Advertisement
ಮಾಹಿತಿ

#WeatherMirror| ಕೂಲ್‌ ಸಿಟಿ ಆಗುತ್ತಿದೆ ಹಾಟ್‌ ಸಿಟಿ…. ! | ಏರುತ್ತಿದೆ ಬೆಂಗಳೂರು ತಾಪಮಾನ | ಎಚ್ಚರಿಸುತ್ತಿದೆ ಹವಾಮಾನ |

Share

ಪ್ರವಾಸಿಗರ ಸ್ವರ್ಗ, ಕೂಲ್ ಸಿಟಿ, ಉದ್ಯಾನನಗರಿ ಎಂದೆಲ್ಲಾ ಖ್ಯಾತಿ ಪಡೆದಿದ್ದ ನಮ್ಮ ಬೆಂಗಳೂರು ದಿನದಿಂದ ದಿನಕ್ಕೆ ಹಾಟ್‌ ಸಿಟಿಯಾಗುತ್ತಿದೆ. ಒಂದು ಕಾಲದಲ್ಲಿ ಬ್ರಿಟೀಷರು ಬೇಸಿಗೆ ಕಾಲದಲ್ಲಿ ಬೆಂಗಳೂರಿಗೆ ಬಂದು ತಂಪಿನ ವಾತಾವರಣದಲ್ಲಿ ಕಾಲ ಕಳೆದು ಹೋಗುತ್ತಿದ್ದರು. ಆದರೆ ಈಗಿನ ಪರಿಸ್ಥಿತಿ ಯೋಚಿಸಿದ್ರೆ ಮುಂದೇನು ಗತಿ ಅನ್ನುವಂತಾಗಿದೆ. ಆಗಸ್ಟ್‌ನಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯ ಸರಾಸರಿ ಗರಿಷ್ಠ ತಾಪಮಾನ 28.1 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಈ ವರ್ಷ ತಾಪಮಾನವು ಹಲವು ದಿನಗಳಂದು 30 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ.

ಬೆಂಗಳೂರಿನಲ್ಲಿ ಮಳೆಗಾಲದಲ್ಲೂ ಮಳೆ ಸುರಿಯುತ್ತಿಲ್ಲ. ದಿನೇ ದಿನೇ ತಾಪಮಾನ ನಿಧಾನವಾಗಿ ಹೆಚ್ಚಾಗುತ್ತಿದೆ. ಈ ಕುರಿತು ಮಹತ್ವದ ವರದಿಯೊಂದು ಹೊರಬಿದ್ದಿದೆ. ಆಗಸ್ಟ್‌ ತಿಂಗಳಲ್ಲಿ ಬೆಂಗಳೂರಿನ ಸಾಮಾನ್ಯ ಸರಾಸರಿ ತಾಪಮಾನಕ್ಕಿಂತ ಸದ್ಯದ ತಾಪಮಾನ ಗರಿಷ್ಠ ಎರಡು ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ತಿಳಿಸಿದೆ. ಆಗಸ್ಟ್‌ನಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯ ಸರಾಸರಿ ಗರಿಷ್ಠ ತಾಪಮಾನ 28.1 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಈ ವರ್ಷ ತಾಪಮಾನವು ಹಲವು ದಿನಗಳಂದು 30 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ. IMD ಯ ಹಿರಿಯ ಅಧಿಕಾರಿಗಳು ಬೆಂಗಳೂರಿನಲ್ಲಿ ತಾಪಮಾನ ಹೆಚ್ಚಳಕ್ಕೆ ಮಳೆಯ ಕೊರತೆ ಕಾರಣ ಎಂದು ಖಚಿತಪಡಿಸಿದ್ದಾರೆ.

ಬೆಂಗಳೂರು ನಗರದಲ್ಲಿ ನಿರೀಕ್ಷೆಯಂತೆ ಮಳೆಯಾಗದ ಕಾರಣ ತಾಪಮಾನ ಹೆಚ್ಚಾಗಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ. ಬೆಂಗಳೂರಿನ ಸರಾಸರಿ ಮಳೆಗೆ ಹೋಲಿಸಿದರೆ ಈ ಮಾನ್ಸೂನ್‌ನಲ್ಲಿ ಬೆಂಗಳೂರಿನಲ್ಲಿ 44 ಮಿಮೀ ಕಡಿಮೆ ಮಳೆಯಾಗಿದೆ. ಕಳೆದ ಕೆಲವು ವರ್ಷಗಳ ಸರಾಸರಿ ಮಳೆಯ ಅಂಕಿಅಂಶಗಳನ್ನು ಗಮನಿಸಿದರೆ ಜೂನ್‌ನಲ್ಲಿ ಬೆಂಗಳೂರಿನಲ್ಲಿ 262 ಮಿಮೀ ಮಳೆಯಾಗಬೇಕಿತ್ತು. ಆದರೆ, ಈ ವರ್ಷ ಕೇವಲ 218 ಮಿ.ಮೀ. ಮಳೆಯಾಗಿದೆ.

ಬೆಂಗಳೂರು ಮಾತ್ರವಲ್ಲ ಈ ಬಾರಿ ರಾಜ್ಯದ ಬಹುತೇಕ ಕಡೆಗಳಲ್ಲೂ ಅದೇ ಪರಿಸ್ಥಿತಿ ಇದೆ. ಮಳೆಯ ಕೊರತೆ ವಿಪರೀತವಾಗಿ ಕಾಡುತ್ತಿದೆ. ವಾತಾವರಣದ ಉಷ್ಣತೆ ಏರಿಕೆಯಾಗಿದೆ. ಹೀಗಾಗಿ ಹವಾಮಾನ ವೈಪರೀತ್ಯ ಕಾಡುತ್ತಿದೆ, ಎಚ್ಚರಿಕೆಯನ್ನು ಪ್ರಕೃತಿ ನೀಡುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

3 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

3 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

3 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

4 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

4 days ago