Advertisement
MIRROR FOCUS

ಕೊರೋನಾ-2 ಕಂಟ್ರೋಲ್‌ 1.0 | ರಾಜ್ಯದಲ್ಲಿ ಲಾಕ್ಡೌನ್‌ ಬದಲು ನೂತನ ಮಾರ್ಗಸೂಚಿ | ಏನೇನು ಕ್ರಮಗಳು ?

Share

ದೇಶದಾದ್ಯಂತ ಮತ್ತೆ ಕೊರೋನಾ 2 ನೇ ಅಲೆ ಹೆಚ್ಚಾಗುತ್ತಿದೆ. ಇದೀಗ ಕೋವಿಡ್‌ ಅಲೆ ತಡೆಯಲು ಮತ್ತೆ ಸದ್ಯ ಲಾಕ್ಡೌನ್‌ ಬದಲಾಗಿ  ಕೊರೋನಾ-2 ತಡೆಯಲು ಮೊದಲನೆಯ ಹಂತದಲ್ಲಿ ಕಟ್ಟುನಿಟ್ಟಿನ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಏಪ್ರಿಲ್ 20 ರ ತನಕ ಈ ಮಾರ್ಗಸೂಚಿ ಜಾರಿಯಲ್ಲಿರುತ್ತದೆ. ಪರಿಸ್ಥಿತಿ ನೋಡಿಕೊಂಡು ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ.  ಕೊರೋನಾ ಪ್ರಕರಣಗಳು ಹೆಚ್ಚಿರುವ ಜಿಲ್ಲೆಗಳಿಗೆ ಕೆಲವೊಂದು ಹೆಚ್ಚಿನ ನಿರ್ಬಂಧಗಳನ್ನು ಹೇರಲಾಗಿದೆ.

ಮೊದಲನೆಯ ಯಂತದಲ್ಲಿ, ಶಾಪಿಂಗ್ ಮಾಲ್, ಡಿಪಾರ್ಟ್‌ಮೆಂಟ್ ಸ್ಟೋರ್ ಸೇರಿದಂತೆ ಇತರ ಕಡೆ ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯ.

  • ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯ. ನಿಯಮ ಉಲ್ಲಂಘನೆಯಾದರೆ ಕೋವಿಡ್ ಪರಿಸ್ಥಿತಿ ಮುಗಿಯುವ ತನಕ ಬಂದ್
  • ಜಾತ್ರೆ/ ಧಾರ್ಮಿಕ ಕಾರ್ಯಕ್ರಮ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳಿಗೆ ಜನಸಂದಣಿ ಸೇರುವಂತಿಲ್ಲ.
  • ಸಾರ್ವಜನಿಕ ಪ್ರದೇಶದಲ್ಲಿ, ವಾಹನ ಚಾಲನೆ ಮಾಡುವಾಗ ಮಾಸ್ಕ್ ಧರಿಸುವುದು ಕಡ್ಡಾಯ.
  • ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಿಬಿಎಂಪಿ ವ್ಯಾಪ್ತಿ, ಮೈಸೂರು, ಕಲಬುರಗಿ, ದಕ್ಷಿಣ ಕನ್ನಡ, ಉಡುಪಿ, ಬೀದರ್ ಮತ್ತು ಹುಬ್ಬಳ್ಳಿ-ಧಾರವಾಡದಲ್ಲಿ ಪಬ್, ಬಾರ್, ಕ್ಲಬ್, ರೆಸ್ಟೋರೆಂಟ್‌ನಲ್ಲಿ ಶೇ 50ರಷ್ಟು ಜನರು ಸೇರಲು ಅವಕಾಶ
  • ಬಾರ್, ಪಬ್, ಕ್ಲಬ್, ರೆಸ್ಟೋರೆಂಟ್‌ಗಳಲ್ಲಿ ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯ. ಮಾಸ್ಕ್ ಧರಿಸುವುದು,
  • ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯ.
  • 6 ರಿಂದ 9ನೇ ತರಗತಿ, ವಿದ್ಯಾಗಮ ಸ್ಥಗಿತ. 10, 11 ಮತ್ತು 12ನೇ ತರಗತಿ ಮುಂದುವರಿಕೆ. ತರಗತಿಯಲ್ಲಿ ಖುದ್ದು ಹಾಜರಾತಿ ಕಡ್ಡಾಯವಲ್ಲ.
  • ವಸತಿ ಶಾಲೆಗಳು ಹಾಗೂ ಬೋರ್ಡಿಂಗ್ ಇರುವ ಶಾಲೆಗಳಲ್ಲಿ 10, 11 ಹಾಗೂ 12ನೇ ತರಗತಿ ಬೋರ್ಡ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಹಾಗೂ ವೃತ್ತಿಪರ ಕೋರ್ಸ್‌ಗಳ ವಿಶ್ವವಿದ್ಯಾಲಯಗಳ ಪರೀಕ್ಷೆ ಬರೆಯುವವರು ಮತ್ತು ವೈದ್ಯಕೀಯ ಶಿಕ್ಷಣದ ತರಗತಿಗಳನ್ನು ಹೊರತುಪಡಿಸಿ, ಇತರ ಎಲ್ಲಾ ತರಗತಿಗಳನ್ನು ಸ್ಥಗಿತಗೊಳಿಸಲಾಗಿದೆ.
  • ಜಿಮ್, ಸ್ವಿಮ್ಮಿಂಗ್ ಪೂಲ್ ಮುಚ್ಚಲು ಆದೇಶ. ಯಾವುದೇ ಕಾರಣಕ್ಕೂ ಪ್ರತಿಭಟನೆ, ಜಾಥಗಳಿಗೆ ಅವಕಾಶವಿಲ್ಲ.
  • ದೇವಾಲಯ, ಪ್ರಾರ್ಥನಾ ಮಂದಿರಕ್ಕೆ ಜನರು ಭೇಟಿ ನೀಡಲು ಅವಕಾಶ. ಆದರೆ, ಗುಂಪು ಸೇರುವ ಕಾರ್ಯಕ್ರಮ ಮಾಡುವಂತಿಲ್ಲ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

5 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

13 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

14 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

16 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

19 hours ago