Advertisement
ರಾಜ್ಯ

ಕೊರೋನಾ ಬಗ್ಗೆ ಇರಲಿ ಎಚ್ಚರ | ಲಾಕ್ಡೌನ್‌ ಬಗ್ಗೆ ಈಗ ಭಯವಿಲ್ಲ | ಮಾಸ್ಕ್‌ ಧರಿಸುವುದು ಇನ್ನು ಕಡ್ಡಾಯ

Share

ದೇಶದಲ್ಲಿ ಕೊರೋನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ನಡೆಸಿದ ವಿಡಿಯೋ ಕಾನ್ಫರೆನ್ಸ್ ಬಳಿಕ ಸುದ್ದಿಗೋಷ್ಟಿಯಲ್ಲಿ  ಮಾತನಾಡಿದ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ, ರಾಜ್ಯದಲ್ಲಿ  ಕೊರೋನಾ ಬಗ್ಗೆ ತೀರಾ ಎಚ್ಚರ ಅಗತ್ಯವಿದೆ. ಎಲ್ಲರೂ ಮುಂಜಾಗ್ರತಾ ಕ್ರಮ ವಹಿಸಬೇಕಿದೆ. ಮಾಸ್ಕ್ ಕಡ್ಡಾಯ ಮಾಡಬೇಕು, ಸಾಮಾಜಿಕ ಅಂತರ ಕಾಯ್ದುಗೊಳ್ಳಬೇಕು. ಸಮಾರಂಭಗಳಲ್ಲಿ ಜನಸಂದಣಿ ಕಡಿಮೆಬೇಕು. ಯಾವುದೇ ಲಾಕ್​ಡೌನ್ ಇರುವುದಿಲ್ಲ ಎಂದು ಹೇಳಿದ್ದಾರೆ.

ಈಗ ಮತ್ತೆ  ಕೊರೋನಾ ಬಗ್ಗೆ ಭಯ ಸೃಷ್ಠಿಸುವುದು ಬೇಡ, ಲಸಿಕೆ ಪಡೆಯಲು ಸಿದ್ಧವಿದೆ, ಕೊರತೆ ಆಗದಂತೆ ಪೂರೈಸಲು ಸರಕಾರ ಸಿದ್ಧವಿದೆ ಎಂದ ಯಡಿಯೂರಪ್ಪ, ಕೊರೋನಾ ಪರೀಕ್ಷೆ ಹೆಚ್ಚಳ ಹಾಗೂ 42 ಆಸ್ಪತ್ರೆಯಲ್ಲಿ ಚಿಕಿತ್ಸೆ, ಕಡ್ಡಾಯವಾಗಿ ಮಾಸ್ಕ್ ಬಳಕೆ, ಪ್ರಕರಣ ಹೆಚ್ಚಿರುವ ಜಿಲ್ಲೆಯಲ್ಲಿ ಟೆಸ್ಟ್ ಹೆಚ್ಚೆಸಲು ಪ್ರಧಾನಿ ಮೋದಿ ಸಲಹೆ ನೀಡಿದ್ದಾರೆ ಎಂದು ಬಿಎಸ್​ವೈ ಹೇಳಿದರು. ಕಲ್ಬುರ್ಗಿ, ಬೆಂಗಳೂರಿಗೆ ಹೆಚ್ಚು ಒತ್ತು ನೀಡಲಾಗಿದೆ. ಮೂರನೇ ಹಂತದ ಪಟ್ಟಣಗಳಿಗೂ ಟೆಸ್ಟ್ ಹೆಚ್ಚಿಸಲು ಸೂಚನೆ ನೀಡಲಾಗಿದೆ. ವ್ಯಾಕ್ಸಿನ್ ವೇಸ್ಟ್ ಆಗದಂತೆ ಕ್ರಮ ಕೈಗೊಳ್ಳುವುದು. ಹಳೆಯದನ್ನ ಖಾಲಿ ಮಾಡಿ, ಹೊಸತನ್ನು ಬಳಸಿಕೊಳ್ಳುವುದು ಎಂದು ಯಡಿಯೂರಪ್ಪ  ತಿಳಿಸಿದ್ದಾರೆ.

ಮಾಸ್ಕ್ ಕಡ್ಡಾಯ ಮಾಡಬೇಕು, ಸಾಮಾಜಿಕ ಅಂತರ ಕಾಯ್ದುಗೊಳ್ಳಬೇಕು. ಸಮಾರಂಭಗಳಲ್ಲಿ ಜನಸಂದಣಿ ಕಡಿಮೆಬೇಕು. ಸಾರ್ವಜನಿಕ ಸಭೆ ಸಮಾರಂಭದಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಸಿನಿಮಾ, ಹೋಟೆಲ್ ಮತ್ತೆಲ್ಲಾದ್ರೂ ಮಾಸ್ಕ್ ಬಳಕೆ ಕಡ್ಡಾಯ ಎಂದು ಬಿ ಎಸ್‌ ಯಡಿಯೂರಪ್ಪ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್‌ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…

5 hours ago

ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!

ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…

6 hours ago

ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ

ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…

6 hours ago

ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!

ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…

12 hours ago

ಹವಾಮಾನ ವರದಿ | 09-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ..! ಜುಲೈ 11 ರಿಂದ ಮಳೆ ಮತ್ತಷ್ಟು ಇಳಿಕೆ, ಬಿಸಿಲಿನ ಅವಧಿ ಹೆಚ್ಚಳ ಸಾಧ್ಯ

ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…

14 hours ago

ಜುಲೈ ಮಳೆಯಿಂದ ದೇಶಕ್ಕೆ ನೆಮ್ಮದಿ…! ಮಳೆ ಕೊರತೆ 12%ಕ್ಕೆ ಇಳಿಕೆ

ಜುಲೈ ಮೊದಲ ವಾರದ ಉತ್ತಮ ಮಳೆಯಿಂದ ದೇಶದ ಮಳೆ ಕೊರತೆ 12%ಕ್ಕೆ ಇಳಿದಿದೆ.…

14 hours ago