ಮುಳಿಯ ಜ್ಯುವೆಲ್ಸ್ ಹಾಗೂ ಸಂಧ್ಯಾ ಜಯರಾಮ್ ಸಹಯೋಗದಲ್ಲಿ ಡಿಕೆನ್ಸನ್ ರಸ್ತೆಯಲ್ಲಿನ ಮಣಿಪಾಲ್ ಸೆಂಟರ್ ಆವರಣದಲ್ಲಿ ಮುಳಿಯ ಪಾಕೋತ್ಸವ ಭಾನುವಾರ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ವಿಜಯಲಕ್ಷ್ಮೀ ಎಂ. ನಡೆಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಳಿಯ ಜ್ಯುವೆಲ್ಸ್ ಸಿ.ಎಂ.ಡಿ. ಕೇಶವ ಪ್ರಸಾದ್ ಮುಳಿಯ ವಹಿಸಿದ್ದರು. ಖ್ಯಾತ ಹಿನ್ನಲೆ ಗಾಯಕಿ ಶ್ವೇತ ಪ್ರಭು ಉಪಸ್ಥಿತರಿದ್ದರು.
ಪಾಕೋತ್ಸವದಲ್ಲಿ ಶ್ರೀಮಾನ್ – ಶ್ರೀಮತಿ ವಿಭಾಗದಲ್ಲಿ ಪುಷ್ಪಲತಾ – ಕೃಷ್ಣಾನಂದ ಪ್ರಥಮ, ಸವಿತಾ – ಸುರೇಶ್ ದ್ವಿತೀಯ, ಲಾವಣ್ಯ – ನವೀನ್ ತೃತೀಯ ಸ್ಥಾನ ಪಡೆದರು. ಬಂಧು-ಮಿತ್ರರು ವಿಭಾಗದಲ್ಲಿ ದಿವ್ಯಾ – ಹರ್ಷಿಕಾ ಪ್ರಥಮ, ಹೇಮಾವತಿ – ಜ್ಞಾನೇಶ್ವರಿ – ಮೈತ್ರಿ ಭಟ್ ದ್ವಿತೀಯ, ಮಹಾಲಕ್ಷ್ಮೀ ತೃತೀಯ ಸ್ಥಾನ ಪಡೆದರು. ಲಕ್ಕಿಡ್ರಾದಲ್ಲಿ ಕೃತಿಕಾ ಅಕ್ಷಯ್ ಜೋಶಿ ಪ್ರಥಮ, ಸರೋಜಾ ದ್ವಿತೀಯ ಸ್ಥಾನ ಗಳಿಸಿದರು.
ಪಾಕಶಾಲಾ ನಿರ್ದೇಶಕಿ ವಿನೋದ ವಿ.ಅಡಿಗ ಮಾತನಾಡಿ ಚಿನ್ನ ಮತ್ತು ಅನವು ಮಹಿಳೆಯರಿಗೆ ತುಂಬಾ ಹತ್ತಿರವಾಗಿದೆ. ಆದರೆ ಇಂದು ಬೆಂಕಿ ಉಪ ಯೋಗಿಸದೇ ನಡೆದ ಸ್ಪರ್ಧೆಯೂ ತುಂಬಾ ಕುತೂಹಲವಾಗಿದ್ದು, ಹಸಿ ತರಕಾರಿ, ಹಣ್ಣು ಗಳಿಂದ ತಯಾರಿಸಿದ ಆಹಾರವು ಆರೋಗ್ಯಕ್ಕೆ ತುಂಬಾ ಮುಖ್ಯ, ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಸಂಧ್ಯಾ ಜಯರಾಮ್, ಮುಳಿಯ ಜ್ಯುವೆಲ್ನ ವೇಣು ಶರ್ಮಾ, ಸುಬ್ರಹ್ಮಣ್ಯ ಭಟ್, ಖಾಸಗಿ ಸುದ್ದಿವಾಹಿನಿ ನಿರೂಪಕಿ ನಮಿತಾ ಜೈನ್ ಮತ್ತಿತರರು ಇದ್ದರು.
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…