ಕೊರೋನಾ ಪ್ರಕರಣಗಳು ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಇನ್ನು ಮುಂದೆ ಮಾಸ್ಕ್ ಧರಿಸದೇ ಇದ್ದರೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಇದ್ದರೆ ಅಂತಹವರ ವಿರುದ್ಧ ಕ್ರಮಮ ಕೈಗೊಳ್ಳಲು ಹಾಗೂ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಸಚಿವ ಕೆ ಸುಧಾರಕರ್ ತಜ್ಞರೊಂದಿಗೆ ಮಾತುಕತೆ ನಡೆಸಿದ್ದಾರೆ.
ಕೊರೋನಾ ಮುಂಜಾಗ್ರತೆ ಬಗ್ಗೆ ರಾಜ್ಯ ಸರ್ಕಾರ ಜಾಗೃತಿ ಮೂಡಿಸಿದರೂ ಸಾರ್ವಜನಿಕರು ಸೂಚನೆಗಳನ್ನು ಪಾಲಿಸದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಹೀಗಾಗಿ ಕಠಿಣ ಕಾನೂನು ಜಾರಿಗೆ ತರುವುದು ಅನಿವಾರ್ಯವಾಗಿದೆ. ಕೋವಿಡ್ ಮಾರ್ಗಸೂಚಿ ಪಾಲಿಸದವರಿಗೆ ಕಠಿಣ ಶಿಕ್ಷೆ ಮತ್ತು ದಂಡವಿಧಿಸುವುದು ಅನಿವಾರ್ಯ ಎಂದು ಸುಧಾಕರ್ ಹೇಳಿದ್ದಾರೆ. ಮಾಸ್ಕ್ ಧರಿಸದ, ಸಾಮಾಜಿಕ ಅಂತರ ಕಾಯ್ದುಕೊಳ್ಳದ, ಸಭೆ – ಸಮಾರಂಭ ನೆಪದಲ್ಲಿ ಜನದಟ್ಟಣೆಗೆ ಅವಕಾಶ ಮಾಡಿಕೊಡುವವರ ವಿರುದ್ಧ ಕೂಡಾ ಕ್ರಮ ಕೈಗೊಳ್ಳುವ ಬಗ್ಗೆ ಮುಖ್ಯಮಂತ್ರಿಯವರ ಜೊತೆ ಚರ್ಚಿಸಿ ಒಂದೆರಡು ದಿನಗಳಲ್ಲಿ ಅಧಿಕೃತ ಆದೇಶ ಹೊರಡಿಸಲಾಗುತ್ತದೆ ಎಂದು ಸುಧಾಕರ್ ಹೇಳಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement