ಕೊರೋನಾ ನಿಯಂತ್ರಣಕ್ಕೆ ದೇಶದಲ್ಲಿ ಮತ್ತೆ ಲಾಕ್ಡೌ ನ್ ಅಗತ್ಯವಿಲ್ಲ. ಆದರೆ ದೇಶವಾಸಿಗಳೆಲ್ಲಾ ಸಾಕಷ್ಟು ಮುಂಜಾಗ್ರತೆ ವಹಿಸಿಕೊಳ್ಳಲೇಬೇಕಾದ ಅನಿವಾರ್ಯತೆ ಇದೆ. ಲಾಕ್ಡೌನ್ ಕೊನೆಯ ಆಯ್ಕೆಯಷ್ಟೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮಂಗಳವಾರ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಸದ್ಯ ಲಾಕ್ಡೌನ್ ಮಾಡುವುದಿಲ್ಲ, ಆದರೆ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವುದು ಹಾಗೂ ಜನರು ಯಾರೂ ಮನೆಯಿಂದ ಹೊರಗಡೆ ಅನಗತ್ಯವಾಗಿ ಓಡಾಡಬೇಡಿ ಎಂದು ಮತ್ತೊಮ್ಮೆ ಮನವಿ ಮಾಡುತ್ತೇನೆ, ಮೈಕ್ರೋ ಕಂಟೋನ್ಮೆಂಟ್ ವಲಯಗಳ ಮೇಲೆ ಗಮನ ಹರಿಸಿ ಎಂದರು. ಎಲ್ಲಾ ರಾಜ್ಯಗಳೂ ಕೂಡಾ ಶ್ರಮಿಕರ ಹಿತ ಕಾಯ್ದುಕೊಂಡು ವಲಸೆ ಸಮಸ್ಯೆಯಾಗದಂತೆ ನೋಡಿಕೊಳ್ಳುವಂತೆ ರಾಜ್ಯಗಳಲ್ಲಿ ಮನವಿ ಮಾಡಿದ ಪ್ರಧಾನಿಗಳಿ , ಕಾರ್ಮಿಕರು ಸೇರಿದಂತೆ ಯಾರೂ ಗುಳೆ ಹೋಗದಂತೆ ಮೋದಿ ಮನವಿ ಮಾಡಿದರು. ಎಲ್ಲಾ ರಾಜ್ಯಗಳೂ ಈ ನಿಟ್ಟಿನಲ್ಲಿ ಗಮನಹರಿಸಬೇಕು, ಯಾವುದೇ ಉದ್ಯಮಗಳು ಬಂದ್ ಆಗಲಾರದು ಎಂದರು.
ಕೊರೋನಾ ವಿರುದ್ಧ ದೇಶ ಮತ್ತೊಮ್ಮೆ ಹೋರಾಟ ನಡೆಸಬೇಕಿದೆ. ಎರಡನೇ ಅಲೆ ರಭಸವಾಗಿ ಅಪ್ಪಳಿಸಿದೆ, ಯಾರೂ ಧೈರ್ಯಗೆಡುವ ಅಗತ್ಯವಿಲ್ಲ. ದೇಶದ ಎಲ್ಲಾ ವೈದ್ಯರೂ ಈ ಬಾರಿ ಸೂಕ್ತ ಚಿಕಿತ್ಸೆ ನೀಡಲು ಸಿದ್ಧರಾಗಿದ್ದಾರೆ. ಆಮ್ಲಜನಕದ ಕೊರತೆಯಾಗದಂತೆ ಮುಂಜಾಗ್ರತೆ ವಹಿಸಲಾಗಿದೆ ಎಂದರು.ದೇಶದಲ್ಲಿ ಲಸಿಕೆ ಉತ್ಪಾದನೆ ಹೆಚ್ಚಾಗಿದೆ. ಇದುವರೆಗೂ 12 ಕೋಟಿ ಮಂದಿಗೆ ಲಸಿಕೆ ನೀಡಿದ್ದೇವೆ. ಹದಿನೆಂಟು ವರ್ಷಮೇಲ್ಪಟ್ಟವರಿಗೆ ಮೇ 1ರಿಂದ ಲಸಿಕೆಗಳನ್ನು ನೀಡಲಾಗುತ್ತಿದೆ ಎಂದು ಹೇಳಿದರು.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…