Advertisement
ಅನುಕ್ರಮ

ಕೊರೋನಾ ಕಲಿಸಿದ ಪಾಠ

Share

“ಕೊರೋನಾ”  ಈ ಜಗತ್ತನ್ನು ವ್ಯಾಪಿಸಿದ ಮಹಾಮಾರಿ. ಲಕ್ಷಾಂತರ ಜನರ ಸಾವಿಗೆ ಕಾರಣವಾದ  ಕೊರೋನಾ , ಅನೇಕರ ಬದುಕಿಗೆ ಪಾಠ ಕಲಿಸಿದೆ.

ಇಂದಿಗೂ ಕೊರೋನಾ ತೊಲಗಿಲ್ಲ. ಭಾರತದಲ್ಲಿ ಲಕ್ಷಾಂತರ ಜನರು ಈ ಮಹಾಮಾರಿಗೆ ತುತ್ತಾಗಿದ್ದಾರೆ. ಲಕ್ಷಾಂತರ ಜನರು ಇದರಿಂದಾಗಿ ಸಾವನ್ನಪ್ಪಿದ್ದಾರೆ. ಈಗಲೂ ಆತಂಕ ಹೆಚ್ಚಾಗಿದೆ.

Advertisement

ಪ್ರತಿಯೊಂದು ಕೆಟ್ಟದರಲ್ಲೂ ಒಳ್ಳೆಯದನ್ನು ಹುಡುಕುವ ಪ್ರಯತ್ನ ಮಾಡಬೇಕು.  ಕೊರೋನಾ ಎಂಬ  ಮಹಾಮಾರಿಯೂ ಸಹ ನಮಗೆ ಹಲವಾರು ಪಾಠಗಳನ್ನು ಕಲಿಸಿದೆ. ಕೊರೋನಾ  ಸಂಬಂಧಗಳ ಬೆಲೆಯನ್ನು ತಿಳಿಸಿಕೊಟ್ಟಿದೆ. ಈಗಿನ  ಯಾಂತ್ರಿಕ ಜಗತ್ತಿನಲ್ಲಿ ಪ್ರತಿಯೊಬ್ಬರೂ ಕೆಲಸ ಹುಡುಕಿಕೊಂಡು ದೂರದ ಪ್ರದೇಶಗಳಿಗೆ ತಮ್ಮ ತಂದೆ-ತಾಯಿ, ಅಣ್ಣ-ತಮ್ಮ, ಹೆಂಡತಿ-ಮಕ್ಕಳು ಎಲ್ಲರನ್ನೂ ಬಿಟ್ಟು ಹೋಗುತ್ತಾರೆ.

ಆದರೆ ಈ ಕೊರೋನಾ ಮಹಾಮಾರಿಗೆ ಹೆದರಿ ಎಲ್ಲರೂ ತಮ್ಮ ತಮ್ಮ ಊರುಗಳಿಗೆ ಮರಳಿದರು. ತಮ್ಮ ತಂದೆ-ತಾಯಿ, ಅಣ್ಣ-ತಮ್ಮ, ಹೆಂಡತಿ-ಮಕ್ಕಳ ಜೊತೆಗೆ ತಮ್ಮ ಅಮೂಲ್ಯವಾದ ಸಮಯವನ್ನು ಕಳೆದರು. ಪ್ರತಿನಿತ್ಯ ಬೆಳಿಗ್ಗೆ ಎದ್ದು ತಮ್ಮ ತಮ್ಮ ಕೆಲಸಗಳಿಗೆ ಹೊರಗಡೆ ಹೋಗುತ್ತಿದ್ದ ಜನರಿಗೆ “ಲಾಕ್ ಡೌನ್” ಆಗಿ ಪ್ರತಿನಿತ್ಯ ಮನೆಯಿಂದ ಹೊರಗೆ ಹೋಗುತ್ತಿದ್ದ ಜನರು ಮನೆಯಲ್ಲಿಯೇ ಕುಳಿತುಕೊಳ್ಳುವಂತಾಯಿತು. ಕೆಲವರಿಗಂತೂ ಪ್ರತಿನಿತ್ಯ ಸೂರ್ಯ ಕಿಟಕಿಯಲ್ಲಿಯೇ ಹುಟ್ಟಿ ಕಿಟಕಿಯಲ್ಲಿಯೇ ಮುಳುಗುವಂತಾಯಿತು. ತಮ್ಮ ನೆರೆ-ಹೊರೆಯವರನ್ನು ಎಂದೂ ಮಾತನಾಡಿಸದ ಜನರು ಈ ಲಾಕ್ ಡೌನ್ ಸಮಯದಲ್ಲಿ ತಮ್ಮ ನೆರೆ-ಹೊರೆಯವರ ಜೊತೆಗೆ ಸಮಯವನ್ನು ಕಳೆದರು. ಹಲವಾರು ಜನರು ಚಿತ್ರಕಲೆ, ಬರವಣಿಗೆ ಮುಂತಾದ ತಮಗೆ ಇಷ್ಟವಾದ ಕಲೆಗಳನ್ನು ಕಲಿತರು. ಪ್ರೀತಿ, ಸ್ನೇಹ, ಸಂಬಂಧಗಳ ನಿಜವಾದ ಬೆಲೆಯನ್ನು ಅರಿತರು. ಸಮಯದ ಮಹತ್ವವನ್ನು ಅರಿತುಕೊಂಡರು.

Advertisement

ವಿದ್ಯಾರ್ಥಿಗಳ ಒಂದು ವರ್ಷವನ್ನು ಈ ಕೊರೋನಾ ಕಿತ್ತುಕೊಂಡಿದೆ ನಿಜ. ಆದರೆ ಆಕಸ್ಮಾತ್ತಾಗಿ ಎದುರಾಗುವ ಸಮಸ್ಯೆಗಳಿಗೆ ಈ ಕೊರೋನಾ ಒಂದು ಉತ್ತಮವಾದ ಉದಾಹರಣೆಯಾಗಿದೆ. ಮನುಷ್ಯರು ಅತ್ಯಂತ ಕಡಿಮೆ ಸೌಲಭ್ಯದಿಂದ ಹೇಗೆ ಬದುಕಬಹುದು ಎಂದು ಕೊರೋನಾ ಕಲಿಸಿಕೊಟ್ಟಿದೆ. ಕೊರೋನಾದಿಂದಾಗಿ ನಾವು  ಕಳೆದುಕೊಂಡಿದ್ದು ನಿಜ, ಆದರೆ ಅದೇ ರೀತಿ  ಪಡೆದುಕೊಂಡಿದ್ದೂ ನಿಜ. “ಕೊರೋನಾ” ಜೀವನದಲ್ಲಿ ನಮಗೆ ಒಂದು ಪಾಠವಾಗಿದೆ.

# ಉಲ್ಲಾಸ್ ಕಜ್ಜೋಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

2 days ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

2 days ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

2 days ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

2 days ago