Advertisement
MIRROR FOCUS

ದ ಕ ಜಿಲ್ಲೆಯಲ್ಲಿ ಕೋವಿಡ್‌ ನಿಯಮ ಹೇಗೆ ? | ಗೊಂದಲ ಬೇಡವೆಂದ ಜಿಲ್ಲಾ ಉಸ್ತುವಾರಿ ಸಚಿವರು..!

Share

ಕೊರೋನಾ ನಿಯಮಾವಳಿಗಳು ದ ಕ ಜಿಲ್ಲೆಯಲ್ಲಿ ಹೇಗೆ ? ಹೀಗೊಂದು ಗೊಂದಲದ ಚರ್ಚೆ ಆರಂಭವಾಗಿದೆ. 

ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಲ್ಲ ಧಾರ್ಮಿಕ ಸ್ಥಳಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಜಾತ್ರೆ, ಸಭೆ, ಸಮಾರಂಭ ಹಾಗೂ ಆಚರಣೆಗಳನ್ನು ನಿಷೇಧಿಸಿ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.ಸಾರ್ವಜನಿಕ ಆರೋಗ್ಯ ಕಾಪಾಡುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 144 (3) ಸೆಕ್ಷನ್ ಜಾರಿ ಮಾಡಲಾಗಿತ್ತು.

ಅದಾಗಿ ಇದೀಗ ಜಿಲ್ಲಾ ಉಸ್ತುವಾರಿ ಸಚಿವರು ಈಗಾಗಲೇ ಹಮ್ಮಿಕೊಂಡಿರುವ ಯಕ್ಷಗಾನ , ಕೋಲ ,ನೇಮ ,ಪೂಜೆ , ಮತ್ತು ಸಾಂಪ್ರದಾಯಿಕ ಧಾರ್ಮಿಕ ಕಾರ್ಯಕ್ರಮಗಳು ಕೋವಿಡ್  ನಿಯಮಪಾಲನೆಯೊಂದಿಗೆ ನಡೆಸಬಹುದಾಗಿದೆ ಎಂದು  ಸ್ಪಷ್ಟನೆ ನೀಡಿದ್ದಾರೆ.

ಈಗ ಜನಸಾಮಾನ್ಯರಲ್ಲಿ ಇರುವ ಪ್ರಶ್ನೆ, ಕೋವಿಡ್‌ ನಿಯಮ ಯಾವುದು ?

ದಕ ಜಿಲ್ಲಾಧಿಕಾರಿಯವರು  ಈಗಾಗಲೇ ಆದೇಶ ಮಾಡಿದಂತೆ, ಮುಂಬರುವ ಧಾರ್ಮಿಕ ಹಬ್ಬಗಳಾದ ಹೋಳಿ, ಯುಗಾದಿ, ಷಬ್-ಎ-ಬರಾತ್, ಗುಡ್‌ಫ್ರೈ ಡೇ ಸಂದರ್ಭಗಳಲ್ಲಿ ಜಿಲ್ಲೆಯ ಯಾವುದೇ ಸಾರ್ವಜನಿಕ ಸ್ಥಳ, ಮೈದಾನ, ಉದ್ಯಾನವನ, ಮಾರುಕಟ್ಟೆ, ಧಾರ್ಮಿಕ ಪ್ರದೇಶಗಳಲ್ಲಿ ಸಾರ್ವಜನಿಕ ಸಮಾರಂಭ, ಸಭೆ ನಡೆಸುವುದನ್ನು, ಜಾತ್ರೆ,ಮೇಳಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರು ಕೋವಿಡ್ ನಿಯಮಾವಳಿ ಪಾಲಿಸಬೇಕು. ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು, ಸಾರ್ವಜನಿಕ ಸ್ಥಳದಲ್ಲಿ ಉಗುಳಬಾರದು. ನಿಯಮ ಉಲ್ಲಂಘಿಸಿದರೆ ಸಂಬಂಧಪಟ್ಟ ಅಧಿಕಾರಿಗಳು ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರು ಗುಂಪಾಗಿ ಹೆಚ್ಚು ಸೇರುವಂತಹ ಜಾತ್ರೆ, ಮೇಳ, ಸಮಾವೇಶ, ಸಮ್ಮೇಳನ, ಆಚರಣೆ ಹಾಗೂ ಧಾರ್ಮಿಕ ಸಮಾರಂಭಗಳಲ್ಲಿ ಕೊರೋನ ವೈರಸ್‌ ಸೋಂಕು ಹರಡುವ ಸಾಧ್ಯಗಳಿವೆ. ಈ ಹಿನ್ನೆಲೆಯಲ್ಲಿ ಸೋಂಕನ್ನು ನಿಯಂತ್ರಿಸುವ ದೃಷ್ಟಿಯಿಂದ ಮುಂದಿನ ಸೂಚನೆಯ ವರೆಗೆ ಜಿಲ್ಲೆಯಾದ್ಯಂತ ಮೇಲೆ ತಿಳಿಸಿರುವ ಸಾರ್ವಜನಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸ ಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

ಅದಾದ ಬೆನ್ನಲ್ಲೇ ಜಿಲ್ಲಾ ಉಸ್ತುವಾರಿ ಸಚಿವರು, ಕೋವಿಡ್‌ ಪರಿಣಾಮಕಾರಿಯಾಗಿ ನಿಯಂತ್ರಿಸುವ ದೃಷ್ಟಿಯಿಂದ ದ.ಕ.ಜಿಲ್ಲಾಧಿಕಾರಿಯವರು ಹೊರಡಿಸಿರುವ ಆದೇಶಕ್ಕೆ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದು , ಮರುಸ್ಪಷ್ಟನೆ ನೀಡಲು ಜಿಲ್ಲಾಧಿಕಾರಿಯವರಿಗೆ ಸೂಚಿಸಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಈಗಾಗಲೇ ಹಮ್ಮಿಕೊಂಡಿರುವ ಯಕ್ಷಗಾನ , ಕೋಲ ,ನೇಮ ,ಪೂಜೆ , ಮತ್ತು ಸಾಂಪ್ರದಾಯಿಕ ಧಾರ್ಮಿಕ ಕಾರ್ಯಕ್ರಮಗಳು ಕೊವಿಡ್ -19 ನಿಯಮಪಾಲನೆಯೊಂದಿಗೆ ನಡೆಸಬಹುದಾಗಿದೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ . ಬಯಲು, ಮೈದಾನ ಪ್ರದೇಶದಲ್ಲಿ ಗರಿಷ್ಟ 500 ಜನಕ್ಕಿಂತ ಜಾಸ್ತಿ ಸೇರುವಂತಿಲ್ಲ . ಕಡ್ಡಾಯವಾಗಿ ಮಾಸ್ಕ್ ಧರಿಸಿ , ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಸಾರ್ವಜನಿಕರ ಜವಾಬ್ದಾರಿಯಾಗಿದೆ ಎಂದು ಸಚಿವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಜನಸಾಮಾನ್ಯರಲ್ಲಿ  ಈಗಾಗಲೇ ಇರುವ ಆತಂಕ ಏನೆಂದರೆ ಜಾತ್ರೆ ಹಾಗೂ ನೇಮ, ಕೋಲಗಳದ್ದು. ತುಳುನಾಡು ದೈವಗಳ ಆರಾಧನೆ ಪ್ರದೇಶ. ಇಲ್ಲಿ ಪ್ರತೀ ವರ್ಷವೂ ಕೂಡಾ ದೈವಗಳ ನೇಮ ನಡೆಯುವ ಸ್ಥಳಗಳು ಇರುತ್ತದೆ. ಇಂತಹ ಕಡೆಗಳಲ್ಲಿ ಕಳೆದ ವರ್ಷವೂ ನೇಮ, ಕೋಲ ನಡೆಯಲಿಲ್ಲ. ಈ ಬಾರಿಯೂ ನಡೆಯದೇ ಇದ್ದರೆ ಹೇಗೆ ? ನಂಬಿಕೆಯ ಜಾತ್ರೆಗಳು ನಡೆಯುವುದು  ಹೇಗೆ ಎಂಬ ಪ್ರಶ್ನೆ ಇದೆ. ಹೀಗಾಗಿ ಈ ಗೊಂದಲಗಳ ನಿವಾರಣೆಯಾಗಬೇಕಿದೆ. ಅದರ ಜೊತೆಗೆ ಯಕ್ಷಗಾನಗಳು ಈ ನೆಲದ ಕಲೆಯಾಗಿದೆ. ಅನೇಕ ಕಲಾವಿದರಿಗೆ ಯಕ್ಷಗಾನವೇ ಆಧಾರವಾಗಿರುತ್ತದೆ. ಇಂತಹವರಿಗೆ ಪರ್ಯಾಯ ವ್ಯವಸ್ಥೆ ಏನು ಇತ್ಯಾದಿ ಪ್ರಶ್ನೆಗಳ ನಡುವೆಯೂ ಕೊರೋನಾ ನಿಯಂತ್ರಣ ಮಾಡಬೇಕಿರುವುದು  ಇಂದಿನ ಸವಾಲಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

3 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

9 hours ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

10 hours ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

10 hours ago

ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸೌಲಭ್ಯ ಘೋಷಣೆ : ರೈತರ ಆರ್ಥಿಕ ಭದ್ರತೆಗೆ ಕೇಂದ್ರ ಬದ್ಧ

ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…

10 hours ago

ವನ್ಯಜೀವಿಗಳ ಸಂತಾನ ನಿಯಂತ್ರಣಕ್ಕೆ ತಜ್ಞರ ಚರ್ಚೆ ಅಗತ್ಯ

ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…

10 hours ago