ದ.ಕ.ಜಿಲ್ಲೆಯಲ್ಲಿ ಕೊರೋನಾ ಮುಂಜಾಗ್ರತೆ ಮುಂದುವರಿದಿದೆ. ಜಿಲ್ಲೆಯಲ್ಲಿ ಆಮ್ಲಜನಕದ ವ್ಯವಸ್ಥೆ ಸೇರಿದಂತೆ ಎಲ್ಲಾ ಆಸ್ಪತ್ರೆಗಳಲ್ಲೂ ಸಕಲ ವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗಿದೆ. ಹೀಗಿದ್ದರೂ ಮಂಗಳವಾರ ಕೊರೋನಾ ಸೋಂಕಿತರು 4 ಮಂದಿ ಹಿರಿಯರು ಮೃತಪಟ್ಟಿದ್ದು ಈ ಮೂಲಕ ಕೊರೋನಾಕ್ಕೆ ಬಲಿಯಾದವರ ಸಂಖ್ಯೆ 762 ಕ್ಕೆ ಏರಿಕೆಯಾಗಿದೆ.
ದ ಕ ಜಿಲ್ಲೆಯಲ್ಲಿ ಮಂಗಳವಾರ 985 ಮಂದಿಗೆ ಪಾಸಿಟಿವ್ ಕಂಡುಬಂದಿದ್ದು ಸದ್ಯ 8,414 ಸಕ್ರಿಯ ಪ್ರಕರಣಗಳು ಇವೆ. ಮಂಗಳವಾರ ಒಟ್ಟು 450 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಸದ್ಯ 3 ಕಂಟೈನ್ಮೆಂಟ್ ಝೋನ್ ಆಗಿ ಘೋಷಣೆ ಮಾಡಲಾಗಿದೆ.
ಕೋವಿಡ್ ಮುಂಜಾಗ್ರತಾ ಲಸಿಕೆಗಳು ಈಗ ಪೂರೈಕೆಯಾಗಿದ್ದು, ಸದ್ಯ ಲಭ್ಯವಿರುವ ಲಸಿಕೆಗಳನ್ನು ಜಿಲ್ಲೆಯ ತಾಲೂಕು, ಜಿಲ್ಲಾಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಇಲಾಖೆ ತಿಳಿಸಿದೆ.
ಕರ್ನಾಟಕದಲ್ಲಿ ಮುಂಗಾರು ಪೂರ್ವ ಚಟುವಟಿಕೆಗಳು ನಿಧಾನಗೊಂಡಿರುವ ನಡುವೆ, 21.05.2026ರ ಬೆಳಿಗ್ಗೆ 8 ಗಂಟೆವರೆಗಿನ…
ಉತ್ತರ ಭಾರತದಲ್ಲಿ ಮೇ 25ರವರೆಗೆ ತೀವ್ರ ಬಿಸಿಗಾಳಿ ಮುಂದುವರಿಯುವ ಸಾಧ್ಯತೆ ಇದೆ. ಹಗಲು…
ಜಾಗತಿಕ ಅಸ್ಥಿರತೆಯಿಂದ ರಸಗೊಬ್ಬರ ಲಭ್ಯತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು…
ಮೋಹಿತ್ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…