Advertisement
ಮಾಹಿತಿ

#WeatherMirror| ಕೂಲ್‌ ಸಿಟಿ ಆಗುತ್ತಿದೆ ಹಾಟ್‌ ಸಿಟಿ…. ! | ಏರುತ್ತಿದೆ ಬೆಂಗಳೂರು ತಾಪಮಾನ | ಎಚ್ಚರಿಸುತ್ತಿದೆ ಹವಾಮಾನ |

Share

ಪ್ರವಾಸಿಗರ ಸ್ವರ್ಗ, ಕೂಲ್ ಸಿಟಿ, ಉದ್ಯಾನನಗರಿ ಎಂದೆಲ್ಲಾ ಖ್ಯಾತಿ ಪಡೆದಿದ್ದ ನಮ್ಮ ಬೆಂಗಳೂರು ದಿನದಿಂದ ದಿನಕ್ಕೆ ಹಾಟ್‌ ಸಿಟಿಯಾಗುತ್ತಿದೆ. ಒಂದು ಕಾಲದಲ್ಲಿ ಬ್ರಿಟೀಷರು ಬೇಸಿಗೆ ಕಾಲದಲ್ಲಿ ಬೆಂಗಳೂರಿಗೆ ಬಂದು ತಂಪಿನ ವಾತಾವರಣದಲ್ಲಿ ಕಾಲ ಕಳೆದು ಹೋಗುತ್ತಿದ್ದರು. ಆದರೆ ಈಗಿನ ಪರಿಸ್ಥಿತಿ ಯೋಚಿಸಿದ್ರೆ ಮುಂದೇನು ಗತಿ ಅನ್ನುವಂತಾಗಿದೆ. ಆಗಸ್ಟ್‌ನಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯ ಸರಾಸರಿ ಗರಿಷ್ಠ ತಾಪಮಾನ 28.1 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಈ ವರ್ಷ ತಾಪಮಾನವು ಹಲವು ದಿನಗಳಂದು 30 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ.

ಬೆಂಗಳೂರಿನಲ್ಲಿ ಮಳೆಗಾಲದಲ್ಲೂ ಮಳೆ ಸುರಿಯುತ್ತಿಲ್ಲ. ದಿನೇ ದಿನೇ ತಾಪಮಾನ ನಿಧಾನವಾಗಿ ಹೆಚ್ಚಾಗುತ್ತಿದೆ. ಈ ಕುರಿತು ಮಹತ್ವದ ವರದಿಯೊಂದು ಹೊರಬಿದ್ದಿದೆ. ಆಗಸ್ಟ್‌ ತಿಂಗಳಲ್ಲಿ ಬೆಂಗಳೂರಿನ ಸಾಮಾನ್ಯ ಸರಾಸರಿ ತಾಪಮಾನಕ್ಕಿಂತ ಸದ್ಯದ ತಾಪಮಾನ ಗರಿಷ್ಠ ಎರಡು ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ತಿಳಿಸಿದೆ. ಆಗಸ್ಟ್‌ನಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯ ಸರಾಸರಿ ಗರಿಷ್ಠ ತಾಪಮಾನ 28.1 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಈ ವರ್ಷ ತಾಪಮಾನವು ಹಲವು ದಿನಗಳಂದು 30 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ. IMD ಯ ಹಿರಿಯ ಅಧಿಕಾರಿಗಳು ಬೆಂಗಳೂರಿನಲ್ಲಿ ತಾಪಮಾನ ಹೆಚ್ಚಳಕ್ಕೆ ಮಳೆಯ ಕೊರತೆ ಕಾರಣ ಎಂದು ಖಚಿತಪಡಿಸಿದ್ದಾರೆ.

ಬೆಂಗಳೂರು ನಗರದಲ್ಲಿ ನಿರೀಕ್ಷೆಯಂತೆ ಮಳೆಯಾಗದ ಕಾರಣ ತಾಪಮಾನ ಹೆಚ್ಚಾಗಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ. ಬೆಂಗಳೂರಿನ ಸರಾಸರಿ ಮಳೆಗೆ ಹೋಲಿಸಿದರೆ ಈ ಮಾನ್ಸೂನ್‌ನಲ್ಲಿ ಬೆಂಗಳೂರಿನಲ್ಲಿ 44 ಮಿಮೀ ಕಡಿಮೆ ಮಳೆಯಾಗಿದೆ. ಕಳೆದ ಕೆಲವು ವರ್ಷಗಳ ಸರಾಸರಿ ಮಳೆಯ ಅಂಕಿಅಂಶಗಳನ್ನು ಗಮನಿಸಿದರೆ ಜೂನ್‌ನಲ್ಲಿ ಬೆಂಗಳೂರಿನಲ್ಲಿ 262 ಮಿಮೀ ಮಳೆಯಾಗಬೇಕಿತ್ತು. ಆದರೆ, ಈ ವರ್ಷ ಕೇವಲ 218 ಮಿ.ಮೀ. ಮಳೆಯಾಗಿದೆ.

ಬೆಂಗಳೂರು ಮಾತ್ರವಲ್ಲ ಈ ಬಾರಿ ರಾಜ್ಯದ ಬಹುತೇಕ ಕಡೆಗಳಲ್ಲೂ ಅದೇ ಪರಿಸ್ಥಿತಿ ಇದೆ. ಮಳೆಯ ಕೊರತೆ ವಿಪರೀತವಾಗಿ ಕಾಡುತ್ತಿದೆ. ವಾತಾವರಣದ ಉಷ್ಣತೆ ಏರಿಕೆಯಾಗಿದೆ. ಹೀಗಾಗಿ ಹವಾಮಾನ ವೈಪರೀತ್ಯ ಕಾಡುತ್ತಿದೆ, ಎಚ್ಚರಿಕೆಯನ್ನು ಪ್ರಕೃತಿ ನೀಡುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

38 minutes ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

7 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

7 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

15 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

17 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

23 hours ago