Advertisement
MIRROR FOCUS

ಕೊರೋನಾ ಅಬ್ಬರ | ಸಾರ್ವಜನಿಕ ಸಮಾರಂಭ, ಆಚರಣೆಗಳಿಗೆ ಪಾಸ್ ಕಡ್ಡಾಯ | ಕೋವಿಡ್‌ ನಿಯಮ ಕಡ್ಡಾಯಕ್ಕೆ ಜಿಲ್ಲಾಧಿಕಾರಿ ಆದೇಶ |

Share

ಕೊರೋನಾ ಅಬ್ಬರ ಹೆಚ್ಚುತ್ತಿದೆ. ನಗರ ಪ್ರದೇಶ ಮಾತ್ರವಲ್ಲ ಹಳ್ಳಿಗಳಲ್ಲೂ ಕೊರೋನಾ ಭಯ ಹೆಚ್ಚಿದೆ. ಇದಕ್ಕಾಗಿ ಎಲ್ಲೆಡೆಯೂ ಎಚ್ಚರ ಅಗತ್ಯವಾಗಿದೆ. ಈ ಕಾರಣದಿಂದ ದ ಕ ಜಿಲ್ಲಾಧಿಕಾರಿಗಳಿ ಡಾ.ರಾಜೇಂದ್ರ ಕೆ ವಿ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.

ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವೆಂದು ಮನಗಂಡು ಸಾರ್ವಜನಿಕ ಸಮಾರಂಭ ಆಚರಣೆಗಳು, ಕಾರ್ಯಕ್ರಗಳಿಗೆ ಜನರ ಒಗ್ಗೂಡುವಿಕೆಗೆ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ನಿರ್ದೇಶಿಸಿದ್ದಾರೆ.

ಜಿಲ್ಲೆಯಾದ್ಯಂತ ಸಾರ್ವಜನಿಕ ಸಮಾರಂಭ, ಆಚರಣೆಗಳು, ಮನೋರಂಜನೆ ಕಾರ್ಯಕ್ರಮಗಳಿಗೆ ಜನರ ಒಗ್ಗೂಡುವಿಕೆಗೆ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ಮದುವೆ ಸಮಾರಂಭಗಳು – ತೆರೆದ ಪ್ರದೇಶಗಳಲ್ಲಿ 200 ಜನರು ಹಾಗೂ ಕಲ್ಯಾಣ ಮಂಟಪ, ಸಭಾಂಗಣ, ಹಾಲ್‍ಗಳು ಇತ್ಯಾದಿ ಮುಚ್ಚಿದ ಸ್ಥಳಗಳಲ್ಲಿ 100 ಜನರು ಪಾಲ್ಗೊಳ್ಳಬಹುದು. ಜನ್ಮ ದಿನ ಹಾಗೂ ಇತರೆ ಆಚರಣೆಗಳು ತೆರೆದ ಪ್ರದೇಶಗಳಲ್ಲಿ 50 ಜನರು ಹಾಗೂ ಸಭಾಂಗಣಗಳು, ಹಾಲ್‍ಗಳು, ಇತ್ಯಾದಿ ಮುಚ್ಚಿದ ಪ್ರದೇಶಗಳಲ್ಲಿ 25 ಜನರು, ನಿಧನ ಅಥವಾ ಶವಸಂಸ್ಕಾರ ತೆರೆದ ಪ್ರದೇಶಗಳಲ್ಲಿ 50 ಜನರು ಹಾಗೂ ಸಭಾಂಗಣಗಳು, ಹಾಲ್‍ಗಳು, ಇತ್ಯಾದಿ ಮುಚ್ಚಿದ ಪ್ರದೇಶಗಳಲ್ಲಿ 25 ಜನರು, ಅಂತ್ಯ ಕ್ರಿಯೆಗೆ 25 ಜನರು ಹಾಗೂ ಇತರೆ ಸಮಾರಂಭಗಳಿಗೆ ಹಾಲ್‍ನ ವಿಸ್ತೀರ್ಣಕ್ಕೆ ಅನುಗುಣವಾಗಿ 25 ಜನರು ಮತ್ತು ರಾಜಕೀಯ ಆಚರಣೆ ಹಾಗೂ ಸಮಾರಂಭಗಳಿಗೆ ತೆರೆದ ಪ್ರದೇಶಗಳಲ್ಲಿ 200 ಜನರು ಪಾಲ್ಗೊಳ್ಳಬಹುದು ಹಾಗೂ ಧಾರ್ಮಿಕ ಆಚರಣೆ ಹಾಗೂ ಸಮಾರಂಭಗಳನ್ನು ನಿಷೇಧಿಸಲಾಗಿದೆ.

ಜಿಲ್ಲೆಯಲ್ಲಿ ಮಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ಪಾಲಿಕೆಯ ಆಯುಕ್ತರು,  ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಮುಖ್ಯಾಧಿಕಾರಿಗಳು, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸಾರ್ವಜನಿಕ ಸಮಾರಂಭ ಆಚರಣೆಗಳು, ಮನರಂಜನೆ ಕಾರ್ಯಕ್ರಮಗಳಿಗೆ ಜನರ ಒಗ್ಗೂಡುವಿಕೆಗೆ ಪಾಸ್‍ಗಳನ್ನು ವಿತರಿಸಲು ಕ್ರಮ ಕೈಗೊಳ್ಳಲು ನಿರ್ದೇಶಿಸಲಾಗಿದೆ.

ಜನರು ಕಡ್ಡಾಯವಾಗಿ ಭಾರತ ಸರ್ಕಾರ ಮತ್ತು ರಾಜ್ಯ ಸರ್ಕಾರದ ಸಂಬಂಧಪಟ್ಟ ಇಲಾಖೆಗಳು ಹೊರಡಿಸಿರುವ ಪ್ರಮಾಣಿತ ಕಾರ್ಯ ವಿಧಾನವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸಭಾಂಗಣ, ಕಲ್ಯಾಣ ಮಂಟಪ, ಸಿನಿಮಾ ಮಂದಿರ, ಹಾಲ್‍ಗಳು ಮತ್ತು ಆಚರಣೆಗಾಗಿ ಜನಸೇರುವ ಇತರೆ ಪ್ರದೇಶಗಳ ಉಸ್ತುವಾರಿ ಹೊಂದಿರುವವರು ಕಡ್ಡಾಯವಾಗಿ ಸ್ಯಾನಿಟೈಸೇಷನ್ ಕ್ರಮಗಳನ್ನು ಅನುಸರಿಸಬೇಕು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…

10 hours ago

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

1 day ago

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…

1 day ago

ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!

ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…

2 days ago

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

3 days ago