ಕೊರೋನಾ ನಿಯಂತ್ರಣಕ್ಕೆ ದೇಶದಲ್ಲಿ ಮತ್ತೆ ಲಾಕ್ಡೌ ನ್ ಅಗತ್ಯವಿಲ್ಲ. ಆದರೆ ದೇಶವಾಸಿಗಳೆಲ್ಲಾ ಸಾಕಷ್ಟು ಮುಂಜಾಗ್ರತೆ ವಹಿಸಿಕೊಳ್ಳಲೇಬೇಕಾದ ಅನಿವಾರ್ಯತೆ ಇದೆ. ಲಾಕ್ಡೌನ್ ಕೊನೆಯ ಆಯ್ಕೆಯಷ್ಟೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮಂಗಳವಾರ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಸದ್ಯ ಲಾಕ್ಡೌನ್ ಮಾಡುವುದಿಲ್ಲ, ಆದರೆ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವುದು ಹಾಗೂ ಜನರು ಯಾರೂ ಮನೆಯಿಂದ ಹೊರಗಡೆ ಅನಗತ್ಯವಾಗಿ ಓಡಾಡಬೇಡಿ ಎಂದು ಮತ್ತೊಮ್ಮೆ ಮನವಿ ಮಾಡುತ್ತೇನೆ, ಮೈಕ್ರೋ ಕಂಟೋನ್ಮೆಂಟ್ ವಲಯಗಳ ಮೇಲೆ ಗಮನ ಹರಿಸಿ ಎಂದರು. ಎಲ್ಲಾ ರಾಜ್ಯಗಳೂ ಕೂಡಾ ಶ್ರಮಿಕರ ಹಿತ ಕಾಯ್ದುಕೊಂಡು ವಲಸೆ ಸಮಸ್ಯೆಯಾಗದಂತೆ ನೋಡಿಕೊಳ್ಳುವಂತೆ ರಾಜ್ಯಗಳಲ್ಲಿ ಮನವಿ ಮಾಡಿದ ಪ್ರಧಾನಿಗಳಿ , ಕಾರ್ಮಿಕರು ಸೇರಿದಂತೆ ಯಾರೂ ಗುಳೆ ಹೋಗದಂತೆ ಮೋದಿ ಮನವಿ ಮಾಡಿದರು. ಎಲ್ಲಾ ರಾಜ್ಯಗಳೂ ಈ ನಿಟ್ಟಿನಲ್ಲಿ ಗಮನಹರಿಸಬೇಕು, ಯಾವುದೇ ಉದ್ಯಮಗಳು ಬಂದ್ ಆಗಲಾರದು ಎಂದರು.
ಕೊರೋನಾ ವಿರುದ್ಧ ದೇಶ ಮತ್ತೊಮ್ಮೆ ಹೋರಾಟ ನಡೆಸಬೇಕಿದೆ. ಎರಡನೇ ಅಲೆ ರಭಸವಾಗಿ ಅಪ್ಪಳಿಸಿದೆ, ಯಾರೂ ಧೈರ್ಯಗೆಡುವ ಅಗತ್ಯವಿಲ್ಲ. ದೇಶದ ಎಲ್ಲಾ ವೈದ್ಯರೂ ಈ ಬಾರಿ ಸೂಕ್ತ ಚಿಕಿತ್ಸೆ ನೀಡಲು ಸಿದ್ಧರಾಗಿದ್ದಾರೆ. ಆಮ್ಲಜನಕದ ಕೊರತೆಯಾಗದಂತೆ ಮುಂಜಾಗ್ರತೆ ವಹಿಸಲಾಗಿದೆ ಎಂದರು.ದೇಶದಲ್ಲಿ ಲಸಿಕೆ ಉತ್ಪಾದನೆ ಹೆಚ್ಚಾಗಿದೆ. ಇದುವರೆಗೂ 12 ಕೋಟಿ ಮಂದಿಗೆ ಲಸಿಕೆ ನೀಡಿದ್ದೇವೆ. ಹದಿನೆಂಟು ವರ್ಷಮೇಲ್ಪಟ್ಟವರಿಗೆ ಮೇ 1ರಿಂದ ಲಸಿಕೆಗಳನ್ನು ನೀಡಲಾಗುತ್ತಿದೆ ಎಂದು ಹೇಳಿದರು.
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…