Advertisement
ಮಾಹಿತಿ

#WeatherMirror| ಕೂಲ್‌ ಸಿಟಿ ಆಗುತ್ತಿದೆ ಹಾಟ್‌ ಸಿಟಿ…. ! | ಏರುತ್ತಿದೆ ಬೆಂಗಳೂರು ತಾಪಮಾನ | ಎಚ್ಚರಿಸುತ್ತಿದೆ ಹವಾಮಾನ |

Share

ಪ್ರವಾಸಿಗರ ಸ್ವರ್ಗ, ಕೂಲ್ ಸಿಟಿ, ಉದ್ಯಾನನಗರಿ ಎಂದೆಲ್ಲಾ ಖ್ಯಾತಿ ಪಡೆದಿದ್ದ ನಮ್ಮ ಬೆಂಗಳೂರು ದಿನದಿಂದ ದಿನಕ್ಕೆ ಹಾಟ್‌ ಸಿಟಿಯಾಗುತ್ತಿದೆ. ಒಂದು ಕಾಲದಲ್ಲಿ ಬ್ರಿಟೀಷರು ಬೇಸಿಗೆ ಕಾಲದಲ್ಲಿ ಬೆಂಗಳೂರಿಗೆ ಬಂದು ತಂಪಿನ ವಾತಾವರಣದಲ್ಲಿ ಕಾಲ ಕಳೆದು ಹೋಗುತ್ತಿದ್ದರು. ಆದರೆ ಈಗಿನ ಪರಿಸ್ಥಿತಿ ಯೋಚಿಸಿದ್ರೆ ಮುಂದೇನು ಗತಿ ಅನ್ನುವಂತಾಗಿದೆ. ಆಗಸ್ಟ್‌ನಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯ ಸರಾಸರಿ ಗರಿಷ್ಠ ತಾಪಮಾನ 28.1 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಈ ವರ್ಷ ತಾಪಮಾನವು ಹಲವು ದಿನಗಳಂದು 30 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ.

Advertisement
Advertisement

ಬೆಂಗಳೂರಿನಲ್ಲಿ ಮಳೆಗಾಲದಲ್ಲೂ ಮಳೆ ಸುರಿಯುತ್ತಿಲ್ಲ. ದಿನೇ ದಿನೇ ತಾಪಮಾನ ನಿಧಾನವಾಗಿ ಹೆಚ್ಚಾಗುತ್ತಿದೆ. ಈ ಕುರಿತು ಮಹತ್ವದ ವರದಿಯೊಂದು ಹೊರಬಿದ್ದಿದೆ. ಆಗಸ್ಟ್‌ ತಿಂಗಳಲ್ಲಿ ಬೆಂಗಳೂರಿನ ಸಾಮಾನ್ಯ ಸರಾಸರಿ ತಾಪಮಾನಕ್ಕಿಂತ ಸದ್ಯದ ತಾಪಮಾನ ಗರಿಷ್ಠ ಎರಡು ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ತಿಳಿಸಿದೆ. ಆಗಸ್ಟ್‌ನಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯ ಸರಾಸರಿ ಗರಿಷ್ಠ ತಾಪಮಾನ 28.1 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಈ ವರ್ಷ ತಾಪಮಾನವು ಹಲವು ದಿನಗಳಂದು 30 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ. IMD ಯ ಹಿರಿಯ ಅಧಿಕಾರಿಗಳು ಬೆಂಗಳೂರಿನಲ್ಲಿ ತಾಪಮಾನ ಹೆಚ್ಚಳಕ್ಕೆ ಮಳೆಯ ಕೊರತೆ ಕಾರಣ ಎಂದು ಖಚಿತಪಡಿಸಿದ್ದಾರೆ.

Advertisement

ಬೆಂಗಳೂರು ನಗರದಲ್ಲಿ ನಿರೀಕ್ಷೆಯಂತೆ ಮಳೆಯಾಗದ ಕಾರಣ ತಾಪಮಾನ ಹೆಚ್ಚಾಗಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ. ಬೆಂಗಳೂರಿನ ಸರಾಸರಿ ಮಳೆಗೆ ಹೋಲಿಸಿದರೆ ಈ ಮಾನ್ಸೂನ್‌ನಲ್ಲಿ ಬೆಂಗಳೂರಿನಲ್ಲಿ 44 ಮಿಮೀ ಕಡಿಮೆ ಮಳೆಯಾಗಿದೆ. ಕಳೆದ ಕೆಲವು ವರ್ಷಗಳ ಸರಾಸರಿ ಮಳೆಯ ಅಂಕಿಅಂಶಗಳನ್ನು ಗಮನಿಸಿದರೆ ಜೂನ್‌ನಲ್ಲಿ ಬೆಂಗಳೂರಿನಲ್ಲಿ 262 ಮಿಮೀ ಮಳೆಯಾಗಬೇಕಿತ್ತು. ಆದರೆ, ಈ ವರ್ಷ ಕೇವಲ 218 ಮಿ.ಮೀ. ಮಳೆಯಾಗಿದೆ.

ಬೆಂಗಳೂರು ಮಾತ್ರವಲ್ಲ ಈ ಬಾರಿ ರಾಜ್ಯದ ಬಹುತೇಕ ಕಡೆಗಳಲ್ಲೂ ಅದೇ ಪರಿಸ್ಥಿತಿ ಇದೆ. ಮಳೆಯ ಕೊರತೆ ವಿಪರೀತವಾಗಿ ಕಾಡುತ್ತಿದೆ. ವಾತಾವರಣದ ಉಷ್ಣತೆ ಏರಿಕೆಯಾಗಿದೆ. ಹೀಗಾಗಿ ಹವಾಮಾನ ವೈಪರೀತ್ಯ ಕಾಡುತ್ತಿದೆ, ಎಚ್ಚರಿಕೆಯನ್ನು ಪ್ರಕೃತಿ ನೀಡುತ್ತಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೊಕ್ಕೋ ಧಾರಣೆ ಇಳಿಕೆ | ವಾರದಲ್ಲಿ 100 ರೂಪಾಯಿ ಕುಸಿತ ಕಂಡ ಕೊಕ್ಕೋ ಧಾರಣೆ |

ಕೊಕ್ಕೋ ಧಾರಣೆ ವಾರದಲ್ಲಿ 100 ರೂಪಾಯಿ ಇಳಿಕೆಯಾಗಿದೆ.

6 hours ago

Karnataka Weather | 08-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |

ಮೇ 9 ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಸಹ ಮಳೆ ಆರಂಭವಾಗುವ ಮುನ್ಸೂಚೆನೆ…

9 hours ago

ಛಾತಿ ಇಲ್ಲದ ನಾಗರಿಕರನ್ನು ರೂಪಿಸುತ್ತಿರುವ ಶಿಕ್ಷಣ

ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…

1 day ago

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌…

1 day ago

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.

1 day ago

Karnataka Weather | 07-05-2024 | ಮಳೆಯ ಸೂಚನೆ ಬಂದೇ ಬಿಟ್ಟಿದೆ |ಹಲವು ಕಡೆ ಗುಡುಗು-ಸಿಡಿಲು ಇರಬಹುದು, ಇರಲಿ ಎಚ್ಚರಿಕೆ |

ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…

1 day ago