( ಇಂಟರ್ನೆಟ್ ಚಿತ್ರ )
ಕೊರೋನಾ ವೈರಸ್ ಹರಡುವುದು ತಡೆಗೆ ದ ಕ ಜಿಲ್ಲಾಡಳಿತ ನಾಳೆಯಿಂದ (ಮೇ.7) ರಿಂದ ಕಾನೂನು ಕ್ರಮ ಬಿಗಿಗೊಳಿಸಲು ನಿರ್ಧರಿಸಿದೆ. ಹೊಸ ನಿಯಮದ ಪ್ರಕಾರ ಬೆಳಗ್ಗೆ 6 ರಿಂದ 9 ಗಂಟೆಯವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ಇದ್ದು ಅನಗತ್ಯ ಓಡಾಟ ನಡೆಸಿದರೆ ವಾಹನ ವಶಕ್ಕೆ ಪಡೆಯಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ನೇತೃತ್ವದಲ್ಲಿ ವಿಶೇಷ ಸಭೆ ಗುರುವಾರ ನಡೆಯಿತು.
ನಾಳೆಯಿಂದ ಬೆಳಗ್ಗೆ 6 ರಿಂದ 9 ರವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಿದ್ದು ಮೆಡಿಕಲ್ ಗೆ ಹೋಗುವವರು ತಮ್ಮ ಹತ್ತಿರದ ಮೆಡಿಕಲ್ ಗಷ್ಟೆ ಹೋಗಲು ಸಲಹೆ ನೀಡಲಾಗಿದೆ. ರಸ್ತೆಗಳಲ್ಲಿ ಅನಗತ್ಯ ವಾಹನ ಓಡಾಡುವುದಕ್ಕೆ ಅವಕಾಶ ಇಲ್ಲ. ಅನಗತ್ಯ ಓಡಾಟ ನಡೆಸಿದರೆ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ. ಮೇ.15 ಬಳಿಕ ಯಾವ ಕಾರ್ಯಕ್ರಮಗಳಿಗೂ ಅವಕಾಶ ನೀಡಲಾಗುತ್ತಿಲ್ಲ. ಮದುವೆ, ಗೃಹಪ್ರವೇಶ, ಹುಟ್ಟಿದ ಹಬ್ಬ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳೂ ರದ್ದು ಮಾಡಲು ಮನವಿ ಮಾಡಲಾಗುತ್ತಿದೆ.
ಬೆಳೆಗಾರರು ಸಹಕಾರಿ ಸಂಸ್ಥೆಗಳು ಮತ್ತು ಬೆಳೆಗಾರದ್ದೇ ಆದ ಇತರ ಸಂಸ್ಥೆಗಳ ಮೂಲಕ ವ್ಯವಹಾರ…
ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ ಜಾರಿಯಾಗಿ ವರ್ಷಗಳು ಕೆಲವು ಉರುಳಿದವು. ಇಂದಿಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…
ಬಹುನಿರೀಕ್ಷಿತ ಆಕ್ಸಿಯಮ್ ಮಿಷನ್-4 ಇಂದು ಭಾರತೀಯ ಕಾಲಮಾನ ಮಧ್ಯಾಹ್ನ 12 ಗಂಟೆ 1ನಿಮಿಷಕ್ಕೆ…
ಕಳೆದ 11 ವರ್ಷಗಳಲ್ಲಿ ದೇಶದ ಬಡತನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ ಎಂದು ಕೇಂದ್ರ…