ದೇಶದಲ್ಲಿ ಲಾಕ್ಡೌನ್‌ ಕಟ್ಟಕಡೆಯ ಆಯ್ಕೆ | ಶ್ರಮಿಕರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಲು ರಾಜ್ಯಗಳಿಗೆ ಪ್ರಧಾನಿ ನರೇಂದ್ರ ಮೋದಿ ಮನವಿ |

April 20, 2021
9:22 PM

ಕೊರೋನಾ ನಿಯಂತ್ರಣಕ್ಕೆ ದೇಶದಲ್ಲಿ ಮತ್ತೆ ಲಾಕ್ಡೌ ನ್ ಅಗತ್ಯವಿಲ್ಲ. ಆದರೆ ದೇಶವಾಸಿಗಳೆಲ್ಲಾ ಸಾಕಷ್ಟು ಮುಂಜಾಗ್ರತೆ ವಹಿಸಿಕೊಳ್ಳಲೇಬೇಕಾದ ಅನಿವಾರ್ಯತೆ ಇದೆ. ಲಾಕ್ಡೌನ್‌ ಕೊನೆಯ ಆಯ್ಕೆಯಷ್ಟೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಮಂಗಳವಾರ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಸದ್ಯ ಲಾಕ್ಡೌನ್ ಮಾಡುವುದಿಲ್ಲ, ಆದರೆ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವುದು  ಹಾಗೂ ಜನರು ಯಾರೂ ಮನೆಯಿಂದ ಹೊರಗಡೆ ಅನಗತ್ಯವಾಗಿ ಓಡಾಡಬೇಡಿ  ಎಂದು ಮತ್ತೊಮ್ಮೆ ಮನವಿ ಮಾಡುತ್ತೇನೆ, ಮೈಕ್ರೋ ಕಂಟೋನ್ಮೆಂಟ್ ವಲಯಗಳ ಮೇಲೆ ಗಮನ ಹರಿಸಿ ಎಂದರು. ಎಲ್ಲಾ ರಾಜ್ಯಗಳೂ ಕೂಡಾ ಶ್ರಮಿಕರ ಹಿತ ಕಾಯ್ದುಕೊಂಡು ವಲಸೆ ಸಮಸ್ಯೆಯಾಗದಂತೆ ನೋಡಿಕೊಳ್ಳುವಂತೆ ರಾಜ್ಯಗಳಲ್ಲಿ ಮನವಿ ಮಾಡಿದ ಪ್ರಧಾನಿಗಳಿ , ಕಾರ್ಮಿಕರು ಸೇರಿದಂತೆ ಯಾರೂ ಗುಳೆ ಹೋಗದಂತೆ ಮೋದಿ ಮನವಿ ಮಾಡಿದರು. ಎಲ್ಲಾ ರಾಜ್ಯಗಳೂ ಈ ನಿಟ್ಟಿನಲ್ಲಿ  ಗಮನಹರಿಸಬೇಕು, ಯಾವುದೇ ಉದ್ಯಮಗಳು ಬಂದ್‌ ಆಗಲಾರದು ಎಂದರು.

ಕೊರೋನಾ ವಿರುದ್ಧ ದೇಶ ಮತ್ತೊಮ್ಮೆ ಹೋರಾಟ ನಡೆಸಬೇಕಿದೆ. ಎರಡನೇ ಅಲೆ ರಭಸವಾಗಿ ಅಪ್ಪಳಿಸಿದೆ, ಯಾರೂ ಧೈರ್ಯಗೆಡುವ ಅಗತ್ಯವಿಲ್ಲ. ದೇಶದ ಎಲ್ಲಾ ವೈದ್ಯರೂ ಈ ಬಾರಿ ಸೂಕ್ತ ಚಿಕಿತ್ಸೆ ನೀಡಲು ಸಿದ್ಧರಾಗಿದ್ದಾರೆ. ಆಮ್ಲಜನಕದ ಕೊರತೆಯಾಗದಂತೆ ಮುಂಜಾಗ್ರತೆ ವಹಿಸಲಾಗಿದೆ ಎಂದರು.ದೇಶದಲ್ಲಿ ಲಸಿಕೆ ಉತ್ಪಾದನೆ ಹೆಚ್ಚಾಗಿದೆ. ಇದುವರೆಗೂ 12 ಕೋಟಿ ಮಂದಿಗೆ ಲಸಿಕೆ ನೀಡಿದ್ದೇವೆ. ಹದಿನೆಂಟು ವರ್ಷಮೇಲ್ಪಟ್ಟವರಿಗೆ ಮೇ 1ರಿಂದ ಲಸಿಕೆಗಳನ್ನು ನೀಡಲಾಗುತ್ತಿದೆ ಎಂದು ಹೇಳಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
10:48 PM
by: ದ ರೂರಲ್ ಮಿರರ್.ಕಾಂ
ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ
August 3, 2026
10:24 PM
by: ದ ರೂರಲ್ ಮಿರರ್.ಕಾಂ
ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ
August 3, 2026
9:25 PM
by: ದ ರೂರಲ್ ಮಿರರ್.ಕಾಂ
ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ
August 3, 2026
8:43 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror