ಕೊರೋನಾ ನಿಯಂತ್ರಣಕ್ಕೆ ದೇಶದಲ್ಲಿ ಮತ್ತೆ ಲಾಕ್ಡೌ ನ್ ಅಗತ್ಯವಿಲ್ಲ. ಆದರೆ ದೇಶವಾಸಿಗಳೆಲ್ಲಾ ಸಾಕಷ್ಟು ಮುಂಜಾಗ್ರತೆ ವಹಿಸಿಕೊಳ್ಳಲೇಬೇಕಾದ ಅನಿವಾರ್ಯತೆ ಇದೆ. ಲಾಕ್ಡೌನ್ ಕೊನೆಯ ಆಯ್ಕೆಯಷ್ಟೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮಂಗಳವಾರ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಸದ್ಯ ಲಾಕ್ಡೌನ್ ಮಾಡುವುದಿಲ್ಲ, ಆದರೆ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವುದು ಹಾಗೂ ಜನರು ಯಾರೂ ಮನೆಯಿಂದ ಹೊರಗಡೆ ಅನಗತ್ಯವಾಗಿ ಓಡಾಡಬೇಡಿ ಎಂದು ಮತ್ತೊಮ್ಮೆ ಮನವಿ ಮಾಡುತ್ತೇನೆ, ಮೈಕ್ರೋ ಕಂಟೋನ್ಮೆಂಟ್ ವಲಯಗಳ ಮೇಲೆ ಗಮನ ಹರಿಸಿ ಎಂದರು. ಎಲ್ಲಾ ರಾಜ್ಯಗಳೂ ಕೂಡಾ ಶ್ರಮಿಕರ ಹಿತ ಕಾಯ್ದುಕೊಂಡು ವಲಸೆ ಸಮಸ್ಯೆಯಾಗದಂತೆ ನೋಡಿಕೊಳ್ಳುವಂತೆ ರಾಜ್ಯಗಳಲ್ಲಿ ಮನವಿ ಮಾಡಿದ ಪ್ರಧಾನಿಗಳಿ , ಕಾರ್ಮಿಕರು ಸೇರಿದಂತೆ ಯಾರೂ ಗುಳೆ ಹೋಗದಂತೆ ಮೋದಿ ಮನವಿ ಮಾಡಿದರು. ಎಲ್ಲಾ ರಾಜ್ಯಗಳೂ ಈ ನಿಟ್ಟಿನಲ್ಲಿ ಗಮನಹರಿಸಬೇಕು, ಯಾವುದೇ ಉದ್ಯಮಗಳು ಬಂದ್ ಆಗಲಾರದು ಎಂದರು.
ಕೊರೋನಾ ವಿರುದ್ಧ ದೇಶ ಮತ್ತೊಮ್ಮೆ ಹೋರಾಟ ನಡೆಸಬೇಕಿದೆ. ಎರಡನೇ ಅಲೆ ರಭಸವಾಗಿ ಅಪ್ಪಳಿಸಿದೆ, ಯಾರೂ ಧೈರ್ಯಗೆಡುವ ಅಗತ್ಯವಿಲ್ಲ. ದೇಶದ ಎಲ್ಲಾ ವೈದ್ಯರೂ ಈ ಬಾರಿ ಸೂಕ್ತ ಚಿಕಿತ್ಸೆ ನೀಡಲು ಸಿದ್ಧರಾಗಿದ್ದಾರೆ. ಆಮ್ಲಜನಕದ ಕೊರತೆಯಾಗದಂತೆ ಮುಂಜಾಗ್ರತೆ ವಹಿಸಲಾಗಿದೆ ಎಂದರು.ದೇಶದಲ್ಲಿ ಲಸಿಕೆ ಉತ್ಪಾದನೆ ಹೆಚ್ಚಾಗಿದೆ. ಇದುವರೆಗೂ 12 ಕೋಟಿ ಮಂದಿಗೆ ಲಸಿಕೆ ನೀಡಿದ್ದೇವೆ. ಹದಿನೆಂಟು ವರ್ಷಮೇಲ್ಪಟ್ಟವರಿಗೆ ಮೇ 1ರಿಂದ ಲಸಿಕೆಗಳನ್ನು ನೀಡಲಾಗುತ್ತಿದೆ ಎಂದು ಹೇಳಿದರು.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…