Advertisement
ಅನುಕ್ರಮ

ಕೊರೋನಾ ಕಲಿಸಿದ ಪಾಠ

Share

“ಕೊರೋನಾ”  ಈ ಜಗತ್ತನ್ನು ವ್ಯಾಪಿಸಿದ ಮಹಾಮಾರಿ. ಲಕ್ಷಾಂತರ ಜನರ ಸಾವಿಗೆ ಕಾರಣವಾದ  ಕೊರೋನಾ , ಅನೇಕರ ಬದುಕಿಗೆ ಪಾಠ ಕಲಿಸಿದೆ.

ಇಂದಿಗೂ ಕೊರೋನಾ ತೊಲಗಿಲ್ಲ. ಭಾರತದಲ್ಲಿ ಲಕ್ಷಾಂತರ ಜನರು ಈ ಮಹಾಮಾರಿಗೆ ತುತ್ತಾಗಿದ್ದಾರೆ. ಲಕ್ಷಾಂತರ ಜನರು ಇದರಿಂದಾಗಿ ಸಾವನ್ನಪ್ಪಿದ್ದಾರೆ. ಈಗಲೂ ಆತಂಕ ಹೆಚ್ಚಾಗಿದೆ.

ಪ್ರತಿಯೊಂದು ಕೆಟ್ಟದರಲ್ಲೂ ಒಳ್ಳೆಯದನ್ನು ಹುಡುಕುವ ಪ್ರಯತ್ನ ಮಾಡಬೇಕು.  ಕೊರೋನಾ ಎಂಬ  ಮಹಾಮಾರಿಯೂ ಸಹ ನಮಗೆ ಹಲವಾರು ಪಾಠಗಳನ್ನು ಕಲಿಸಿದೆ. ಕೊರೋನಾ  ಸಂಬಂಧಗಳ ಬೆಲೆಯನ್ನು ತಿಳಿಸಿಕೊಟ್ಟಿದೆ. ಈಗಿನ  ಯಾಂತ್ರಿಕ ಜಗತ್ತಿನಲ್ಲಿ ಪ್ರತಿಯೊಬ್ಬರೂ ಕೆಲಸ ಹುಡುಕಿಕೊಂಡು ದೂರದ ಪ್ರದೇಶಗಳಿಗೆ ತಮ್ಮ ತಂದೆ-ತಾಯಿ, ಅಣ್ಣ-ತಮ್ಮ, ಹೆಂಡತಿ-ಮಕ್ಕಳು ಎಲ್ಲರನ್ನೂ ಬಿಟ್ಟು ಹೋಗುತ್ತಾರೆ.

ಆದರೆ ಈ ಕೊರೋನಾ ಮಹಾಮಾರಿಗೆ ಹೆದರಿ ಎಲ್ಲರೂ ತಮ್ಮ ತಮ್ಮ ಊರುಗಳಿಗೆ ಮರಳಿದರು. ತಮ್ಮ ತಂದೆ-ತಾಯಿ, ಅಣ್ಣ-ತಮ್ಮ, ಹೆಂಡತಿ-ಮಕ್ಕಳ ಜೊತೆಗೆ ತಮ್ಮ ಅಮೂಲ್ಯವಾದ ಸಮಯವನ್ನು ಕಳೆದರು. ಪ್ರತಿನಿತ್ಯ ಬೆಳಿಗ್ಗೆ ಎದ್ದು ತಮ್ಮ ತಮ್ಮ ಕೆಲಸಗಳಿಗೆ ಹೊರಗಡೆ ಹೋಗುತ್ತಿದ್ದ ಜನರಿಗೆ “ಲಾಕ್ ಡೌನ್” ಆಗಿ ಪ್ರತಿನಿತ್ಯ ಮನೆಯಿಂದ ಹೊರಗೆ ಹೋಗುತ್ತಿದ್ದ ಜನರು ಮನೆಯಲ್ಲಿಯೇ ಕುಳಿತುಕೊಳ್ಳುವಂತಾಯಿತು. ಕೆಲವರಿಗಂತೂ ಪ್ರತಿನಿತ್ಯ ಸೂರ್ಯ ಕಿಟಕಿಯಲ್ಲಿಯೇ ಹುಟ್ಟಿ ಕಿಟಕಿಯಲ್ಲಿಯೇ ಮುಳುಗುವಂತಾಯಿತು. ತಮ್ಮ ನೆರೆ-ಹೊರೆಯವರನ್ನು ಎಂದೂ ಮಾತನಾಡಿಸದ ಜನರು ಈ ಲಾಕ್ ಡೌನ್ ಸಮಯದಲ್ಲಿ ತಮ್ಮ ನೆರೆ-ಹೊರೆಯವರ ಜೊತೆಗೆ ಸಮಯವನ್ನು ಕಳೆದರು. ಹಲವಾರು ಜನರು ಚಿತ್ರಕಲೆ, ಬರವಣಿಗೆ ಮುಂತಾದ ತಮಗೆ ಇಷ್ಟವಾದ ಕಲೆಗಳನ್ನು ಕಲಿತರು. ಪ್ರೀತಿ, ಸ್ನೇಹ, ಸಂಬಂಧಗಳ ನಿಜವಾದ ಬೆಲೆಯನ್ನು ಅರಿತರು. ಸಮಯದ ಮಹತ್ವವನ್ನು ಅರಿತುಕೊಂಡರು.

ವಿದ್ಯಾರ್ಥಿಗಳ ಒಂದು ವರ್ಷವನ್ನು ಈ ಕೊರೋನಾ ಕಿತ್ತುಕೊಂಡಿದೆ ನಿಜ. ಆದರೆ ಆಕಸ್ಮಾತ್ತಾಗಿ ಎದುರಾಗುವ ಸಮಸ್ಯೆಗಳಿಗೆ ಈ ಕೊರೋನಾ ಒಂದು ಉತ್ತಮವಾದ ಉದಾಹರಣೆಯಾಗಿದೆ. ಮನುಷ್ಯರು ಅತ್ಯಂತ ಕಡಿಮೆ ಸೌಲಭ್ಯದಿಂದ ಹೇಗೆ ಬದುಕಬಹುದು ಎಂದು ಕೊರೋನಾ ಕಲಿಸಿಕೊಟ್ಟಿದೆ. ಕೊರೋನಾದಿಂದಾಗಿ ನಾವು  ಕಳೆದುಕೊಂಡಿದ್ದು ನಿಜ, ಆದರೆ ಅದೇ ರೀತಿ  ಪಡೆದುಕೊಂಡಿದ್ದೂ ನಿಜ. “ಕೊರೋನಾ” ಜೀವನದಲ್ಲಿ ನಮಗೆ ಒಂದು ಪಾಠವಾಗಿದೆ.

# ಉಲ್ಲಾಸ್ ಕಜ್ಜೋಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 19-05-2026 | ಕರಾವಳಿಯಲ್ಲಿ ಮಳೆ ಕ್ಷೀಣಿಸುವ ಲಕ್ಷಣ – ಮೇ 27ರ ಸುಮಾರಿಗೆ ರಾಜ್ಯಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…

8 hours ago

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ

ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…

1 day ago

ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…

1 day ago

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

2 days ago

ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌

ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…

2 days ago