ಪ್ರವಾಸಿಗರ ಸ್ವರ್ಗ, ಕೂಲ್ ಸಿಟಿ, ಉದ್ಯಾನನಗರಿ ಎಂದೆಲ್ಲಾ ಖ್ಯಾತಿ ಪಡೆದಿದ್ದ ನಮ್ಮ ಬೆಂಗಳೂರು ದಿನದಿಂದ ದಿನಕ್ಕೆ ಹಾಟ್ ಸಿಟಿಯಾಗುತ್ತಿದೆ. ಒಂದು ಕಾಲದಲ್ಲಿ ಬ್ರಿಟೀಷರು ಬೇಸಿಗೆ ಕಾಲದಲ್ಲಿ ಬೆಂಗಳೂರಿಗೆ ಬಂದು ತಂಪಿನ ವಾತಾವರಣದಲ್ಲಿ ಕಾಲ ಕಳೆದು ಹೋಗುತ್ತಿದ್ದರು. ಆದರೆ ಈಗಿನ ಪರಿಸ್ಥಿತಿ ಯೋಚಿಸಿದ್ರೆ ಮುಂದೇನು ಗತಿ ಅನ್ನುವಂತಾಗಿದೆ. ಆಗಸ್ಟ್ನಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯ ಸರಾಸರಿ ಗರಿಷ್ಠ ತಾಪಮಾನ 28.1 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಈ ವರ್ಷ ತಾಪಮಾನವು ಹಲವು ದಿನಗಳಂದು 30 ಡಿಗ್ರಿ ಸೆಲ್ಸಿಯಸ್ಗೆ ತಲುಪಿದೆ.
ಬೆಂಗಳೂರಿನಲ್ಲಿ ಮಳೆಗಾಲದಲ್ಲೂ ಮಳೆ ಸುರಿಯುತ್ತಿಲ್ಲ. ದಿನೇ ದಿನೇ ತಾಪಮಾನ ನಿಧಾನವಾಗಿ ಹೆಚ್ಚಾಗುತ್ತಿದೆ. ಈ ಕುರಿತು ಮಹತ್ವದ ವರದಿಯೊಂದು ಹೊರಬಿದ್ದಿದೆ. ಆಗಸ್ಟ್ ತಿಂಗಳಲ್ಲಿ ಬೆಂಗಳೂರಿನ ಸಾಮಾನ್ಯ ಸರಾಸರಿ ತಾಪಮಾನಕ್ಕಿಂತ ಸದ್ಯದ ತಾಪಮಾನ ಗರಿಷ್ಠ ಎರಡು ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಾಗಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ತಿಳಿಸಿದೆ. ಆಗಸ್ಟ್ನಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯ ಸರಾಸರಿ ಗರಿಷ್ಠ ತಾಪಮಾನ 28.1 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಈ ವರ್ಷ ತಾಪಮಾನವು ಹಲವು ದಿನಗಳಂದು 30 ಡಿಗ್ರಿ ಸೆಲ್ಸಿಯಸ್ಗೆ ತಲುಪಿದೆ. IMD ಯ ಹಿರಿಯ ಅಧಿಕಾರಿಗಳು ಬೆಂಗಳೂರಿನಲ್ಲಿ ತಾಪಮಾನ ಹೆಚ್ಚಳಕ್ಕೆ ಮಳೆಯ ಕೊರತೆ ಕಾರಣ ಎಂದು ಖಚಿತಪಡಿಸಿದ್ದಾರೆ.
ಬೆಂಗಳೂರು ನಗರದಲ್ಲಿ ನಿರೀಕ್ಷೆಯಂತೆ ಮಳೆಯಾಗದ ಕಾರಣ ತಾಪಮಾನ ಹೆಚ್ಚಾಗಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ. ಬೆಂಗಳೂರಿನ ಸರಾಸರಿ ಮಳೆಗೆ ಹೋಲಿಸಿದರೆ ಈ ಮಾನ್ಸೂನ್ನಲ್ಲಿ ಬೆಂಗಳೂರಿನಲ್ಲಿ 44 ಮಿಮೀ ಕಡಿಮೆ ಮಳೆಯಾಗಿದೆ. ಕಳೆದ ಕೆಲವು ವರ್ಷಗಳ ಸರಾಸರಿ ಮಳೆಯ ಅಂಕಿಅಂಶಗಳನ್ನು ಗಮನಿಸಿದರೆ ಜೂನ್ನಲ್ಲಿ ಬೆಂಗಳೂರಿನಲ್ಲಿ 262 ಮಿಮೀ ಮಳೆಯಾಗಬೇಕಿತ್ತು. ಆದರೆ, ಈ ವರ್ಷ ಕೇವಲ 218 ಮಿ.ಮೀ. ಮಳೆಯಾಗಿದೆ.
ಬೆಂಗಳೂರು ಮಾತ್ರವಲ್ಲ ಈ ಬಾರಿ ರಾಜ್ಯದ ಬಹುತೇಕ ಕಡೆಗಳಲ್ಲೂ ಅದೇ ಪರಿಸ್ಥಿತಿ ಇದೆ. ಮಳೆಯ ಕೊರತೆ ವಿಪರೀತವಾಗಿ ಕಾಡುತ್ತಿದೆ. ವಾತಾವರಣದ ಉಷ್ಣತೆ ಏರಿಕೆಯಾಗಿದೆ. ಹೀಗಾಗಿ ಹವಾಮಾನ ವೈಪರೀತ್ಯ ಕಾಡುತ್ತಿದೆ, ಎಚ್ಚರಿಕೆಯನ್ನು ಪ್ರಕೃತಿ ನೀಡುತ್ತಿದೆ.
ಕೃಷಿ ಸವಾಲು, ಕೃಷಿ ಕಷ್ಟ, ಕೃಷಿ ಇನ್ನು ಸಾಧ್ಯವೇ ಇಲ್ಲ ಎನ್ನುವ ನೆಗೆಟಿವ್…
7.5 ಲಕ್ಷಕ್ಕೂ ಹೆಚ್ಚು ಯಾತ್ರಿಕರು ಆಧಾರ್ ದೃಢೀಕರಣವನ್ನು ಬಳಸಿಕೊಂಡು ಚಾರ್ ಧಾಮ್ ಮತ್ತು…
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದ ಬಳಿ ಹೇಮಾವತಿ ನದಿ ನೀರಿಗೆ…
ಬೇಸಿಗೆ ಅವಧಿಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಗಮನದಲ್ಲಿಟ್ಟುಕೊಂಡು ಮಧ್ಯ ರೈಲ್ವೆಯು ಛತ್ರಪತಿ ಶಿವಾಜಿ…
ಬೇಸಿಗೆಯಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿನ ಅಭಾವ ನೀಗಿಸಲು ಪ್ರಮುಖ ಜಲಾಶಯಗಳ ನಿರ್ವಹಣೆ ಹಾಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490