Advertisement
MIRROR FOCUS

ಕೊರೋನಾ ಅಬ್ಬರ | ಸಾರ್ವಜನಿಕ ಸಮಾರಂಭ, ಆಚರಣೆಗಳಿಗೆ ಪಾಸ್ ಕಡ್ಡಾಯ | ಕೋವಿಡ್‌ ನಿಯಮ ಕಡ್ಡಾಯಕ್ಕೆ ಜಿಲ್ಲಾಧಿಕಾರಿ ಆದೇಶ |

Share

ಕೊರೋನಾ ಅಬ್ಬರ ಹೆಚ್ಚುತ್ತಿದೆ. ನಗರ ಪ್ರದೇಶ ಮಾತ್ರವಲ್ಲ ಹಳ್ಳಿಗಳಲ್ಲೂ ಕೊರೋನಾ ಭಯ ಹೆಚ್ಚಿದೆ. ಇದಕ್ಕಾಗಿ ಎಲ್ಲೆಡೆಯೂ ಎಚ್ಚರ ಅಗತ್ಯವಾಗಿದೆ. ಈ ಕಾರಣದಿಂದ ದ ಕ ಜಿಲ್ಲಾಧಿಕಾರಿಗಳಿ ಡಾ.ರಾಜೇಂದ್ರ ಕೆ ವಿ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.

ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವೆಂದು ಮನಗಂಡು ಸಾರ್ವಜನಿಕ ಸಮಾರಂಭ ಆಚರಣೆಗಳು, ಕಾರ್ಯಕ್ರಗಳಿಗೆ ಜನರ ಒಗ್ಗೂಡುವಿಕೆಗೆ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ನಿರ್ದೇಶಿಸಿದ್ದಾರೆ.

ಜಿಲ್ಲೆಯಾದ್ಯಂತ ಸಾರ್ವಜನಿಕ ಸಮಾರಂಭ, ಆಚರಣೆಗಳು, ಮನೋರಂಜನೆ ಕಾರ್ಯಕ್ರಮಗಳಿಗೆ ಜನರ ಒಗ್ಗೂಡುವಿಕೆಗೆ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ಮದುವೆ ಸಮಾರಂಭಗಳು – ತೆರೆದ ಪ್ರದೇಶಗಳಲ್ಲಿ 200 ಜನರು ಹಾಗೂ ಕಲ್ಯಾಣ ಮಂಟಪ, ಸಭಾಂಗಣ, ಹಾಲ್‍ಗಳು ಇತ್ಯಾದಿ ಮುಚ್ಚಿದ ಸ್ಥಳಗಳಲ್ಲಿ 100 ಜನರು ಪಾಲ್ಗೊಳ್ಳಬಹುದು. ಜನ್ಮ ದಿನ ಹಾಗೂ ಇತರೆ ಆಚರಣೆಗಳು ತೆರೆದ ಪ್ರದೇಶಗಳಲ್ಲಿ 50 ಜನರು ಹಾಗೂ ಸಭಾಂಗಣಗಳು, ಹಾಲ್‍ಗಳು, ಇತ್ಯಾದಿ ಮುಚ್ಚಿದ ಪ್ರದೇಶಗಳಲ್ಲಿ 25 ಜನರು, ನಿಧನ ಅಥವಾ ಶವಸಂಸ್ಕಾರ ತೆರೆದ ಪ್ರದೇಶಗಳಲ್ಲಿ 50 ಜನರು ಹಾಗೂ ಸಭಾಂಗಣಗಳು, ಹಾಲ್‍ಗಳು, ಇತ್ಯಾದಿ ಮುಚ್ಚಿದ ಪ್ರದೇಶಗಳಲ್ಲಿ 25 ಜನರು, ಅಂತ್ಯ ಕ್ರಿಯೆಗೆ 25 ಜನರು ಹಾಗೂ ಇತರೆ ಸಮಾರಂಭಗಳಿಗೆ ಹಾಲ್‍ನ ವಿಸ್ತೀರ್ಣಕ್ಕೆ ಅನುಗುಣವಾಗಿ 25 ಜನರು ಮತ್ತು ರಾಜಕೀಯ ಆಚರಣೆ ಹಾಗೂ ಸಮಾರಂಭಗಳಿಗೆ ತೆರೆದ ಪ್ರದೇಶಗಳಲ್ಲಿ 200 ಜನರು ಪಾಲ್ಗೊಳ್ಳಬಹುದು ಹಾಗೂ ಧಾರ್ಮಿಕ ಆಚರಣೆ ಹಾಗೂ ಸಮಾರಂಭಗಳನ್ನು ನಿಷೇಧಿಸಲಾಗಿದೆ.

ಜಿಲ್ಲೆಯಲ್ಲಿ ಮಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ಪಾಲಿಕೆಯ ಆಯುಕ್ತರು,  ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಮುಖ್ಯಾಧಿಕಾರಿಗಳು, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸಾರ್ವಜನಿಕ ಸಮಾರಂಭ ಆಚರಣೆಗಳು, ಮನರಂಜನೆ ಕಾರ್ಯಕ್ರಮಗಳಿಗೆ ಜನರ ಒಗ್ಗೂಡುವಿಕೆಗೆ ಪಾಸ್‍ಗಳನ್ನು ವಿತರಿಸಲು ಕ್ರಮ ಕೈಗೊಳ್ಳಲು ನಿರ್ದೇಶಿಸಲಾಗಿದೆ.

ಜನರು ಕಡ್ಡಾಯವಾಗಿ ಭಾರತ ಸರ್ಕಾರ ಮತ್ತು ರಾಜ್ಯ ಸರ್ಕಾರದ ಸಂಬಂಧಪಟ್ಟ ಇಲಾಖೆಗಳು ಹೊರಡಿಸಿರುವ ಪ್ರಮಾಣಿತ ಕಾರ್ಯ ವಿಧಾನವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸಭಾಂಗಣ, ಕಲ್ಯಾಣ ಮಂಟಪ, ಸಿನಿಮಾ ಮಂದಿರ, ಹಾಲ್‍ಗಳು ಮತ್ತು ಆಚರಣೆಗಾಗಿ ಜನಸೇರುವ ಇತರೆ ಪ್ರದೇಶಗಳ ಉಸ್ತುವಾರಿ ಹೊಂದಿರುವವರು ಕಡ್ಡಾಯವಾಗಿ ಸ್ಯಾನಿಟೈಸೇಷನ್ ಕ್ರಮಗಳನ್ನು ಅನುಸರಿಸಬೇಕು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

6 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

14 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago