Advertisement
MIRROR FOCUS

ದ ಕ ಜಿಲ್ಲೆಯಲ್ಲಿ ಕೋವಿಡ್‌ ನಿಯಮ ಹೇಗೆ ? | ಗೊಂದಲ ಬೇಡವೆಂದ ಜಿಲ್ಲಾ ಉಸ್ತುವಾರಿ ಸಚಿವರು..!

Share

ಕೊರೋನಾ ನಿಯಮಾವಳಿಗಳು ದ ಕ ಜಿಲ್ಲೆಯಲ್ಲಿ ಹೇಗೆ ? ಹೀಗೊಂದು ಗೊಂದಲದ ಚರ್ಚೆ ಆರಂಭವಾಗಿದೆ. 

ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಲ್ಲ ಧಾರ್ಮಿಕ ಸ್ಥಳಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಜಾತ್ರೆ, ಸಭೆ, ಸಮಾರಂಭ ಹಾಗೂ ಆಚರಣೆಗಳನ್ನು ನಿಷೇಧಿಸಿ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.ಸಾರ್ವಜನಿಕ ಆರೋಗ್ಯ ಕಾಪಾಡುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 144 (3) ಸೆಕ್ಷನ್ ಜಾರಿ ಮಾಡಲಾಗಿತ್ತು.

ಅದಾಗಿ ಇದೀಗ ಜಿಲ್ಲಾ ಉಸ್ತುವಾರಿ ಸಚಿವರು ಈಗಾಗಲೇ ಹಮ್ಮಿಕೊಂಡಿರುವ ಯಕ್ಷಗಾನ , ಕೋಲ ,ನೇಮ ,ಪೂಜೆ , ಮತ್ತು ಸಾಂಪ್ರದಾಯಿಕ ಧಾರ್ಮಿಕ ಕಾರ್ಯಕ್ರಮಗಳು ಕೋವಿಡ್  ನಿಯಮಪಾಲನೆಯೊಂದಿಗೆ ನಡೆಸಬಹುದಾಗಿದೆ ಎಂದು  ಸ್ಪಷ್ಟನೆ ನೀಡಿದ್ದಾರೆ.

ಈಗ ಜನಸಾಮಾನ್ಯರಲ್ಲಿ ಇರುವ ಪ್ರಶ್ನೆ, ಕೋವಿಡ್‌ ನಿಯಮ ಯಾವುದು ?

ದಕ ಜಿಲ್ಲಾಧಿಕಾರಿಯವರು  ಈಗಾಗಲೇ ಆದೇಶ ಮಾಡಿದಂತೆ, ಮುಂಬರುವ ಧಾರ್ಮಿಕ ಹಬ್ಬಗಳಾದ ಹೋಳಿ, ಯುಗಾದಿ, ಷಬ್-ಎ-ಬರಾತ್, ಗುಡ್‌ಫ್ರೈ ಡೇ ಸಂದರ್ಭಗಳಲ್ಲಿ ಜಿಲ್ಲೆಯ ಯಾವುದೇ ಸಾರ್ವಜನಿಕ ಸ್ಥಳ, ಮೈದಾನ, ಉದ್ಯಾನವನ, ಮಾರುಕಟ್ಟೆ, ಧಾರ್ಮಿಕ ಪ್ರದೇಶಗಳಲ್ಲಿ ಸಾರ್ವಜನಿಕ ಸಮಾರಂಭ, ಸಭೆ ನಡೆಸುವುದನ್ನು, ಜಾತ್ರೆ,ಮೇಳಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರು ಕೋವಿಡ್ ನಿಯಮಾವಳಿ ಪಾಲಿಸಬೇಕು. ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು, ಸಾರ್ವಜನಿಕ ಸ್ಥಳದಲ್ಲಿ ಉಗುಳಬಾರದು. ನಿಯಮ ಉಲ್ಲಂಘಿಸಿದರೆ ಸಂಬಂಧಪಟ್ಟ ಅಧಿಕಾರಿಗಳು ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರು ಗುಂಪಾಗಿ ಹೆಚ್ಚು ಸೇರುವಂತಹ ಜಾತ್ರೆ, ಮೇಳ, ಸಮಾವೇಶ, ಸಮ್ಮೇಳನ, ಆಚರಣೆ ಹಾಗೂ ಧಾರ್ಮಿಕ ಸಮಾರಂಭಗಳಲ್ಲಿ ಕೊರೋನ ವೈರಸ್‌ ಸೋಂಕು ಹರಡುವ ಸಾಧ್ಯಗಳಿವೆ. ಈ ಹಿನ್ನೆಲೆಯಲ್ಲಿ ಸೋಂಕನ್ನು ನಿಯಂತ್ರಿಸುವ ದೃಷ್ಟಿಯಿಂದ ಮುಂದಿನ ಸೂಚನೆಯ ವರೆಗೆ ಜಿಲ್ಲೆಯಾದ್ಯಂತ ಮೇಲೆ ತಿಳಿಸಿರುವ ಸಾರ್ವಜನಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸ ಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

ಅದಾದ ಬೆನ್ನಲ್ಲೇ ಜಿಲ್ಲಾ ಉಸ್ತುವಾರಿ ಸಚಿವರು, ಕೋವಿಡ್‌ ಪರಿಣಾಮಕಾರಿಯಾಗಿ ನಿಯಂತ್ರಿಸುವ ದೃಷ್ಟಿಯಿಂದ ದ.ಕ.ಜಿಲ್ಲಾಧಿಕಾರಿಯವರು ಹೊರಡಿಸಿರುವ ಆದೇಶಕ್ಕೆ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದು , ಮರುಸ್ಪಷ್ಟನೆ ನೀಡಲು ಜಿಲ್ಲಾಧಿಕಾರಿಯವರಿಗೆ ಸೂಚಿಸಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಈಗಾಗಲೇ ಹಮ್ಮಿಕೊಂಡಿರುವ ಯಕ್ಷಗಾನ , ಕೋಲ ,ನೇಮ ,ಪೂಜೆ , ಮತ್ತು ಸಾಂಪ್ರದಾಯಿಕ ಧಾರ್ಮಿಕ ಕಾರ್ಯಕ್ರಮಗಳು ಕೊವಿಡ್ -19 ನಿಯಮಪಾಲನೆಯೊಂದಿಗೆ ನಡೆಸಬಹುದಾಗಿದೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ . ಬಯಲು, ಮೈದಾನ ಪ್ರದೇಶದಲ್ಲಿ ಗರಿಷ್ಟ 500 ಜನಕ್ಕಿಂತ ಜಾಸ್ತಿ ಸೇರುವಂತಿಲ್ಲ . ಕಡ್ಡಾಯವಾಗಿ ಮಾಸ್ಕ್ ಧರಿಸಿ , ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಸಾರ್ವಜನಿಕರ ಜವಾಬ್ದಾರಿಯಾಗಿದೆ ಎಂದು ಸಚಿವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಜನಸಾಮಾನ್ಯರಲ್ಲಿ  ಈಗಾಗಲೇ ಇರುವ ಆತಂಕ ಏನೆಂದರೆ ಜಾತ್ರೆ ಹಾಗೂ ನೇಮ, ಕೋಲಗಳದ್ದು. ತುಳುನಾಡು ದೈವಗಳ ಆರಾಧನೆ ಪ್ರದೇಶ. ಇಲ್ಲಿ ಪ್ರತೀ ವರ್ಷವೂ ಕೂಡಾ ದೈವಗಳ ನೇಮ ನಡೆಯುವ ಸ್ಥಳಗಳು ಇರುತ್ತದೆ. ಇಂತಹ ಕಡೆಗಳಲ್ಲಿ ಕಳೆದ ವರ್ಷವೂ ನೇಮ, ಕೋಲ ನಡೆಯಲಿಲ್ಲ. ಈ ಬಾರಿಯೂ ನಡೆಯದೇ ಇದ್ದರೆ ಹೇಗೆ ? ನಂಬಿಕೆಯ ಜಾತ್ರೆಗಳು ನಡೆಯುವುದು  ಹೇಗೆ ಎಂಬ ಪ್ರಶ್ನೆ ಇದೆ. ಹೀಗಾಗಿ ಈ ಗೊಂದಲಗಳ ನಿವಾರಣೆಯಾಗಬೇಕಿದೆ. ಅದರ ಜೊತೆಗೆ ಯಕ್ಷಗಾನಗಳು ಈ ನೆಲದ ಕಲೆಯಾಗಿದೆ. ಅನೇಕ ಕಲಾವಿದರಿಗೆ ಯಕ್ಷಗಾನವೇ ಆಧಾರವಾಗಿರುತ್ತದೆ. ಇಂತಹವರಿಗೆ ಪರ್ಯಾಯ ವ್ಯವಸ್ಥೆ ಏನು ಇತ್ಯಾದಿ ಪ್ರಶ್ನೆಗಳ ನಡುವೆಯೂ ಕೊರೋನಾ ನಿಯಂತ್ರಣ ಮಾಡಬೇಕಿರುವುದು  ಇಂದಿನ ಸವಾಲಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಮಯ ತಪ್ಪಿ ತಿಂದ ಆಹಾರವೇ ವಿಷವಾಗಬಹುದು – ರಾಘವೇಶ್ವರ ಶ್ರೀ

ಹಿತವಾದ ಆಹಾರವನ್ನು ಮಿತ ಪ್ರಮಾಣದಲ್ಲಿ ಮತ್ತು ಸಕಾಲದಲ್ಲಿ ಸೇವಿಸುವುದು ಆರೋಗ್ಯಕರ ಜೀವನದ ಮೂಲಮಂತ್ರ…

4 hours ago

ಭಾರೀ ಮಳೆ ಹಿನ್ನೆಲೆ – ಆಗಸ್ಟ್‌ 1ರಂದು ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…

5 hours ago

ಹವಾಮಾನ ವರದಿ | 31-06-2026 | ಆಗಸ್ಟ್ 4ಕ್ಕೆ ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ..?

ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…

8 hours ago

ಸುಳ್ಯ ಸುತ್ತಮುತ್ತ ಭಾರೀ ಮಳೆ – ಬಾಳುಗೋಡಿನಲ್ಲಿ ಈ ವರ್ಷದ ಮೊದಲ ಸೇತುವೆ ಮುಳುಗಡೆ, ಹೊಳೆ-ತೋಡುಗಳು ತುಂಬಿ ಹರಿವು

ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…

8 hours ago

ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ – ಬಾಂಗ್ಲಾದೇಶದ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನಕ್ಕೆ ಪೇಟೆಂಟ್

ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…

15 hours ago