( ಇಂಟರ್ನೆಟ್ ಚಿತ್ರ )
ಕೊರೋನಾ ವೈರಸ್ ಹರಡುವುದು ತಡೆಗೆ ದ ಕ ಜಿಲ್ಲಾಡಳಿತ ನಾಳೆಯಿಂದ (ಮೇ.7) ರಿಂದ ಕಾನೂನು ಕ್ರಮ ಬಿಗಿಗೊಳಿಸಲು ನಿರ್ಧರಿಸಿದೆ. ಹೊಸ ನಿಯಮದ ಪ್ರಕಾರ ಬೆಳಗ್ಗೆ 6 ರಿಂದ 9 ಗಂಟೆಯವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ಇದ್ದು ಅನಗತ್ಯ ಓಡಾಟ ನಡೆಸಿದರೆ ವಾಹನ ವಶಕ್ಕೆ ಪಡೆಯಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ನೇತೃತ್ವದಲ್ಲಿ ವಿಶೇಷ ಸಭೆ ಗುರುವಾರ ನಡೆಯಿತು.
ನಾಳೆಯಿಂದ ಬೆಳಗ್ಗೆ 6 ರಿಂದ 9 ರವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಿದ್ದು ಮೆಡಿಕಲ್ ಗೆ ಹೋಗುವವರು ತಮ್ಮ ಹತ್ತಿರದ ಮೆಡಿಕಲ್ ಗಷ್ಟೆ ಹೋಗಲು ಸಲಹೆ ನೀಡಲಾಗಿದೆ. ರಸ್ತೆಗಳಲ್ಲಿ ಅನಗತ್ಯ ವಾಹನ ಓಡಾಡುವುದಕ್ಕೆ ಅವಕಾಶ ಇಲ್ಲ. ಅನಗತ್ಯ ಓಡಾಟ ನಡೆಸಿದರೆ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ. ಮೇ.15 ಬಳಿಕ ಯಾವ ಕಾರ್ಯಕ್ರಮಗಳಿಗೂ ಅವಕಾಶ ನೀಡಲಾಗುತ್ತಿಲ್ಲ. ಮದುವೆ, ಗೃಹಪ್ರವೇಶ, ಹುಟ್ಟಿದ ಹಬ್ಬ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳೂ ರದ್ದು ಮಾಡಲು ಮನವಿ ಮಾಡಲಾಗುತ್ತಿದೆ.
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…