ಮುಳಿಯ ಜ್ಯುವೆಲ್ಸ್ ಹಾಗೂ ಸಂಧ್ಯಾ ಜಯರಾಮ್ ಸಹಯೋಗದಲ್ಲಿ ಡಿಕೆನ್ಸನ್ ರಸ್ತೆಯಲ್ಲಿನ ಮಣಿಪಾಲ್ ಸೆಂಟರ್ ಆವರಣದಲ್ಲಿ ಮುಳಿಯ ಪಾಕೋತ್ಸವ ಭಾನುವಾರ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ವಿಜಯಲಕ್ಷ್ಮೀ ಎಂ. ನಡೆಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಳಿಯ ಜ್ಯುವೆಲ್ಸ್ ಸಿ.ಎಂ.ಡಿ. ಕೇಶವ ಪ್ರಸಾದ್ ಮುಳಿಯ ವಹಿಸಿದ್ದರು. ಖ್ಯಾತ ಹಿನ್ನಲೆ ಗಾಯಕಿ ಶ್ವೇತ ಪ್ರಭು ಉಪಸ್ಥಿತರಿದ್ದರು.
ಪಾಕೋತ್ಸವದಲ್ಲಿ ಶ್ರೀಮಾನ್ – ಶ್ರೀಮತಿ ವಿಭಾಗದಲ್ಲಿ ಪುಷ್ಪಲತಾ – ಕೃಷ್ಣಾನಂದ ಪ್ರಥಮ, ಸವಿತಾ – ಸುರೇಶ್ ದ್ವಿತೀಯ, ಲಾವಣ್ಯ – ನವೀನ್ ತೃತೀಯ ಸ್ಥಾನ ಪಡೆದರು. ಬಂಧು-ಮಿತ್ರರು ವಿಭಾಗದಲ್ಲಿ ದಿವ್ಯಾ – ಹರ್ಷಿಕಾ ಪ್ರಥಮ, ಹೇಮಾವತಿ – ಜ್ಞಾನೇಶ್ವರಿ – ಮೈತ್ರಿ ಭಟ್ ದ್ವಿತೀಯ, ಮಹಾಲಕ್ಷ್ಮೀ ತೃತೀಯ ಸ್ಥಾನ ಪಡೆದರು. ಲಕ್ಕಿಡ್ರಾದಲ್ಲಿ ಕೃತಿಕಾ ಅಕ್ಷಯ್ ಜೋಶಿ ಪ್ರಥಮ, ಸರೋಜಾ ದ್ವಿತೀಯ ಸ್ಥಾನ ಗಳಿಸಿದರು.
ಪಾಕಶಾಲಾ ನಿರ್ದೇಶಕಿ ವಿನೋದ ವಿ.ಅಡಿಗ ಮಾತನಾಡಿ ಚಿನ್ನ ಮತ್ತು ಅನವು ಮಹಿಳೆಯರಿಗೆ ತುಂಬಾ ಹತ್ತಿರವಾಗಿದೆ. ಆದರೆ ಇಂದು ಬೆಂಕಿ ಉಪ ಯೋಗಿಸದೇ ನಡೆದ ಸ್ಪರ್ಧೆಯೂ ತುಂಬಾ ಕುತೂಹಲವಾಗಿದ್ದು, ಹಸಿ ತರಕಾರಿ, ಹಣ್ಣು ಗಳಿಂದ ತಯಾರಿಸಿದ ಆಹಾರವು ಆರೋಗ್ಯಕ್ಕೆ ತುಂಬಾ ಮುಖ್ಯ, ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಸಂಧ್ಯಾ ಜಯರಾಮ್, ಮುಳಿಯ ಜ್ಯುವೆಲ್ನ ವೇಣು ಶರ್ಮಾ, ಸುಬ್ರಹ್ಮಣ್ಯ ಭಟ್, ಖಾಸಗಿ ಸುದ್ದಿವಾಹಿನಿ ನಿರೂಪಕಿ ನಮಿತಾ ಜೈನ್ ಮತ್ತಿತರರು ಇದ್ದರು.
ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್, AI ಹಾಗೂ ಸ್ಮಾರ್ಟ್…
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…