ಕೊರೋನಾ ನಿಯಂತ್ರಣಕ್ಕೆ ದೇಶದಲ್ಲಿ ಮತ್ತೆ ಲಾಕ್ಡೌ ನ್ ಅಗತ್ಯವಿಲ್ಲ. ಆದರೆ ದೇಶವಾಸಿಗಳೆಲ್ಲಾ ಸಾಕಷ್ಟು ಮುಂಜಾಗ್ರತೆ ವಹಿಸಿಕೊಳ್ಳಲೇಬೇಕಾದ ಅನಿವಾರ್ಯತೆ ಇದೆ. ಲಾಕ್ಡೌನ್ ಕೊನೆಯ ಆಯ್ಕೆಯಷ್ಟೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮಂಗಳವಾರ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಸದ್ಯ ಲಾಕ್ಡೌನ್ ಮಾಡುವುದಿಲ್ಲ, ಆದರೆ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವುದು ಹಾಗೂ ಜನರು ಯಾರೂ ಮನೆಯಿಂದ ಹೊರಗಡೆ ಅನಗತ್ಯವಾಗಿ ಓಡಾಡಬೇಡಿ ಎಂದು ಮತ್ತೊಮ್ಮೆ ಮನವಿ ಮಾಡುತ್ತೇನೆ, ಮೈಕ್ರೋ ಕಂಟೋನ್ಮೆಂಟ್ ವಲಯಗಳ ಮೇಲೆ ಗಮನ ಹರಿಸಿ ಎಂದರು. ಎಲ್ಲಾ ರಾಜ್ಯಗಳೂ ಕೂಡಾ ಶ್ರಮಿಕರ ಹಿತ ಕಾಯ್ದುಕೊಂಡು ವಲಸೆ ಸಮಸ್ಯೆಯಾಗದಂತೆ ನೋಡಿಕೊಳ್ಳುವಂತೆ ರಾಜ್ಯಗಳಲ್ಲಿ ಮನವಿ ಮಾಡಿದ ಪ್ರಧಾನಿಗಳಿ , ಕಾರ್ಮಿಕರು ಸೇರಿದಂತೆ ಯಾರೂ ಗುಳೆ ಹೋಗದಂತೆ ಮೋದಿ ಮನವಿ ಮಾಡಿದರು. ಎಲ್ಲಾ ರಾಜ್ಯಗಳೂ ಈ ನಿಟ್ಟಿನಲ್ಲಿ ಗಮನಹರಿಸಬೇಕು, ಯಾವುದೇ ಉದ್ಯಮಗಳು ಬಂದ್ ಆಗಲಾರದು ಎಂದರು.
ಕೊರೋನಾ ವಿರುದ್ಧ ದೇಶ ಮತ್ತೊಮ್ಮೆ ಹೋರಾಟ ನಡೆಸಬೇಕಿದೆ. ಎರಡನೇ ಅಲೆ ರಭಸವಾಗಿ ಅಪ್ಪಳಿಸಿದೆ, ಯಾರೂ ಧೈರ್ಯಗೆಡುವ ಅಗತ್ಯವಿಲ್ಲ. ದೇಶದ ಎಲ್ಲಾ ವೈದ್ಯರೂ ಈ ಬಾರಿ ಸೂಕ್ತ ಚಿಕಿತ್ಸೆ ನೀಡಲು ಸಿದ್ಧರಾಗಿದ್ದಾರೆ. ಆಮ್ಲಜನಕದ ಕೊರತೆಯಾಗದಂತೆ ಮುಂಜಾಗ್ರತೆ ವಹಿಸಲಾಗಿದೆ ಎಂದರು.ದೇಶದಲ್ಲಿ ಲಸಿಕೆ ಉತ್ಪಾದನೆ ಹೆಚ್ಚಾಗಿದೆ. ಇದುವರೆಗೂ 12 ಕೋಟಿ ಮಂದಿಗೆ ಲಸಿಕೆ ನೀಡಿದ್ದೇವೆ. ಹದಿನೆಂಟು ವರ್ಷಮೇಲ್ಪಟ್ಟವರಿಗೆ ಮೇ 1ರಿಂದ ಲಸಿಕೆಗಳನ್ನು ನೀಡಲಾಗುತ್ತಿದೆ ಎಂದು ಹೇಳಿದರು.
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…