Advertisement
ಮಾಹಿತಿ

#WeatherMirror| ಕೂಲ್‌ ಸಿಟಿ ಆಗುತ್ತಿದೆ ಹಾಟ್‌ ಸಿಟಿ…. ! | ಏರುತ್ತಿದೆ ಬೆಂಗಳೂರು ತಾಪಮಾನ | ಎಚ್ಚರಿಸುತ್ತಿದೆ ಹವಾಮಾನ |

Share

ಪ್ರವಾಸಿಗರ ಸ್ವರ್ಗ, ಕೂಲ್ ಸಿಟಿ, ಉದ್ಯಾನನಗರಿ ಎಂದೆಲ್ಲಾ ಖ್ಯಾತಿ ಪಡೆದಿದ್ದ ನಮ್ಮ ಬೆಂಗಳೂರು ದಿನದಿಂದ ದಿನಕ್ಕೆ ಹಾಟ್‌ ಸಿಟಿಯಾಗುತ್ತಿದೆ. ಒಂದು ಕಾಲದಲ್ಲಿ ಬ್ರಿಟೀಷರು ಬೇಸಿಗೆ ಕಾಲದಲ್ಲಿ ಬೆಂಗಳೂರಿಗೆ ಬಂದು ತಂಪಿನ ವಾತಾವರಣದಲ್ಲಿ ಕಾಲ ಕಳೆದು ಹೋಗುತ್ತಿದ್ದರು. ಆದರೆ ಈಗಿನ ಪರಿಸ್ಥಿತಿ ಯೋಚಿಸಿದ್ರೆ ಮುಂದೇನು ಗತಿ ಅನ್ನುವಂತಾಗಿದೆ. ಆಗಸ್ಟ್‌ನಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯ ಸರಾಸರಿ ಗರಿಷ್ಠ ತಾಪಮಾನ 28.1 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಈ ವರ್ಷ ತಾಪಮಾನವು ಹಲವು ದಿನಗಳಂದು 30 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ.

ಬೆಂಗಳೂರಿನಲ್ಲಿ ಮಳೆಗಾಲದಲ್ಲೂ ಮಳೆ ಸುರಿಯುತ್ತಿಲ್ಲ. ದಿನೇ ದಿನೇ ತಾಪಮಾನ ನಿಧಾನವಾಗಿ ಹೆಚ್ಚಾಗುತ್ತಿದೆ. ಈ ಕುರಿತು ಮಹತ್ವದ ವರದಿಯೊಂದು ಹೊರಬಿದ್ದಿದೆ. ಆಗಸ್ಟ್‌ ತಿಂಗಳಲ್ಲಿ ಬೆಂಗಳೂರಿನ ಸಾಮಾನ್ಯ ಸರಾಸರಿ ತಾಪಮಾನಕ್ಕಿಂತ ಸದ್ಯದ ತಾಪಮಾನ ಗರಿಷ್ಠ ಎರಡು ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ತಿಳಿಸಿದೆ. ಆಗಸ್ಟ್‌ನಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯ ಸರಾಸರಿ ಗರಿಷ್ಠ ತಾಪಮಾನ 28.1 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಈ ವರ್ಷ ತಾಪಮಾನವು ಹಲವು ದಿನಗಳಂದು 30 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ. IMD ಯ ಹಿರಿಯ ಅಧಿಕಾರಿಗಳು ಬೆಂಗಳೂರಿನಲ್ಲಿ ತಾಪಮಾನ ಹೆಚ್ಚಳಕ್ಕೆ ಮಳೆಯ ಕೊರತೆ ಕಾರಣ ಎಂದು ಖಚಿತಪಡಿಸಿದ್ದಾರೆ.

ಬೆಂಗಳೂರು ನಗರದಲ್ಲಿ ನಿರೀಕ್ಷೆಯಂತೆ ಮಳೆಯಾಗದ ಕಾರಣ ತಾಪಮಾನ ಹೆಚ್ಚಾಗಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ. ಬೆಂಗಳೂರಿನ ಸರಾಸರಿ ಮಳೆಗೆ ಹೋಲಿಸಿದರೆ ಈ ಮಾನ್ಸೂನ್‌ನಲ್ಲಿ ಬೆಂಗಳೂರಿನಲ್ಲಿ 44 ಮಿಮೀ ಕಡಿಮೆ ಮಳೆಯಾಗಿದೆ. ಕಳೆದ ಕೆಲವು ವರ್ಷಗಳ ಸರಾಸರಿ ಮಳೆಯ ಅಂಕಿಅಂಶಗಳನ್ನು ಗಮನಿಸಿದರೆ ಜೂನ್‌ನಲ್ಲಿ ಬೆಂಗಳೂರಿನಲ್ಲಿ 262 ಮಿಮೀ ಮಳೆಯಾಗಬೇಕಿತ್ತು. ಆದರೆ, ಈ ವರ್ಷ ಕೇವಲ 218 ಮಿ.ಮೀ. ಮಳೆಯಾಗಿದೆ.

ಬೆಂಗಳೂರು ಮಾತ್ರವಲ್ಲ ಈ ಬಾರಿ ರಾಜ್ಯದ ಬಹುತೇಕ ಕಡೆಗಳಲ್ಲೂ ಅದೇ ಪರಿಸ್ಥಿತಿ ಇದೆ. ಮಳೆಯ ಕೊರತೆ ವಿಪರೀತವಾಗಿ ಕಾಡುತ್ತಿದೆ. ವಾತಾವರಣದ ಉಷ್ಣತೆ ಏರಿಕೆಯಾಗಿದೆ. ಹೀಗಾಗಿ ಹವಾಮಾನ ವೈಪರೀತ್ಯ ಕಾಡುತ್ತಿದೆ, ಎಚ್ಚರಿಕೆಯನ್ನು ಪ್ರಕೃತಿ ನೀಡುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

9 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

18 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

19 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

23 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

24 hours ago