ಕೊರೋನಾ-2 ಕಂಟ್ರೋಲ್‌ 1.0 | ರಾಜ್ಯದಲ್ಲಿ ಲಾಕ್ಡೌನ್‌ ಬದಲು ನೂತನ ಮಾರ್ಗಸೂಚಿ | ಏನೇನು ಕ್ರಮಗಳು ?

April 2, 2021
8:07 PM

ದೇಶದಾದ್ಯಂತ ಮತ್ತೆ ಕೊರೋನಾ 2 ನೇ ಅಲೆ ಹೆಚ್ಚಾಗುತ್ತಿದೆ. ಇದೀಗ ಕೋವಿಡ್‌ ಅಲೆ ತಡೆಯಲು ಮತ್ತೆ ಸದ್ಯ ಲಾಕ್ಡೌನ್‌ ಬದಲಾಗಿ  ಕೊರೋನಾ-2 ತಡೆಯಲು ಮೊದಲನೆಯ ಹಂತದಲ್ಲಿ ಕಟ್ಟುನಿಟ್ಟಿನ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಏಪ್ರಿಲ್ 20 ರ ತನಕ ಈ ಮಾರ್ಗಸೂಚಿ ಜಾರಿಯಲ್ಲಿರುತ್ತದೆ. ಪರಿಸ್ಥಿತಿ ನೋಡಿಕೊಂಡು ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ.  ಕೊರೋನಾ ಪ್ರಕರಣಗಳು ಹೆಚ್ಚಿರುವ ಜಿಲ್ಲೆಗಳಿಗೆ ಕೆಲವೊಂದು ಹೆಚ್ಚಿನ ನಿರ್ಬಂಧಗಳನ್ನು ಹೇರಲಾಗಿದೆ.

Advertisement
Advertisement

ಮೊದಲನೆಯ ಯಂತದಲ್ಲಿ, ಶಾಪಿಂಗ್ ಮಾಲ್, ಡಿಪಾರ್ಟ್‌ಮೆಂಟ್ ಸ್ಟೋರ್ ಸೇರಿದಂತೆ ಇತರ ಕಡೆ ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯ.

Advertisement
  • ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯ. ನಿಯಮ ಉಲ್ಲಂಘನೆಯಾದರೆ ಕೋವಿಡ್ ಪರಿಸ್ಥಿತಿ ಮುಗಿಯುವ ತನಕ ಬಂದ್
  • ಜಾತ್ರೆ/ ಧಾರ್ಮಿಕ ಕಾರ್ಯಕ್ರಮ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳಿಗೆ ಜನಸಂದಣಿ ಸೇರುವಂತಿಲ್ಲ.
  • ಸಾರ್ವಜನಿಕ ಪ್ರದೇಶದಲ್ಲಿ, ವಾಹನ ಚಾಲನೆ ಮಾಡುವಾಗ ಮಾಸ್ಕ್ ಧರಿಸುವುದು ಕಡ್ಡಾಯ.
  • ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಿಬಿಎಂಪಿ ವ್ಯಾಪ್ತಿ, ಮೈಸೂರು, ಕಲಬುರಗಿ, ದಕ್ಷಿಣ ಕನ್ನಡ, ಉಡುಪಿ, ಬೀದರ್ ಮತ್ತು ಹುಬ್ಬಳ್ಳಿ-ಧಾರವಾಡದಲ್ಲಿ ಪಬ್, ಬಾರ್, ಕ್ಲಬ್, ರೆಸ್ಟೋರೆಂಟ್‌ನಲ್ಲಿ ಶೇ 50ರಷ್ಟು ಜನರು ಸೇರಲು ಅವಕಾಶ
  • ಬಾರ್, ಪಬ್, ಕ್ಲಬ್, ರೆಸ್ಟೋರೆಂಟ್‌ಗಳಲ್ಲಿ ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯ. ಮಾಸ್ಕ್ ಧರಿಸುವುದು,
  • ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯ.
  •  6 ರಿಂದ 9ನೇ ತರಗತಿ, ವಿದ್ಯಾಗಮ ಸ್ಥಗಿತ. 10, 11 ಮತ್ತು 12ನೇ ತರಗತಿ ಮುಂದುವರಿಕೆ. ತರಗತಿಯಲ್ಲಿ ಖುದ್ದು ಹಾಜರಾತಿ ಕಡ್ಡಾಯವಲ್ಲ.
  •  ವಸತಿ ಶಾಲೆಗಳು ಹಾಗೂ ಬೋರ್ಡಿಂಗ್ ಇರುವ ಶಾಲೆಗಳಲ್ಲಿ 10, 11 ಹಾಗೂ 12ನೇ ತರಗತಿ ಬೋರ್ಡ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಹಾಗೂ ವೃತ್ತಿಪರ ಕೋರ್ಸ್‌ಗಳ ವಿಶ್ವವಿದ್ಯಾಲಯಗಳ ಪರೀಕ್ಷೆ ಬರೆಯುವವರು ಮತ್ತು ವೈದ್ಯಕೀಯ ಶಿಕ್ಷಣದ ತರಗತಿಗಳನ್ನು ಹೊರತುಪಡಿಸಿ, ಇತರ ಎಲ್ಲಾ ತರಗತಿಗಳನ್ನು ಸ್ಥಗಿತಗೊಳಿಸಲಾಗಿದೆ.
  • ಜಿಮ್, ಸ್ವಿಮ್ಮಿಂಗ್ ಪೂಲ್ ಮುಚ್ಚಲು ಆದೇಶ. ಯಾವುದೇ ಕಾರಣಕ್ಕೂ ಪ್ರತಿಭಟನೆ, ಜಾಥಗಳಿಗೆ ಅವಕಾಶವಿಲ್ಲ.
  • ದೇವಾಲಯ, ಪ್ರಾರ್ಥನಾ ಮಂದಿರಕ್ಕೆ ಜನರು ಭೇಟಿ ನೀಡಲು ಅವಕಾಶ. ಆದರೆ, ಗುಂಪು ಸೇರುವ ಕಾರ್ಯಕ್ರಮ ಮಾಡುವಂತಿಲ್ಲ.

 

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಣ್ಣುಗಳ ರಾಜ ಮಾವಿಗೂ ತಟ್ಟಿದ ಬಿಸಿಲಿನ ತಾಪ | 400 ಕೋಟಿ ಮೌಲ್ಯದ ಮಾವು ನಷ್ಟ |
May 13, 2024
8:32 PM
by: The Rural Mirror ಸುದ್ದಿಜಾಲ
Karnataka Weather |12-05-2024 | ಹಲವು ಕಡೆ ಮಳೆಯ ನಿರೀಕ್ಷೆ ಇದೆ |
May 12, 2024
11:56 AM
by: ಸಾಯಿಶೇಖರ್ ಕರಿಕಳ
ಕರ್ನಾಟಕದಾದ್ಯಂತ ಗೋಕೃಪಾಮೃತ ವಿತರಣೆ | ಗೋಕೃಪಾಮೃತ ಇರುವಾಗ ಕ್ರಿಮಿನಾಶಕಗಳ ಹಂಗೇಕೆ?
May 12, 2024
11:53 AM
by: The Rural Mirror ಸುದ್ದಿಜಾಲ
ಪುತ್ತೂರಿನಲ್ಲಿ ಹಲಸು ಹಣ್ಣು ಮೇಳ | ಸಮಗ್ರ ಕೃಷಿ ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶ
May 12, 2024
11:34 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror