ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಹೊಸ ಮಾರ್ಗಸೂಚಿಯನ್ನು ರಾಜ್ಯ ಸರಕಾರ ಬಿಡುಗಡೆಗೊಳಿಸಿದೆ. ರಾಜ್ಯಾದ್ಯಂತ ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ವೀಕ್ ಎಂಡ್ ಕರ್ಪ್ಯೂ ಜಾರಿಗೊಳಿಸಿ ಆದೇಶಿಸಿದೆ. ಈ ಮೂಲಕ ಹೊಸ ಮಾರ್ಗಸೂಚಿಯಲ್ಲಿ 14 ದಿನಗಳ ವರೆಗೆ ವೀಕ್ ಎಂಡ್ ಕರ್ಪ್ಯೂ ಜಾರಿಗೊಳಿಸಿ ಆದೇಶಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿದ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು, ನಾಳೆಯಿಂದ ಮೇ.4 ರವರೆಗೆ ಜಾರಿಗೆ ಬರುವಂತೆ 14 ದಿನಗಳ ಕಾಲ ರಾಜ್ಯಾದ್ಯಂತ ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ವೀಕ್ ಎಂಡ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಬಾರ್ ಮತ್ತು ರೆಸ್ಟೋರೆಂಟ್ ಬಂದ್ ಮಾಡಲಾಗಿದೆ. ಪಾರ್ಸಲ್ ಗೆ ಅವಕಾಶ ನೀಡಲಾಗಿದೆ ಎಂದರು. ಮದುವೆಗೆ 50 ಜನರಿಗೆ, ಅಂತ್ಯಕ್ರಿಯೆಗೆ 20 ಜನರಿಗೆ ಮಾತ್ರವೇ ಅವಕಾಶ ನೀಡಲಾಗಿದೆ. ಸಿನಿಮಾ ಹಾಲ್, ಸ್ವಿಮ್ಮಿಂಗ್ ಫೂಲ್, ಮಾರ್ಕೆಟ್ ಬಂದ್ ಮಾಡಲಾಗುತ್ತಿದೆ. ಶಾಲಾ-ಕಾಲೇಜು ಮುಚ್ಚಲಾಗುತ್ತಿದೆ. ರಾತ್ರಿ ಪಾಳಿಯಲ್ಲಿ ಕಾರ್ಖಾನೆಗಳಲ್ಲಿ ಕೆಲಸ ಮಾಡಲು ಅವಕಾಶ ನೀಡಲಾಗಿದೆ ಎಂದರು. ರಾತ್ರಿ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದ್ದು ಎಲ್ಲಾ ಧಾರ್ಮಿಕ ಕ್ಷೇತ್ರಗಳು ಬಂದ್ ಮಾಡಲಾಗುತ್ತಿದೆ. ಸಲೂನ್, ಬ್ಯೂಟಿ ಪಾರ್ಲರ್ ಗೆ ಅವಕಾಶ ನೀಡಲಾಗಿದೆ.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…