆ ಓದಿ……..

ನಬಾರ್ಡ್ ವತಿಯಿಂದ ಆಯೋಜಿಸಿದ್ದ ರಾಜ್ಯ ಸಾಲ ಗೋಷ್ಠಿ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮವನ್ನು ರಾಜ್ಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಉಮಾ ಮಹದೇವನ್  ಬೆಂಗಳೂರಿನಲ್ಲಿ ಉದ್ಘಾಟಿಸಿದರು. ಬಳಿಕ ಅವರು, ರಾಜ್ಯ ಮುನ್ನೋಟ ಪತ್ರ ಹಾಗೂ ಕೃಷಿ ಸಂಬಂಧಿತ ಜೀವ ಎಂಬ ಕಿರುಚಿತ್ರ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ  ನಬಾರ್ಡ್ ನ ಮುಖ್ಯ ಪ್ರಧಾನ ವ್ಯವಸ್ಥಾಪಕ ಕೆ.ವಿ.ಎಸ್.ಎಸ್.ಎಲ್.ವಿ. ಪ್ರಸಾದ್ ರಾವ್,  ಆರ್.ಬಿ.ಐ ಪ್ರಾದೇಶಿಕ ನಿರ್ದೇಶಕರಾದ ಸೋನಾಲಿ ಸೆನ್ ಗುಪ್ತಾ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಪ್ರಧಾನ ವ್ಯವಸ್ಥಾಪಕರಾದ  ಜೋಹಿ ಸ್ಮಿತಾ ಸಿನ್ಹಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಬಳಿಕ ಮಾತನಾಡಿದ ರಾಜ್ಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಉಮಾ ಮಹದೇವನ್ ,   ಕೃಷಿ  ಹಾಗೂ ಗ್ರಾಮೀಣ ಪರಿಸರ ವ್ಯವಸ್ಥೆ ಅಭಿವೃದ್ಧಿಗೊಳಿಸಲು ವಿಚಾರಗೋಷ್ಠಿ ಸಹಕಾರಿಯಾಗಿದೆ, ನಬಾರ್ಡ್ ಸಾಲ ಯೋಜನೆ ಸೇರಿದಂತೆ ಇನ್ನಿತರೆ ಯೋಜನೆಗಳಿಂದ ಕೃಷಿ ಕ್ಷೇತ್ರದ ಅಭಿವೃದ್ಧಿ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸಮರ್ಪಕ ಮೌಲ ಸೌಕರ್ಯಗಳ ಅಭಿವೃದ್ಧಿ ಸಾಧ್ಯವಾಗಿದೆ ಎಂದು ಹೇಳಿದರು.

ನಬಾರ್ಡ್ ನ ಮುಖ್ಯ ಪ್ರಧಾನ ವ್ಯವಸ್ಥಾಪಕ ಕೆ.ವಿ.ಎಸ್.ಎಸ್.ಎಲ್.ವಿ. ಪ್ರಸಾದ್ ರಾವ್ ಮಾತನಾಡಿ , ಕೃಷಿ ಮತ್ತು ಗ್ರಾಮೀಣ ಪ್ರದೇಶಗಳನ್ನು ಅಭಿವೃದ್ಧಿಗೊಳಿಸಲು ನಬಾರ್ಡ್ ಸಾಲ ಯೋಜನೆಗಳು ಸಹಕಾರಿಯಾಗಿವೆ, ಕೃಷಿ ಕ್ಷೇತ್ರದಲ್ಲಿ ಉದ್ಯೋಗ ಅವಕಾಶ ಸೃಷ್ಠಿಸಲು ಹಾಗೂ ಗ್ರಾಮೀಣ ಪ್ರದೇಶಗಳನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಲು ನಬಾರ್ಡ್ ಸಮರ್ಪಕವಾಗಿ ಶ್ರಮಿಸುತ್ತಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!
March 4, 2026
10:20 PM
by: ಮಿರರ್‌ ಡೆಸ್ಕ್
ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!
March 4, 2026
12:01 PM
by: ಮಿರರ್‌ ಡೆಸ್ಕ್
ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ
March 4, 2026
10:56 AM
by: ಮಿರರ್‌ ಡೆಸ್ಕ್
ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ
March 4, 2026
7:27 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror