ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಹೊಸ ಮಾರ್ಗಸೂಚಿಯನ್ನು ರಾಜ್ಯ ಸರಕಾರ ಬಿಡುಗಡೆಗೊಳಿಸಿದೆ. ರಾಜ್ಯಾದ್ಯಂತ ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ವೀಕ್ ಎಂಡ್ ಕರ್ಪ್ಯೂ ಜಾರಿಗೊಳಿಸಿ ಆದೇಶಿಸಿದೆ. ಈ ಮೂಲಕ ಹೊಸ ಮಾರ್ಗಸೂಚಿಯಲ್ಲಿ 14 ದಿನಗಳ ವರೆಗೆ ವೀಕ್ ಎಂಡ್ ಕರ್ಪ್ಯೂ ಜಾರಿಗೊಳಿಸಿ ಆದೇಶಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿದ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು, ನಾಳೆಯಿಂದ ಮೇ.4 ರವರೆಗೆ ಜಾರಿಗೆ ಬರುವಂತೆ 14 ದಿನಗಳ ಕಾಲ ರಾಜ್ಯಾದ್ಯಂತ ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ವೀಕ್ ಎಂಡ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಬಾರ್ ಮತ್ತು ರೆಸ್ಟೋರೆಂಟ್ ಬಂದ್ ಮಾಡಲಾಗಿದೆ. ಪಾರ್ಸಲ್ ಗೆ ಅವಕಾಶ ನೀಡಲಾಗಿದೆ ಎಂದರು. ಮದುವೆಗೆ 50 ಜನರಿಗೆ, ಅಂತ್ಯಕ್ರಿಯೆಗೆ 20 ಜನರಿಗೆ ಮಾತ್ರವೇ ಅವಕಾಶ ನೀಡಲಾಗಿದೆ. ಸಿನಿಮಾ ಹಾಲ್, ಸ್ವಿಮ್ಮಿಂಗ್ ಫೂಲ್, ಮಾರ್ಕೆಟ್ ಬಂದ್ ಮಾಡಲಾಗುತ್ತಿದೆ. ಶಾಲಾ-ಕಾಲೇಜು ಮುಚ್ಚಲಾಗುತ್ತಿದೆ. ರಾತ್ರಿ ಪಾಳಿಯಲ್ಲಿ ಕಾರ್ಖಾನೆಗಳಲ್ಲಿ ಕೆಲಸ ಮಾಡಲು ಅವಕಾಶ ನೀಡಲಾಗಿದೆ ಎಂದರು. ರಾತ್ರಿ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದ್ದು ಎಲ್ಲಾ ಧಾರ್ಮಿಕ ಕ್ಷೇತ್ರಗಳು ಬಂದ್ ಮಾಡಲಾಗುತ್ತಿದೆ. ಸಲೂನ್, ಬ್ಯೂಟಿ ಪಾರ್ಲರ್ ಗೆ ಅವಕಾಶ ನೀಡಲಾಗಿದೆ.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…