Advertisement
ಅನುಕ್ರಮ

ಕೊರೋನಾ ಕಲಿಸಿದ ಪಾಠ

Share

“ಕೊರೋನಾ”  ಈ ಜಗತ್ತನ್ನು ವ್ಯಾಪಿಸಿದ ಮಹಾಮಾರಿ. ಲಕ್ಷಾಂತರ ಜನರ ಸಾವಿಗೆ ಕಾರಣವಾದ  ಕೊರೋನಾ , ಅನೇಕರ ಬದುಕಿಗೆ ಪಾಠ ಕಲಿಸಿದೆ.

ಇಂದಿಗೂ ಕೊರೋನಾ ತೊಲಗಿಲ್ಲ. ಭಾರತದಲ್ಲಿ ಲಕ್ಷಾಂತರ ಜನರು ಈ ಮಹಾಮಾರಿಗೆ ತುತ್ತಾಗಿದ್ದಾರೆ. ಲಕ್ಷಾಂತರ ಜನರು ಇದರಿಂದಾಗಿ ಸಾವನ್ನಪ್ಪಿದ್ದಾರೆ. ಈಗಲೂ ಆತಂಕ ಹೆಚ್ಚಾಗಿದೆ.

ಪ್ರತಿಯೊಂದು ಕೆಟ್ಟದರಲ್ಲೂ ಒಳ್ಳೆಯದನ್ನು ಹುಡುಕುವ ಪ್ರಯತ್ನ ಮಾಡಬೇಕು.  ಕೊರೋನಾ ಎಂಬ  ಮಹಾಮಾರಿಯೂ ಸಹ ನಮಗೆ ಹಲವಾರು ಪಾಠಗಳನ್ನು ಕಲಿಸಿದೆ. ಕೊರೋನಾ  ಸಂಬಂಧಗಳ ಬೆಲೆಯನ್ನು ತಿಳಿಸಿಕೊಟ್ಟಿದೆ. ಈಗಿನ  ಯಾಂತ್ರಿಕ ಜಗತ್ತಿನಲ್ಲಿ ಪ್ರತಿಯೊಬ್ಬರೂ ಕೆಲಸ ಹುಡುಕಿಕೊಂಡು ದೂರದ ಪ್ರದೇಶಗಳಿಗೆ ತಮ್ಮ ತಂದೆ-ತಾಯಿ, ಅಣ್ಣ-ತಮ್ಮ, ಹೆಂಡತಿ-ಮಕ್ಕಳು ಎಲ್ಲರನ್ನೂ ಬಿಟ್ಟು ಹೋಗುತ್ತಾರೆ.

ಆದರೆ ಈ ಕೊರೋನಾ ಮಹಾಮಾರಿಗೆ ಹೆದರಿ ಎಲ್ಲರೂ ತಮ್ಮ ತಮ್ಮ ಊರುಗಳಿಗೆ ಮರಳಿದರು. ತಮ್ಮ ತಂದೆ-ತಾಯಿ, ಅಣ್ಣ-ತಮ್ಮ, ಹೆಂಡತಿ-ಮಕ್ಕಳ ಜೊತೆಗೆ ತಮ್ಮ ಅಮೂಲ್ಯವಾದ ಸಮಯವನ್ನು ಕಳೆದರು. ಪ್ರತಿನಿತ್ಯ ಬೆಳಿಗ್ಗೆ ಎದ್ದು ತಮ್ಮ ತಮ್ಮ ಕೆಲಸಗಳಿಗೆ ಹೊರಗಡೆ ಹೋಗುತ್ತಿದ್ದ ಜನರಿಗೆ “ಲಾಕ್ ಡೌನ್” ಆಗಿ ಪ್ರತಿನಿತ್ಯ ಮನೆಯಿಂದ ಹೊರಗೆ ಹೋಗುತ್ತಿದ್ದ ಜನರು ಮನೆಯಲ್ಲಿಯೇ ಕುಳಿತುಕೊಳ್ಳುವಂತಾಯಿತು. ಕೆಲವರಿಗಂತೂ ಪ್ರತಿನಿತ್ಯ ಸೂರ್ಯ ಕಿಟಕಿಯಲ್ಲಿಯೇ ಹುಟ್ಟಿ ಕಿಟಕಿಯಲ್ಲಿಯೇ ಮುಳುಗುವಂತಾಯಿತು. ತಮ್ಮ ನೆರೆ-ಹೊರೆಯವರನ್ನು ಎಂದೂ ಮಾತನಾಡಿಸದ ಜನರು ಈ ಲಾಕ್ ಡೌನ್ ಸಮಯದಲ್ಲಿ ತಮ್ಮ ನೆರೆ-ಹೊರೆಯವರ ಜೊತೆಗೆ ಸಮಯವನ್ನು ಕಳೆದರು. ಹಲವಾರು ಜನರು ಚಿತ್ರಕಲೆ, ಬರವಣಿಗೆ ಮುಂತಾದ ತಮಗೆ ಇಷ್ಟವಾದ ಕಲೆಗಳನ್ನು ಕಲಿತರು. ಪ್ರೀತಿ, ಸ್ನೇಹ, ಸಂಬಂಧಗಳ ನಿಜವಾದ ಬೆಲೆಯನ್ನು ಅರಿತರು. ಸಮಯದ ಮಹತ್ವವನ್ನು ಅರಿತುಕೊಂಡರು.

ವಿದ್ಯಾರ್ಥಿಗಳ ಒಂದು ವರ್ಷವನ್ನು ಈ ಕೊರೋನಾ ಕಿತ್ತುಕೊಂಡಿದೆ ನಿಜ. ಆದರೆ ಆಕಸ್ಮಾತ್ತಾಗಿ ಎದುರಾಗುವ ಸಮಸ್ಯೆಗಳಿಗೆ ಈ ಕೊರೋನಾ ಒಂದು ಉತ್ತಮವಾದ ಉದಾಹರಣೆಯಾಗಿದೆ. ಮನುಷ್ಯರು ಅತ್ಯಂತ ಕಡಿಮೆ ಸೌಲಭ್ಯದಿಂದ ಹೇಗೆ ಬದುಕಬಹುದು ಎಂದು ಕೊರೋನಾ ಕಲಿಸಿಕೊಟ್ಟಿದೆ. ಕೊರೋನಾದಿಂದಾಗಿ ನಾವು  ಕಳೆದುಕೊಂಡಿದ್ದು ನಿಜ, ಆದರೆ ಅದೇ ರೀತಿ  ಪಡೆದುಕೊಂಡಿದ್ದೂ ನಿಜ. “ಕೊರೋನಾ” ಜೀವನದಲ್ಲಿ ನಮಗೆ ಒಂದು ಪಾಠವಾಗಿದೆ.

# ಉಲ್ಲಾಸ್ ಕಜ್ಜೋಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ

ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…

3 hours ago

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…

15 hours ago

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

1 day ago

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…

2 days ago

ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!

ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…

3 days ago