ಕೊರೋನಾ ಬಗ್ಗೆ ಇರಲಿ ಎಚ್ಚರ | ಲಾಕ್ಡೌನ್‌ ಬಗ್ಗೆ ಈಗ ಭಯವಿಲ್ಲ | ಮಾಸ್ಕ್‌ ಧರಿಸುವುದು ಇನ್ನು ಕಡ್ಡಾಯ

March 17, 2021
5:29 PM

ದೇಶದಲ್ಲಿ ಕೊರೋನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ನಡೆಸಿದ ವಿಡಿಯೋ ಕಾನ್ಫರೆನ್ಸ್ ಬಳಿಕ ಸುದ್ದಿಗೋಷ್ಟಿಯಲ್ಲಿ  ಮಾತನಾಡಿದ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ, ರಾಜ್ಯದಲ್ಲಿ  ಕೊರೋನಾ ಬಗ್ಗೆ ತೀರಾ ಎಚ್ಚರ ಅಗತ್ಯವಿದೆ. ಎಲ್ಲರೂ ಮುಂಜಾಗ್ರತಾ ಕ್ರಮ ವಹಿಸಬೇಕಿದೆ. ಮಾಸ್ಕ್ ಕಡ್ಡಾಯ ಮಾಡಬೇಕು, ಸಾಮಾಜಿಕ ಅಂತರ ಕಾಯ್ದುಗೊಳ್ಳಬೇಕು. ಸಮಾರಂಭಗಳಲ್ಲಿ ಜನಸಂದಣಿ ಕಡಿಮೆಬೇಕು. ಯಾವುದೇ ಲಾಕ್​ಡೌನ್ ಇರುವುದಿಲ್ಲ ಎಂದು ಹೇಳಿದ್ದಾರೆ.

ಈಗ ಮತ್ತೆ  ಕೊರೋನಾ ಬಗ್ಗೆ ಭಯ ಸೃಷ್ಠಿಸುವುದು ಬೇಡ, ಲಸಿಕೆ ಪಡೆಯಲು ಸಿದ್ಧವಿದೆ, ಕೊರತೆ ಆಗದಂತೆ ಪೂರೈಸಲು ಸರಕಾರ ಸಿದ್ಧವಿದೆ ಎಂದ ಯಡಿಯೂರಪ್ಪ, ಕೊರೋನಾ ಪರೀಕ್ಷೆ ಹೆಚ್ಚಳ ಹಾಗೂ 42 ಆಸ್ಪತ್ರೆಯಲ್ಲಿ ಚಿಕಿತ್ಸೆ, ಕಡ್ಡಾಯವಾಗಿ ಮಾಸ್ಕ್ ಬಳಕೆ, ಪ್ರಕರಣ ಹೆಚ್ಚಿರುವ ಜಿಲ್ಲೆಯಲ್ಲಿ ಟೆಸ್ಟ್ ಹೆಚ್ಚೆಸಲು ಪ್ರಧಾನಿ ಮೋದಿ ಸಲಹೆ ನೀಡಿದ್ದಾರೆ ಎಂದು ಬಿಎಸ್​ವೈ ಹೇಳಿದರು. ಕಲ್ಬುರ್ಗಿ, ಬೆಂಗಳೂರಿಗೆ ಹೆಚ್ಚು ಒತ್ತು ನೀಡಲಾಗಿದೆ. ಮೂರನೇ ಹಂತದ ಪಟ್ಟಣಗಳಿಗೂ ಟೆಸ್ಟ್ ಹೆಚ್ಚಿಸಲು ಸೂಚನೆ ನೀಡಲಾಗಿದೆ. ವ್ಯಾಕ್ಸಿನ್ ವೇಸ್ಟ್ ಆಗದಂತೆ ಕ್ರಮ ಕೈಗೊಳ್ಳುವುದು. ಹಳೆಯದನ್ನ ಖಾಲಿ ಮಾಡಿ, ಹೊಸತನ್ನು ಬಳಸಿಕೊಳ್ಳುವುದು ಎಂದು ಯಡಿಯೂರಪ್ಪ  ತಿಳಿಸಿದ್ದಾರೆ.

ಮಾಸ್ಕ್ ಕಡ್ಡಾಯ ಮಾಡಬೇಕು, ಸಾಮಾಜಿಕ ಅಂತರ ಕಾಯ್ದುಗೊಳ್ಳಬೇಕು. ಸಮಾರಂಭಗಳಲ್ಲಿ ಜನಸಂದಣಿ ಕಡಿಮೆಬೇಕು. ಸಾರ್ವಜನಿಕ ಸಭೆ ಸಮಾರಂಭದಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಸಿನಿಮಾ, ಹೋಟೆಲ್ ಮತ್ತೆಲ್ಲಾದ್ರೂ ಮಾಸ್ಕ್ ಬಳಕೆ ಕಡ್ಡಾಯ ಎಂದು ಬಿ ಎಸ್‌ ಯಡಿಯೂರಪ್ಪ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ
July 27, 2026
6:47 AM
by: ದ ರೂರಲ್ ಮಿರರ್.ಕಾಂ
ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ
July 27, 2026
6:33 AM
by: ದ ರೂರಲ್ ಮಿರರ್.ಕಾಂ
ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ
July 26, 2026
3:04 PM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror