ಕೊರೋನಾ ನಿಯಂತ್ರಣಕ್ಕೆ ದೇಶದಲ್ಲಿ ಮತ್ತೆ ಲಾಕ್ಡೌ ನ್ ಅಗತ್ಯವಿಲ್ಲ. ಆದರೆ ದೇಶವಾಸಿಗಳೆಲ್ಲಾ ಸಾಕಷ್ಟು ಮುಂಜಾಗ್ರತೆ ವಹಿಸಿಕೊಳ್ಳಲೇಬೇಕಾದ ಅನಿವಾರ್ಯತೆ ಇದೆ. ಲಾಕ್ಡೌನ್ ಕೊನೆಯ ಆಯ್ಕೆಯಷ್ಟೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮಂಗಳವಾರ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಸದ್ಯ ಲಾಕ್ಡೌನ್ ಮಾಡುವುದಿಲ್ಲ, ಆದರೆ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವುದು ಹಾಗೂ ಜನರು ಯಾರೂ ಮನೆಯಿಂದ ಹೊರಗಡೆ ಅನಗತ್ಯವಾಗಿ ಓಡಾಡಬೇಡಿ ಎಂದು ಮತ್ತೊಮ್ಮೆ ಮನವಿ ಮಾಡುತ್ತೇನೆ, ಮೈಕ್ರೋ ಕಂಟೋನ್ಮೆಂಟ್ ವಲಯಗಳ ಮೇಲೆ ಗಮನ ಹರಿಸಿ ಎಂದರು. ಎಲ್ಲಾ ರಾಜ್ಯಗಳೂ ಕೂಡಾ ಶ್ರಮಿಕರ ಹಿತ ಕಾಯ್ದುಕೊಂಡು ವಲಸೆ ಸಮಸ್ಯೆಯಾಗದಂತೆ ನೋಡಿಕೊಳ್ಳುವಂತೆ ರಾಜ್ಯಗಳಲ್ಲಿ ಮನವಿ ಮಾಡಿದ ಪ್ರಧಾನಿಗಳಿ , ಕಾರ್ಮಿಕರು ಸೇರಿದಂತೆ ಯಾರೂ ಗುಳೆ ಹೋಗದಂತೆ ಮೋದಿ ಮನವಿ ಮಾಡಿದರು. ಎಲ್ಲಾ ರಾಜ್ಯಗಳೂ ಈ ನಿಟ್ಟಿನಲ್ಲಿ ಗಮನಹರಿಸಬೇಕು, ಯಾವುದೇ ಉದ್ಯಮಗಳು ಬಂದ್ ಆಗಲಾರದು ಎಂದರು.
ಕೊರೋನಾ ವಿರುದ್ಧ ದೇಶ ಮತ್ತೊಮ್ಮೆ ಹೋರಾಟ ನಡೆಸಬೇಕಿದೆ. ಎರಡನೇ ಅಲೆ ರಭಸವಾಗಿ ಅಪ್ಪಳಿಸಿದೆ, ಯಾರೂ ಧೈರ್ಯಗೆಡುವ ಅಗತ್ಯವಿಲ್ಲ. ದೇಶದ ಎಲ್ಲಾ ವೈದ್ಯರೂ ಈ ಬಾರಿ ಸೂಕ್ತ ಚಿಕಿತ್ಸೆ ನೀಡಲು ಸಿದ್ಧರಾಗಿದ್ದಾರೆ. ಆಮ್ಲಜನಕದ ಕೊರತೆಯಾಗದಂತೆ ಮುಂಜಾಗ್ರತೆ ವಹಿಸಲಾಗಿದೆ ಎಂದರು.ದೇಶದಲ್ಲಿ ಲಸಿಕೆ ಉತ್ಪಾದನೆ ಹೆಚ್ಚಾಗಿದೆ. ಇದುವರೆಗೂ 12 ಕೋಟಿ ಮಂದಿಗೆ ಲಸಿಕೆ ನೀಡಿದ್ದೇವೆ. ಹದಿನೆಂಟು ವರ್ಷಮೇಲ್ಪಟ್ಟವರಿಗೆ ಮೇ 1ರಿಂದ ಲಸಿಕೆಗಳನ್ನು ನೀಡಲಾಗುತ್ತಿದೆ ಎಂದು ಹೇಳಿದರು.
ಮಂಗಳೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿ ಕಟ್ಟಡ…
ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳಿಗೆ ಪೋಡಿ ದುರಸ್ತಿ ಮಾಡಲಾಗುತ್ತಿದೆ.…
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ.…
ಅಕ್ವಡಕ್ಟ್ ಇಂಜಿನಿಯರಿಂಗ್ ತಂತ್ರಜ್ಞಾನದ ಮೂಲಕ ಆರೋಗ್ಯ, ಸುರಕ್ಷತೆ, ಪರಿಸರ ಸ್ನೇಹಿ ಮಾದರಿಯಲ್ಲಿ ಎತ್ತಿನಹೊಳೆ…
ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮವಾಗಬೇಕಿದ್ದು, ಇದು ಅತ್ಯಂತ ಅವಶ್ಯಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೋಲಾರದಲ್ಲಿ ಮಾವು ಬೆಳೆಗೆ ಬೆಲೆ ಇಲ್ಲದೆ ಕುಸಿತ ಕಂಡಿರುವ ಹಿನ್ನೆಲೆಯಲ್ಲಿ ಬೆಳೆಗಾರರು ತೀವ್ರ…