Advertisement
MIRROR FOCUS

ದೇಶದ ಆರ್ಥಿಕತೆಗೆ ಕೃಷಿ ಕ್ಷೇತ್ರದ ಕೊಡುಗೆ ಅಪಾರ | ಸರ್ವೇ ಪ್ರಕಾರ ಜಿಡಿಪಿ ದರಕ್ಕೆ ಕೃಷಿ ಕ್ಷೇತ್ರದ ಕೊಡುಗೆ ಶೇ.16 |

Share

ದೇಶದ ಆರ್ಥಿಕತೆಗೆ ಕೃಷಿ ಕ್ಷೇತ್ರದ ಕೊಡುಗೆ ಅಪಾರವಾಗಿದೆ, 2024-25ರ ಆರ್ಥಿಕ ಸರ್ವೇ ಪ್ರಕಾರ ಜಿಡಿಪಿ ದರಕ್ಕೆ ಶೇ.16 ರಷ್ಟು ಕೊಡುಗೆಯನ್ನು  ಕೃಷಿ ಕ್ಷೇತ್ರ ನೀಡಿದ್ದು, ಗ್ರಾಮೀಣ ಭಾಗದ ಜನರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಠಿಸಿದೆ ಎಂದು ಆರ್.ಬಿ.ಐ ಪ್ರಾದೇಶಿಕ ನಿರ್ದೇಶಕರಾದ ಸೋನಾಲಿ ಸೆನ್ ಗುಪ್ತಾ ಹೇಳಿದರು.………ಮುಂದೆ ಓದಿ……..

ನಬಾರ್ಡ್ ವತಿಯಿಂದ ಆಯೋಜಿಸಿದ್ದ ರಾಜ್ಯ ಸಾಲ ಗೋಷ್ಠಿ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮವನ್ನು ರಾಜ್ಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಉಮಾ ಮಹದೇವನ್  ಬೆಂಗಳೂರಿನಲ್ಲಿ ಉದ್ಘಾಟಿಸಿದರು. ಬಳಿಕ ಅವರು, ರಾಜ್ಯ ಮುನ್ನೋಟ ಪತ್ರ ಹಾಗೂ ಕೃಷಿ ಸಂಬಂಧಿತ ಜೀವ ಎಂಬ ಕಿರುಚಿತ್ರ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ  ನಬಾರ್ಡ್ ನ ಮುಖ್ಯ ಪ್ರಧಾನ ವ್ಯವಸ್ಥಾಪಕ ಕೆ.ವಿ.ಎಸ್.ಎಸ್.ಎಲ್.ವಿ. ಪ್ರಸಾದ್ ರಾವ್,  ಆರ್.ಬಿ.ಐ ಪ್ರಾದೇಶಿಕ ನಿರ್ದೇಶಕರಾದ ಸೋನಾಲಿ ಸೆನ್ ಗುಪ್ತಾ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಪ್ರಧಾನ ವ್ಯವಸ್ಥಾಪಕರಾದ  ಜೋಹಿ ಸ್ಮಿತಾ ಸಿನ್ಹಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಬಳಿಕ ಮಾತನಾಡಿದ ರಾಜ್ಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಉಮಾ ಮಹದೇವನ್ ,   ಕೃಷಿ  ಹಾಗೂ ಗ್ರಾಮೀಣ ಪರಿಸರ ವ್ಯವಸ್ಥೆ ಅಭಿವೃದ್ಧಿಗೊಳಿಸಲು ವಿಚಾರಗೋಷ್ಠಿ ಸಹಕಾರಿಯಾಗಿದೆ, ನಬಾರ್ಡ್ ಸಾಲ ಯೋಜನೆ ಸೇರಿದಂತೆ ಇನ್ನಿತರೆ ಯೋಜನೆಗಳಿಂದ ಕೃಷಿ ಕ್ಷೇತ್ರದ ಅಭಿವೃದ್ಧಿ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸಮರ್ಪಕ ಮೌಲ ಸೌಕರ್ಯಗಳ ಅಭಿವೃದ್ಧಿ ಸಾಧ್ಯವಾಗಿದೆ ಎಂದು ಹೇಳಿದರು.

ನಬಾರ್ಡ್ ನ ಮುಖ್ಯ ಪ್ರಧಾನ ವ್ಯವಸ್ಥಾಪಕ ಕೆ.ವಿ.ಎಸ್.ಎಸ್.ಎಲ್.ವಿ. ಪ್ರಸಾದ್ ರಾವ್ ಮಾತನಾಡಿ , ಕೃಷಿ ಮತ್ತು ಗ್ರಾಮೀಣ ಪ್ರದೇಶಗಳನ್ನು ಅಭಿವೃದ್ಧಿಗೊಳಿಸಲು ನಬಾರ್ಡ್ ಸಾಲ ಯೋಜನೆಗಳು ಸಹಕಾರಿಯಾಗಿವೆ, ಕೃಷಿ ಕ್ಷೇತ್ರದಲ್ಲಿ ಉದ್ಯೋಗ ಅವಕಾಶ ಸೃಷ್ಠಿಸಲು ಹಾಗೂ ಗ್ರಾಮೀಣ ಪ್ರದೇಶಗಳನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಲು ನಬಾರ್ಡ್ ಸಮರ್ಪಕವಾಗಿ ಶ್ರಮಿಸುತ್ತಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

2 minutes ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

16 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

1 day ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

1 day ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

1 day ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

1 day ago