ದ.ಕ.ಜಿಲ್ಲೆಯಲ್ಲಿ ಕೊರೋನಾ ಮುಂಜಾಗ್ರತೆ ಮುಂದುವರಿದಿದೆ. ಜಿಲ್ಲೆಯಲ್ಲಿ ಆಮ್ಲಜನಕದ ವ್ಯವಸ್ಥೆ ಸೇರಿದಂತೆ ಎಲ್ಲಾ ಆಸ್ಪತ್ರೆಗಳಲ್ಲೂ ಸಕಲ ವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗಿದೆ. ಹೀಗಿದ್ದರೂ ಮಂಗಳವಾರ ಕೊರೋನಾ ಸೋಂಕಿತರು 4 ಮಂದಿ ಹಿರಿಯರು ಮೃತಪಟ್ಟಿದ್ದು ಈ ಮೂಲಕ ಕೊರೋನಾಕ್ಕೆ ಬಲಿಯಾದವರ ಸಂಖ್ಯೆ 762 ಕ್ಕೆ ಏರಿಕೆಯಾಗಿದೆ.
ದ ಕ ಜಿಲ್ಲೆಯಲ್ಲಿ ಮಂಗಳವಾರ 985 ಮಂದಿಗೆ ಪಾಸಿಟಿವ್ ಕಂಡುಬಂದಿದ್ದು ಸದ್ಯ 8,414 ಸಕ್ರಿಯ ಪ್ರಕರಣಗಳು ಇವೆ. ಮಂಗಳವಾರ ಒಟ್ಟು 450 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಸದ್ಯ 3 ಕಂಟೈನ್ಮೆಂಟ್ ಝೋನ್ ಆಗಿ ಘೋಷಣೆ ಮಾಡಲಾಗಿದೆ.
ಕೋವಿಡ್ ಮುಂಜಾಗ್ರತಾ ಲಸಿಕೆಗಳು ಈಗ ಪೂರೈಕೆಯಾಗಿದ್ದು, ಸದ್ಯ ಲಭ್ಯವಿರುವ ಲಸಿಕೆಗಳನ್ನು ಜಿಲ್ಲೆಯ ತಾಲೂಕು, ಜಿಲ್ಲಾಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಇಲಾಖೆ ತಿಳಿಸಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…