ಕೊರೋನಾ ವೈರಸ್ ಹರಡುವುದು ತಡೆಗೆ ದ ಕ ಜಿಲ್ಲಾಡಳಿತ ನಾಳೆಯಿಂದ (ಮೇ.7) ರಿಂದ ಕಾನೂನು ಕ್ರಮ ಬಿಗಿಗೊಳಿಸಲು ನಿರ್ಧರಿಸಿದೆ. ಹೊಸ ನಿಯಮದ ಪ್ರಕಾರ ಬೆಳಗ್ಗೆ 6 ರಿಂದ 9 ಗಂಟೆಯವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ಇದ್ದು ಅನಗತ್ಯ ಓಡಾಟ ನಡೆಸಿದರೆ ವಾಹನ ವಶಕ್ಕೆ ಪಡೆಯಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ನೇತೃತ್ವದಲ್ಲಿ ವಿಶೇಷ ಸಭೆ ಗುರುವಾರ ನಡೆಯಿತು.
ನಾಳೆಯಿಂದ ಬೆಳಗ್ಗೆ 6 ರಿಂದ 9 ರವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಿದ್ದು ಮೆಡಿಕಲ್ ಗೆ ಹೋಗುವವರು ತಮ್ಮ ಹತ್ತಿರದ ಮೆಡಿಕಲ್ ಗಷ್ಟೆ ಹೋಗಲು ಸಲಹೆ ನೀಡಲಾಗಿದೆ. ರಸ್ತೆಗಳಲ್ಲಿ ಅನಗತ್ಯ ವಾಹನ ಓಡಾಡುವುದಕ್ಕೆ ಅವಕಾಶ ಇಲ್ಲ. ಅನಗತ್ಯ ಓಡಾಟ ನಡೆಸಿದರೆ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ. ಮೇ.15 ಬಳಿಕ ಯಾವ ಕಾರ್ಯಕ್ರಮಗಳಿಗೂ ಅವಕಾಶ ನೀಡಲಾಗುತ್ತಿಲ್ಲ. ಮದುವೆ, ಗೃಹಪ್ರವೇಶ, ಹುಟ್ಟಿದ ಹಬ್ಬ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳೂ ರದ್ದು ಮಾಡಲು ಮನವಿ ಮಾಡಲಾಗುತ್ತಿದೆ.
ರಾಜ್ಯದ ಗ್ರಾಮ ಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ…
ಜಲಾನಯನ ಯಾತ್ರೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯಾತ್ರೆ ಸಂಚರಿಸಲಿದ್ದು, ನೀರು ನಿರ್ವಹಣೆ ಬಗ್ಗೆ…
15 ರಾಜ್ಯಗಳಲ್ಲಿ 2 ಸಾವಿರದ 590 ಮೊಬೈಲ್ ಸಂಪರ್ಕರಹಿತ ಗ್ರಾಮಗಳನ್ನು ಗುರುತಿಸಲಾಗಿದೆ. ಈ…
ಗದಗ ಜಿಲ್ಲೆಯ ಮುಂಡರಗಿ ಮತ್ತು ಶಿರಹಟ್ಟಿ ತಾಲೂಕಿನ ಸುಮಾರು 33 ಸಾವಿರ ಹೆಕ್ಟೇರ್…
ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…
ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…