Advertisement
ಅನುಕ್ರಮ

ಕೊರೋನಾ ಕಲಿಸಿದ ಪಾಠ

Share

“ಕೊರೋನಾ”  ಈ ಜಗತ್ತನ್ನು ವ್ಯಾಪಿಸಿದ ಮಹಾಮಾರಿ. ಲಕ್ಷಾಂತರ ಜನರ ಸಾವಿಗೆ ಕಾರಣವಾದ  ಕೊರೋನಾ , ಅನೇಕರ ಬದುಕಿಗೆ ಪಾಠ ಕಲಿಸಿದೆ.

ಇಂದಿಗೂ ಕೊರೋನಾ ತೊಲಗಿಲ್ಲ. ಭಾರತದಲ್ಲಿ ಲಕ್ಷಾಂತರ ಜನರು ಈ ಮಹಾಮಾರಿಗೆ ತುತ್ತಾಗಿದ್ದಾರೆ. ಲಕ್ಷಾಂತರ ಜನರು ಇದರಿಂದಾಗಿ ಸಾವನ್ನಪ್ಪಿದ್ದಾರೆ. ಈಗಲೂ ಆತಂಕ ಹೆಚ್ಚಾಗಿದೆ.

ಪ್ರತಿಯೊಂದು ಕೆಟ್ಟದರಲ್ಲೂ ಒಳ್ಳೆಯದನ್ನು ಹುಡುಕುವ ಪ್ರಯತ್ನ ಮಾಡಬೇಕು.  ಕೊರೋನಾ ಎಂಬ  ಮಹಾಮಾರಿಯೂ ಸಹ ನಮಗೆ ಹಲವಾರು ಪಾಠಗಳನ್ನು ಕಲಿಸಿದೆ. ಕೊರೋನಾ  ಸಂಬಂಧಗಳ ಬೆಲೆಯನ್ನು ತಿಳಿಸಿಕೊಟ್ಟಿದೆ. ಈಗಿನ  ಯಾಂತ್ರಿಕ ಜಗತ್ತಿನಲ್ಲಿ ಪ್ರತಿಯೊಬ್ಬರೂ ಕೆಲಸ ಹುಡುಕಿಕೊಂಡು ದೂರದ ಪ್ರದೇಶಗಳಿಗೆ ತಮ್ಮ ತಂದೆ-ತಾಯಿ, ಅಣ್ಣ-ತಮ್ಮ, ಹೆಂಡತಿ-ಮಕ್ಕಳು ಎಲ್ಲರನ್ನೂ ಬಿಟ್ಟು ಹೋಗುತ್ತಾರೆ.

ಆದರೆ ಈ ಕೊರೋನಾ ಮಹಾಮಾರಿಗೆ ಹೆದರಿ ಎಲ್ಲರೂ ತಮ್ಮ ತಮ್ಮ ಊರುಗಳಿಗೆ ಮರಳಿದರು. ತಮ್ಮ ತಂದೆ-ತಾಯಿ, ಅಣ್ಣ-ತಮ್ಮ, ಹೆಂಡತಿ-ಮಕ್ಕಳ ಜೊತೆಗೆ ತಮ್ಮ ಅಮೂಲ್ಯವಾದ ಸಮಯವನ್ನು ಕಳೆದರು. ಪ್ರತಿನಿತ್ಯ ಬೆಳಿಗ್ಗೆ ಎದ್ದು ತಮ್ಮ ತಮ್ಮ ಕೆಲಸಗಳಿಗೆ ಹೊರಗಡೆ ಹೋಗುತ್ತಿದ್ದ ಜನರಿಗೆ “ಲಾಕ್ ಡೌನ್” ಆಗಿ ಪ್ರತಿನಿತ್ಯ ಮನೆಯಿಂದ ಹೊರಗೆ ಹೋಗುತ್ತಿದ್ದ ಜನರು ಮನೆಯಲ್ಲಿಯೇ ಕುಳಿತುಕೊಳ್ಳುವಂತಾಯಿತು. ಕೆಲವರಿಗಂತೂ ಪ್ರತಿನಿತ್ಯ ಸೂರ್ಯ ಕಿಟಕಿಯಲ್ಲಿಯೇ ಹುಟ್ಟಿ ಕಿಟಕಿಯಲ್ಲಿಯೇ ಮುಳುಗುವಂತಾಯಿತು. ತಮ್ಮ ನೆರೆ-ಹೊರೆಯವರನ್ನು ಎಂದೂ ಮಾತನಾಡಿಸದ ಜನರು ಈ ಲಾಕ್ ಡೌನ್ ಸಮಯದಲ್ಲಿ ತಮ್ಮ ನೆರೆ-ಹೊರೆಯವರ ಜೊತೆಗೆ ಸಮಯವನ್ನು ಕಳೆದರು. ಹಲವಾರು ಜನರು ಚಿತ್ರಕಲೆ, ಬರವಣಿಗೆ ಮುಂತಾದ ತಮಗೆ ಇಷ್ಟವಾದ ಕಲೆಗಳನ್ನು ಕಲಿತರು. ಪ್ರೀತಿ, ಸ್ನೇಹ, ಸಂಬಂಧಗಳ ನಿಜವಾದ ಬೆಲೆಯನ್ನು ಅರಿತರು. ಸಮಯದ ಮಹತ್ವವನ್ನು ಅರಿತುಕೊಂಡರು.

ವಿದ್ಯಾರ್ಥಿಗಳ ಒಂದು ವರ್ಷವನ್ನು ಈ ಕೊರೋನಾ ಕಿತ್ತುಕೊಂಡಿದೆ ನಿಜ. ಆದರೆ ಆಕಸ್ಮಾತ್ತಾಗಿ ಎದುರಾಗುವ ಸಮಸ್ಯೆಗಳಿಗೆ ಈ ಕೊರೋನಾ ಒಂದು ಉತ್ತಮವಾದ ಉದಾಹರಣೆಯಾಗಿದೆ. ಮನುಷ್ಯರು ಅತ್ಯಂತ ಕಡಿಮೆ ಸೌಲಭ್ಯದಿಂದ ಹೇಗೆ ಬದುಕಬಹುದು ಎಂದು ಕೊರೋನಾ ಕಲಿಸಿಕೊಟ್ಟಿದೆ. ಕೊರೋನಾದಿಂದಾಗಿ ನಾವು  ಕಳೆದುಕೊಂಡಿದ್ದು ನಿಜ, ಆದರೆ ಅದೇ ರೀತಿ  ಪಡೆದುಕೊಂಡಿದ್ದೂ ನಿಜ. “ಕೊರೋನಾ” ಜೀವನದಲ್ಲಿ ನಮಗೆ ಒಂದು ಪಾಠವಾಗಿದೆ.

# ಉಲ್ಲಾಸ್ ಕಜ್ಜೋಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

1 hour ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

1 hour ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

12 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

12 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

12 hours ago