Advertisement
ಅನುಕ್ರಮ

ಕೊರೋನಾ ಕಲಿಸಿದ ಪಾಠ

Share

“ಕೊರೋನಾ”  ಈ ಜಗತ್ತನ್ನು ವ್ಯಾಪಿಸಿದ ಮಹಾಮಾರಿ. ಲಕ್ಷಾಂತರ ಜನರ ಸಾವಿಗೆ ಕಾರಣವಾದ  ಕೊರೋನಾ , ಅನೇಕರ ಬದುಕಿಗೆ ಪಾಠ ಕಲಿಸಿದೆ.

ಇಂದಿಗೂ ಕೊರೋನಾ ತೊಲಗಿಲ್ಲ. ಭಾರತದಲ್ಲಿ ಲಕ್ಷಾಂತರ ಜನರು ಈ ಮಹಾಮಾರಿಗೆ ತುತ್ತಾಗಿದ್ದಾರೆ. ಲಕ್ಷಾಂತರ ಜನರು ಇದರಿಂದಾಗಿ ಸಾವನ್ನಪ್ಪಿದ್ದಾರೆ. ಈಗಲೂ ಆತಂಕ ಹೆಚ್ಚಾಗಿದೆ.

ಪ್ರತಿಯೊಂದು ಕೆಟ್ಟದರಲ್ಲೂ ಒಳ್ಳೆಯದನ್ನು ಹುಡುಕುವ ಪ್ರಯತ್ನ ಮಾಡಬೇಕು.  ಕೊರೋನಾ ಎಂಬ  ಮಹಾಮಾರಿಯೂ ಸಹ ನಮಗೆ ಹಲವಾರು ಪಾಠಗಳನ್ನು ಕಲಿಸಿದೆ. ಕೊರೋನಾ  ಸಂಬಂಧಗಳ ಬೆಲೆಯನ್ನು ತಿಳಿಸಿಕೊಟ್ಟಿದೆ. ಈಗಿನ  ಯಾಂತ್ರಿಕ ಜಗತ್ತಿನಲ್ಲಿ ಪ್ರತಿಯೊಬ್ಬರೂ ಕೆಲಸ ಹುಡುಕಿಕೊಂಡು ದೂರದ ಪ್ರದೇಶಗಳಿಗೆ ತಮ್ಮ ತಂದೆ-ತಾಯಿ, ಅಣ್ಣ-ತಮ್ಮ, ಹೆಂಡತಿ-ಮಕ್ಕಳು ಎಲ್ಲರನ್ನೂ ಬಿಟ್ಟು ಹೋಗುತ್ತಾರೆ.

ಆದರೆ ಈ ಕೊರೋನಾ ಮಹಾಮಾರಿಗೆ ಹೆದರಿ ಎಲ್ಲರೂ ತಮ್ಮ ತಮ್ಮ ಊರುಗಳಿಗೆ ಮರಳಿದರು. ತಮ್ಮ ತಂದೆ-ತಾಯಿ, ಅಣ್ಣ-ತಮ್ಮ, ಹೆಂಡತಿ-ಮಕ್ಕಳ ಜೊತೆಗೆ ತಮ್ಮ ಅಮೂಲ್ಯವಾದ ಸಮಯವನ್ನು ಕಳೆದರು. ಪ್ರತಿನಿತ್ಯ ಬೆಳಿಗ್ಗೆ ಎದ್ದು ತಮ್ಮ ತಮ್ಮ ಕೆಲಸಗಳಿಗೆ ಹೊರಗಡೆ ಹೋಗುತ್ತಿದ್ದ ಜನರಿಗೆ “ಲಾಕ್ ಡೌನ್” ಆಗಿ ಪ್ರತಿನಿತ್ಯ ಮನೆಯಿಂದ ಹೊರಗೆ ಹೋಗುತ್ತಿದ್ದ ಜನರು ಮನೆಯಲ್ಲಿಯೇ ಕುಳಿತುಕೊಳ್ಳುವಂತಾಯಿತು. ಕೆಲವರಿಗಂತೂ ಪ್ರತಿನಿತ್ಯ ಸೂರ್ಯ ಕಿಟಕಿಯಲ್ಲಿಯೇ ಹುಟ್ಟಿ ಕಿಟಕಿಯಲ್ಲಿಯೇ ಮುಳುಗುವಂತಾಯಿತು. ತಮ್ಮ ನೆರೆ-ಹೊರೆಯವರನ್ನು ಎಂದೂ ಮಾತನಾಡಿಸದ ಜನರು ಈ ಲಾಕ್ ಡೌನ್ ಸಮಯದಲ್ಲಿ ತಮ್ಮ ನೆರೆ-ಹೊರೆಯವರ ಜೊತೆಗೆ ಸಮಯವನ್ನು ಕಳೆದರು. ಹಲವಾರು ಜನರು ಚಿತ್ರಕಲೆ, ಬರವಣಿಗೆ ಮುಂತಾದ ತಮಗೆ ಇಷ್ಟವಾದ ಕಲೆಗಳನ್ನು ಕಲಿತರು. ಪ್ರೀತಿ, ಸ್ನೇಹ, ಸಂಬಂಧಗಳ ನಿಜವಾದ ಬೆಲೆಯನ್ನು ಅರಿತರು. ಸಮಯದ ಮಹತ್ವವನ್ನು ಅರಿತುಕೊಂಡರು.

ವಿದ್ಯಾರ್ಥಿಗಳ ಒಂದು ವರ್ಷವನ್ನು ಈ ಕೊರೋನಾ ಕಿತ್ತುಕೊಂಡಿದೆ ನಿಜ. ಆದರೆ ಆಕಸ್ಮಾತ್ತಾಗಿ ಎದುರಾಗುವ ಸಮಸ್ಯೆಗಳಿಗೆ ಈ ಕೊರೋನಾ ಒಂದು ಉತ್ತಮವಾದ ಉದಾಹರಣೆಯಾಗಿದೆ. ಮನುಷ್ಯರು ಅತ್ಯಂತ ಕಡಿಮೆ ಸೌಲಭ್ಯದಿಂದ ಹೇಗೆ ಬದುಕಬಹುದು ಎಂದು ಕೊರೋನಾ ಕಲಿಸಿಕೊಟ್ಟಿದೆ. ಕೊರೋನಾದಿಂದಾಗಿ ನಾವು  ಕಳೆದುಕೊಂಡಿದ್ದು ನಿಜ, ಆದರೆ ಅದೇ ರೀತಿ  ಪಡೆದುಕೊಂಡಿದ್ದೂ ನಿಜ. “ಕೊರೋನಾ” ಜೀವನದಲ್ಲಿ ನಮಗೆ ಒಂದು ಪಾಠವಾಗಿದೆ.

# ಉಲ್ಲಾಸ್ ಕಜ್ಜೋಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

9 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

17 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago