ಸುದ್ದಿಗಳು

ಕೊರೋನಾ ಬ್ರೇಕ್‌ | ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ ಹೊಸ ಮಾರ್ಗಸೂಚಿ | ರಾಜ್ಯಾದ್ಯಂತ ವೀಕ್ ಎಂಡ್ ಕರ್ಪ್ಯೂ ಜಾರಿ |

Share

ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಹೊಸ ಮಾರ್ಗಸೂಚಿಯನ್ನು ರಾಜ್ಯ ಸರಕಾರ ಬಿಡುಗಡೆಗೊಳಿಸಿದೆ. ರಾಜ್ಯಾದ್ಯಂತ ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ವೀಕ್ ಎಂಡ್ ಕರ್ಪ್ಯೂ ಜಾರಿಗೊಳಿಸಿ ಆದೇಶಿಸಿದೆ. ಈ ಮೂಲಕ ಹೊಸ ಮಾರ್ಗಸೂಚಿಯಲ್ಲಿ 14 ದಿನಗಳ ವರೆಗೆ  ವೀಕ್ ಎಂಡ್ ಕರ್ಪ್ಯೂ ಜಾರಿಗೊಳಿಸಿ ಆದೇಶಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿದ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು, ನಾಳೆಯಿಂದ ಮೇ.4 ರವರೆಗೆ ಜಾರಿಗೆ ಬರುವಂತೆ 14 ದಿನಗಳ ಕಾಲ ರಾಜ್ಯಾದ್ಯಂತ ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ವೀಕ್ ಎಂಡ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಬಾರ್ ಮತ್ತು ರೆಸ್ಟೋರೆಂಟ್ ಬಂದ್ ಮಾಡಲಾಗಿದೆ. ಪಾರ್ಸಲ್ ಗೆ ಅವಕಾಶ ನೀಡಲಾಗಿದೆ ಎಂದರು. ಮದುವೆಗೆ 50 ಜನರಿಗೆ, ಅಂತ್ಯಕ್ರಿಯೆಗೆ 20 ಜನರಿಗೆ ಮಾತ್ರವೇ ಅವಕಾಶ ನೀಡಲಾಗಿದೆ. ಸಿನಿಮಾ ಹಾಲ್, ಸ್ವಿಮ್ಮಿಂಗ್ ಫೂಲ್, ಮಾರ್ಕೆಟ್ ಬಂದ್ ಮಾಡಲಾಗುತ್ತಿದೆ. ಶಾಲಾ-ಕಾಲೇಜು ಮುಚ್ಚಲಾಗುತ್ತಿದೆ. ರಾತ್ರಿ ಪಾಳಿಯಲ್ಲಿ ಕಾರ್ಖಾನೆಗಳಲ್ಲಿ ಕೆಲಸ ಮಾಡಲು ಅವಕಾಶ ನೀಡಲಾಗಿದೆ ಎಂದರು. ರಾತ್ರಿ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದ್ದು ಎಲ್ಲಾ ಧಾರ್ಮಿಕ ಕ್ಷೇತ್ರಗಳು ಬಂದ್ ಮಾಡಲಾಗುತ್ತಿದೆ. ಸಲೂನ್, ಬ್ಯೂಟಿ ಪಾರ್ಲರ್ ಗೆ ಅವಕಾಶ ನೀಡಲಾಗಿದೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಇಂದೂ ಕರಾವಳಿ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ…

20 minutes ago

ಏಪ್ರಿಲ್‌ನಲ್ಲಿ ಶನಿ ನಕ್ಷತ್ರ ಪ್ರವೇಶದಿಂದ 5 ರಾಶಿಗಳ ಲೈಫ್ ಚೇಂಜ್ ಆಗುವ ಸಾಧ್ಯತೆ‌ |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

4 hours ago

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನ | ಆತಂಕಪಡುವ ಅಗತ್ಯವಿಲ್ಲ | ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಸ್ಪಷ್ಟನೆ

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 1.6…

13 hours ago

ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಗುಡುಗು ಸಹಿತ ಗಾಳಿ-ಮಳೆ | ಎರಡನೇ ಬಾರಿ ಸುರಿದ ಧಾರಾಕಾರ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳ ಹಲವು ಕಡೆ ಸಂಜೆ ಉತ್ತಮ ಮಳೆಯಾಗಿದೆ.…

13 hours ago

ಸರ್ಕಾರಿ ವೈದ್ಯರು ಆಸ್ಪತ್ರೆಗಳಲ್ಲಿ ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಇರಬೇಕು- ಸಚಿವ ಶರಣಪ್ರಕಾಶ್ ಪಾಟೀಲ್

ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…

1 day ago

ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧ

ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…

1 day ago