ರಾಜ್ಯದಲ್ಲಿ ಲಾಕ್ಡೌನ್ ವಿಸ್ತರಣೆ ಬಗ್ಗೆ ಮೇ.23 ರಂದು ನಿರ್ಧಾರ ಮಾಡಲಾಗುತ್ತದೆ. ಸದ್ಯ ಮೇ 24ರ ತನಕ ಲಾಕ್ಡೌನ್ ಜಾರಿಯಲ್ಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.
ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕೊರೋನಾ 2 ನೇ ಅಲೆ ಹರಡುವುದು ತಡೆಯಲು ಈಗಾಗಲೇ ಮೇ 10 ರಿಂದ 24ರ ತನಕ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಈ ಅವಧಿಯಲ್ಲಿ ಆರ್ಥಿಕ ನಷ್ಟ ಅನುಭವಿಸಿದ ಜನರಿಗಾಗಿ ಕರ್ನಾಟಕ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ ಎಂದು ತಿಳಿಸಿದರು. ಸುಮಾರು 1,250 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ಇದಾಗಿದ್ದು ಆಟೋ ಮತ್ತು ಟ್ಯಾಕ್ಸಿ ಚಾಲಕರು ಸೇರಿದಂತೆ ರಾಜ್ಯದ ಶ್ರಮಿಕರಿಗೆ, ಬಡವರಿಗೆ ಈ ಪ್ಯಾಕೇಜ್ ಲಭ್ಯವಾಗಲಿದೆ ಎಂದರು. ಹೂ ಬೆಳೆಗಾರರಿಗೆ ಪ್ರತಿ ಹೆಕ್ಟೇರ್ಗೆ 10 ಸಾವಿರ ರೂ. ಪರಿಹಾರ ನೀಡಲಾಗುವುದು. ಕಟ್ಟಡ ಕಾರ್ಮಿಕರಿಗೆ – 490 ಕೋಟಿ ರೂ. ಮೀಸಲಿಡಲಾಗಿದೆ. ಅಸಂಘಟಿತ ಕಾರ್ಮಿಕರಿಗೆ- 61 ಕೋಟಿ ರೂ, ರಸ್ತೆ ಬದಿ ವ್ಯಾಪಾರಸ್ಥರಿಗೆ 2 ಸಾವಿರ ರೂಪಾಯಿಯಂತೆ ಒಟ್ಟು 45 ಕೋಟಿ ಖರ್ಚು ಮಾಡಲಾಗಿದೆ. ಕಲಾವಿದರಿಗೆ, ಕಲಾತಂಡಗಳಿಗೆ 2,000 ರೂ., ಹಣ್ಣು, ತರಕಾರಿ ಬೆಳೆಗಾರರಿಗೆ 10 ಸಾವಿರ ರೂ. ಸಹಾಯ ಧನ, ಬಿಬಿಎಂಪಿ, ನಗರಾಭಿವೃದ್ಧಿ ಅಡಿಯಲ್ಲಿ ಇಂದಿರಾ ಕ್ಯಾಂಟೀನ್ನಲ್ಲಿ 6 ಲಕ್ಷ ಜನರಿಗೆ ಊಟ ನೀಡಲಾಗುತ್ತಿದೆ. ಇದಕ್ಕೆ 25 ಕೋಟಿ ಖರ್ಚು ಆಗುತ್ತಿದೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ.
ಸದ್ಯ ಲಾಕ್ಡೌನ್ ಘೋಷಣೆ ಇದ್ದು ಮೇ 23 ರಂದು ವಿಸ್ತರಣೆ ಬಗ್ಗೆ ತೀರ್ಮಾನವನ್ನು ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್ಶಿಪ್–2026ಕ್ಕೆ…
ಮ್ಯಾನ್ಮಾರ್ನಿಂದ ಕಳ್ಳಸಾಗಣೆ ಮಾಡಲಾಗಿದ್ದ ಸುಮಾರು 10 ಟನ್ ವಿದೇಶಿ ಅಡಿಕೆಯನ್ನು ಅಸ್ಸಾಂನ ರಂಗಿಯಾ…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದ್ದು,…
ಸಿರಿಧಾನ್ಯಗಳ ಬೇಡಿಕೆ ಹೆಚ್ಚಿದರೂ, ರೈತರಿಗೆ ಅದರ ಸಂಪೂರ್ಣ ಆರ್ಥಿಕ ಲಾಭ ಇನ್ನೂ ತಲುಪಿಲ್ಲ…
ಚಂಡಮಾರುತದ ಗಾಳಿಗೆ ಮುರಿಯದೆ ಬಾಗಿಕೊಂಡು ಉಳಿಯುವ ಮೊಹಿತ್ನಗರ ಅಡಿಕೆ ತಳಿಗೆ ಒಡಿಶಾ ಸೇರಿದಂತೆ…
ಭಾರೀ ಮಳೆಯ ಹಿನ್ನೆಲೆಯಲ್ಲಿ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ…